Andolana originals

ಓದುಗರ ಪತ್ರ: ಡೇಟಾ ತೆರಿಗೆ ಎಂಬ ಹೊರೆ

ಮೊಬೈಲ್ ಡೇಟಾ ಬಳಕೆಯ ಮೇಲೆ ಪ್ರತಿ ಜಿಬಿಗೆ  ತೆರಿಗೆ ವಿಧಿಸುವ ಸರ್ಕಾರದ ಪ್ರಸ್ತಾವನೆ ಸಾಮಾನ್ಯ ಜನರ ಜೇಬಿಗೆ ಕತ್ತರಿ ಹಾಕುವ ನಿರ್ಧಾರವಾಗಿದೆ. ಈಗಾಗಲೇ ಟೆಲಿಕಾಂ ಸೇವೆಗಳ ಮೇಲೆ ಶೇ. ೧೮ರಷ್ಟು ಜಿಎಸ್‌ಟಿ ವಿಧಿಸಲಾಗುತ್ತಿದೆ. ಇದರ ಮೇಲೆ ಹೆಚ್ಚುವರಿ ತೆರಿಗೆ ವಿಧಿಸುವುದು ಗ್ರಾಹಕರಿಗೆ ಗಾಯದ ಮೇಲೆ ಬರೆ ಎಳೆದಂತಾಗುತ್ತದೆ.

ಭಾರತದಲ್ಲಿ ತಿಂಗಳಿಗೆ ಒಬ್ಬ ಸರಾಸರಿ ಬಳಕೆದಾರ ಸುಮಾರು ೨೦ ಜಿಬಿ ಡೇಟಾ ಬಳಸುತ್ತಾನೆ. ಈ ಹೊಸ ತೆರಿಗೆ ಜರಿಯಾದರೆ ಪ್ರತಿ ಕುಟುಂಬದ ಮಾಸಿಕ ವೆಚ್ಚ ಗಣನೀಯವಾಗಿ ಏರಲಿದೆ. ಸರ್ಕಾರಕ್ಕೆ ವಾರ್ಷಿಕ ೨೨,೯೦೦ ಕೋಟಿ ರೂ. ಆದಾಯ ಬರಬಹುದು, ಆದರೆ ಇದು ಡಿಜಿಟಲ್ ಶಿಕ್ಷಣ ಪಡೆಯುವ ವಿದಾರ್ಥಿಗಳು ಮತ್ತು ಸಣ್ಣ ವಾಪಾರಿಗಳ ಮೇಲೆ ಬೀರಲಿರುವ ದುಷರಿಣ್ಪಾಮ  ಅಗಾಧವಾದುದು. ಜಗತ್ತಿನ ಅತಿ ಕಡಿಮೆ ದರದ ಡೇಟಾ ಹೊಂದಿರುವ ನಮ್ಮ ದೇಶದಲ್ಲಿ ಇಂತಹ ನಿರ್ಧಾರಗಳು ಡಿಜಿಟಲ್ ಒಳಗೊಳ್ಳುವಿಕೆಗೆ ಅಡ್ಡಿಯಾಗಬಹುದು. ಸರ್ಕಾರವು ಕೇವಲ ಆದಾಯದ ಕಡೆಗೆ ಗಮನ ಹರಿಸದೆ ಬಡ ಮತ್ತು ಮಧಮ ವರ್ಗದ ಜನರ ಹಿತದೃಷ್ಟಿಯಿಂದ ಈ ಪ್ರಸ್ತಾವನೆಯನ್ನು ಕೈಬಿಡಬೇಕು.

ಡಾ.ಎಚ್.ಕೆ. ವಿಜಯಕುಮಾರ  ಮೈಸೂರು

ಆಂದೋಲನ ಡೆಸ್ಕ್

Recent Posts

ನಂಜನಗೂಡು | ಲೋಕಾ ಬಲೆಗೆ ಬಿದ್ದ ಸರ್ವೆಯರ್‌

ನಂಜನಗೂಡು : ಜಮೀನಿನ ಪೋಡಿ ಹಾಗೂ ದುರಸ್ತಿಪಡಿಸಲು ಲಂಚ ಪಡೆಯುತ್ತಿದ್ದ ಸರ್ವೆಯರ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ವರದಿಯಾಗಿದೆ. ತಾಲ್ಲೂಕಿನ…

58 seconds ago

ಅನೈತಿಕ ಸಂಬಂಧದ ಶಂಕೆ : ರಾಡ್‌ನಿಂದ ಹೊಡೆದು ಪತ್ನಿ ಕೊಂದ ಪತಿ

ಶ್ರೀರಂಗಪಟ್ಟಣ : ಅನೈತಿಕ ಸಂಬಂಧದ ಶಂಕೆಯಿಂದ ಪತಿಯೇ ಪತ್ನಿಯನ್ನು ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಆಲಗೂಡು ಗ್ರಾಮದಲ್ಲಿ ನಡೆದಿದೆ. ಗ್ರಾಮದ…

1 hour ago

ರಾಮನಗರ: ಕಲ್ಲು ಕ್ವಾರಿಯಲ್ಲಿ ದುರಂತ: ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವು

ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…

8 hours ago

ಕೊಡಗಿನಲ್ಲಿ ಸಾಧಾರಣ ಮಳೆ: ಹಾರಂಗಿ ಜಲಾಶಯದ ಒಳಹರಿವು ಹೆಚ್ಚಳ

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ…

8 hours ago

ಓದುಗರ ಪತ್ರ: ಮುತ್ತತ್ತಿ ನದಿ ಬಳಿ ಪೊಲೀಸರನ್ನು ನಿಯೋಜಿಸಿ

ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…

13 hours ago

ಓದುಗರ ಪತ್ರ: ಚಪ್ಪಲಿ ಎಸೆತ ಪ್ರಕರಣ ಎಳೆದಾಡುವುದು ಬೇಡ

ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…

13 hours ago