ನಾಡಹಬ್ಬ ಮೈಸೂರು ದಸರಾಕ್ಕೆ ಸಿದ್ಧತೆಗಳು ಭರದಿಂದ ಸಾಗಿವೆ. ನಗರದ ಪ್ರಮುಖ ರಸ್ತೆಗಳಲ್ಲಿ ದೀಪಾಲಂಕಾರ, ಬಸ್ ತಂಗುದಾಣ ಗಳು, ಸರ್ಕಾರಿ ಕಚೇರಿಗಳು ಸೇರಿದಂತೆ ಪ್ರಮುಖ ಸ್ಥಳಗಳಿಗೆ ಸುಣ್ಣ, ಬಣ್ಣ ಬಳಿದು ಸಿಂಗರಿಸಲಾಗಿದೆ.
ಸಿಎಂ ಸೂಚನೆಯ ಮೇರೆಗೆ ನಗರದ ಪ್ರಮುಖ ರಸ್ತೆಗಳನ್ನು ದುರಸ್ತಿ ಮಾಡುವುದರೊಂದಿಗೆ ಡಾಂಬರೀಕರಣ ಮಾಡಲಾಗಿದೆ. ನಗರದಲ್ಲಿ ಎಲ್ಲೆಂದರಲ್ಲಿ ಬಿದ್ದಿದ್ದ ಕಸವನ್ನು ತೆರವುಗೊಳಿಸಲಾಗಿದ್ದು, ಫುಟ್ಪಾತ್ ಮೊದಲಾದ ಸ್ಥಳಗಳನ್ನು ದುರಸ್ತಿ ಪಡಿಸಲಾಗುತ್ತಿದ್ದು, ಇಡೀ ನಗರವೇ ನವ ವಧುವಿನಂತೆ ಸಿಂಗಾರಗೊಳ್ಳುತ್ತಿದೆ.
ಇದನ್ನೂ ಓದಿ: ‘ಯಾವ ನಿಲ್ದಾಣವೂ ಅಂತಿಮವಾಗಿರಬಾರದು ಎನ್ನುವ ನಿಲ್ದಾಣಕ್ಕೆ ಬಂದಿದ್ದೇನೆ!’
ಹೊರ ಜಿಲ್ಲೆ, ರಾಜ್ಯ ಹಾಗೂ ವಿದೇಶಗಳಿಂದ ಬರುವ ಪ್ರವಾಸಿಗರು ನಗರದ ಸೌಂದರ್ಯವನ್ನು ವರ್ಣಿಸುವಂತಾಗಿದೆ. ಆದರೆ ಇದು ದಸರಾ ಸಂಭ್ರಮ ಮುಗಿಯುವ ವರೆಗೆ ಮಾತ್ರ ಎಂಬುದು ವಿಪರ್ಯಾಸದ ಸಂಗತಿಯಾಗಿದೆ.
ಸಾಂಸ್ಕೃತಿಕ ನಗರಿ ಮೈಸೂರಿಗೆ ವರ್ಷವಿಡೀ ದೇಶ, ವಿದೇಶಗಳಿಂದ ಪ್ರವಾಸಿಗರು ಆಗಮಿಸುತ್ತಾರೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮೈಸೂರು ನಗರದ ರಸ್ತೆಗಳನ್ನು ದುರಸ್ತಿ ಮಾಡಿಸುವುದರೊಂದಿಗೆ ಅಗತ್ಯ ಮೂಲ ಸೌಕರ್ಯಗಳನ್ನು ಕಲ್ಪಿಸಲು ಕ್ರಮ ಕೈಗೊಳ್ಳಬೇಕು. ಆಗ ಸಾಂಸ್ಕೃತಿಕ ರಾಜಧಾನಿ ಇನ್ನಷ್ಟು ಸುಂದರವಾಗುತ್ತದೆ.
-ಶರತ್, ಮೈಸೂರು
ಥೈಲ್ಯಾಂಡ್ನ ಈಶಾನ್ಯದಲ್ಲಿ ಕ್ರೇನ್ ರೈಲಿನ ಮೇಲೆ ಬಿದ್ದು ಹಳಿತಪ್ಪಿದ ಪರಿಣಾಮ ಕನಿಷ್ಠ 22 ಮಂದಿ ಸಾವನ್ನಪ್ಪಿ ಹಲವರು ಗಾಯಗೊಂಡಿದ್ದಾರೆ ಎಂದು…
ಹಾಸನ: ಅಂಗಡಿಯಲ್ಲಿ ವ್ಯಾಪಾರ ಮಾಡುವಾಗಲೇ ಕುಸಿದು ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ ಅರಸೀಕೆರೆ ಪಟ್ಟಣದಲ್ಲಿ ನಡೆದಿದೆ. ಪ್ರವೀಣ್(45)…
ಮಂಡ್ಯ: ಮಹಾರಾಷ್ಟ್ರ ರಾಜ್ಯದ ಚಾಕೋರು ಜಿಲ್ಲೆಯ ಲಾತೂರ್ನ ಬಿಎಸ್ಎಫ್ ತರಬೇತಿ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಂಡ್ಯದ ಯೋಧ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.…
ಬೆಂಗಳೂರು: ಪ್ರಯತ್ನ ವಿಫಲವಾದರೂ ಪ್ರಾರ್ಥನೆ ವಿಫಲ ಆಗಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಟ್ವೀಟ್ ಮಾಡಿದ್ದಾರೆ. ನಿನ್ನೆ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ…
ಪಟ್ಟಣಂತಿಟ್ಟ: ಶ್ರೀ ಕ್ಷೇತ್ರ ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಲಯದ ವಾರ್ಷಿಕ ಮಕರ ಜ್ಯೋತಿ ಇಂದು ದರ್ಶನವಾಗಲಿದೆ. ಇಂದು ಸಂಜೆ ಮಕರ ಜ್ಯೋತ…
ನಂಜನಗೂಡು: ನಾಳೆಯಿಂದ ಜನವರಿ.20ರವರೆಗೆ ಸುತ್ತೂರು ಜಾತ್ರಾ ಮಹೋತ್ಸವ ನಡೆಯಲಿದ್ದು, ಇಂದು ಮಹಾದಾಸೋಹಕ್ಕೆ ಅಧಿಕೃತ ಚಾಲನೆ ದೊರೆಯಿತು. ಮೈಸೂರು ಜಿಲ್ಲೆ ನಂಜನಗೂಡು…