ಓದುಗರ ಪತ್ರ
ಬಜೆಟ್ ಪೂರ್ವ ಸಭೆಯಲ್ಲಿ ಪ್ರಸ್ತಾಪಗೊಂಡ ಹಸಿರು ಗೋಡೆ ಯೋಜನೆ ರಾಜ್ಯದ ಪರಿಸರ ರಕ್ಷಣೆಗೆ ಆಪದ್ಬಾಂಧವನಂತಿದೆ. ಉತ್ತರ ಕರ್ನಾಟಕದಲ್ಲಿ ಮರುಭೂಮೀಕರಣ ತಡೆಗಟ್ಟಲು ಈ ರಕ್ಷಣಾ ಕವಚ ಅನಿವಾರ್ಯ. ಈ ಬಾರಿಯ ಬಜೆಟ್ ಕೇವಲ ಅಂಕಿ-ಅಂಶಗಳಿಗೆ ಸೀಮಿತವಾಗದೆ, ಹವಾಮಾನ ವೈಪರೀತ್ಯ ಎದುರಿಸುವ ದೂರದೃಷ್ಟಿ ಹೊಂದಿರಬೇಕು.
ಇದರೊಂದಿಗೆ ಸರ್ಕಾರವು ಬೆಂಗಳೂರಿನಂತಹ ನಗರಗಳಲ್ಲಿ ನಗರ ಕಿರು ಅರಣ್ಯ ಬೆಳೆಸಲು ಪ್ರೋತ್ಸಾಹ ನೀಡಬೇಕು. ಕೃಷಿಯಲ್ಲಿ ಇಂಗಾಲದ ಮರುಬಳಕೆಗೆ ಒತ್ತು ನೀಡುವ ರೈತರಿಗೆ ಕಾರ್ಬನ್ ಕ್ರೆಡಿಟ್ ಮಾದರಿಯ ವಿಶೇಷ ಸಬ್ಸಿಡಿ ಘೋಷಿಸುವುದು ಪೂರಕವಾಗಿದೆ. ಹಾಗೆಯೇ, ಕೆರೆಗಳ ಪುನಶ್ಚೇತನದ ಜೊತೆಗೆ ಕರಾವಳಿ ಭಾಗದ ಪರಿಸರ ಸಮತೋಲನ ಪಾಡಲು ನೀಲಿ ಬಜೆಟ್ ಪರಿಕಲ್ಪನೆ ತರುವುದು ಇಂದಿನ ತುರ್ತು ಅಗತ್ಯವಾಗಿದೆ. ಪರಿಸರ ಸಂರಕ್ಷಣೆಯು ಆರ್ಥಿಕ ಅಭಿವೃದ್ಧಿಯ ಭಾಗವಾದಾಗ ಮಾತ್ರ ರಾಜ್ಯವು ಸುಸ್ಥಿರ ಪ್ರಗತಿ ಸಾಧಿಸಲು ಸಾಧ್ಯ.
– ಡಾ. ಎಚ್.ಕೆ. ವಿಜಯಕುಮಾರ್, ಬೆಂಗಳೂರು
ಬೆಂಗಳೂರು: ಬುದ್ಧ ಪೂರ್ಣಿಮೆಯ ಹಿನ್ನೆಲೆಯಲ್ಲಿ ನಾಳೆ(ಮೇ.1ರಂದು) ಬೆಂಗಳೂರು ನಗರದಾದ್ಯಂತ ಮಾಂಸ ಮಾರಾವನ್ನು ನಿಷೇಧಿಸಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಆದೇಶ ಹೊರಡಿಸಿದೆ.…
ಮೈಸೂರು: ಸಣ್ಣ ವಿಚಾರಕ್ಕೆ ಆರಂಭವಾದ ಕೌಟುಂಬಿಕ ಕಲಹವೊಂದು ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಮೈಸೂರಿನ ಹಳೆ ಕೆಸರೆ ಗ್ರಾಮದಲ್ಲಿ ನಡೆದಿದೆ. ಕೆಲಸ…
ವಾಷಿಂಗ್ಟನ್: ಅಮೇರಿಕಾ ಮತ್ತು ಇರಾನ್ ನಡುವಿನ ಮಿಲಿಟರಿ ಸಂಘರ್ಷ ಈಗ ನಿರ್ಣಾಯಕ ಘಟ್ಟಕ್ಕೆ ಬಂದು ತಲುಪಿದೆ. ಅಮೇರಿಕಾ ಅಧ್ಯಕ್ಷ ಡೊನಾಲ್ಡ್…
ಬೆಂಗಳೂರು: ರಾಜ್ಯದಲ್ಲಿ ಮೂರು ದಿನಗಳ ಕಾಲ ಭರ್ಜರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೇ.1ರಂದು ರಾಯಚೂರು, ಕೊಪ್ಪಳ,…
ಚಾಮರಾಜನಗರ: ತಾಲ್ಲೂಕಿನ ಯಾಲಕ್ಕೂರು ಹಾಗೂ ಸುತ್ತಮುತ್ತಲಿನ ಆರು ಗ್ರಾಮಗಳಿಗೆ ಸಾರಿಗೆ ಬಸ್ಸೇ ಇಲ್ಲ ಎಂದು ‘ಆಂದೋಲನ ಪತ್ರಿಕೆ’ಯಲ್ಲಿ ಈಚೆಗೆ ಪ್ರಕಟವಾಗಿದ್ದ…
ಬಿಸಿಲಲ್ಲೋ ಅಣ್ಣ ಇದು ಬರಿ ಬಿಸಿಲಲ್ಲೋ ! ಯಾರು ಹೆಸರಿಟ್ಟರೋ? ಇದಕ್ಕೆ ‘ನಿಲ್ಲೋ ಎಲ್ಲೋ’ ನಿಂತಲ್ಲಿ ನಿಲ್ಲಲು, ಕುಂತಲ್ಲಿ ಕೂರಲು…