ನಾಡಹಬ್ಬ ಮೈಸೂರು ದಸರಾಕ್ಕೆ ಸಿದ್ಧತೆಗಳು ಭರದಿಂದ ಸಾಗಿವೆ. ನಗರದ ಪ್ರಮುಖ ರಸ್ತೆಗಳಲ್ಲಿ ದೀಪಾಲಂಕಾರ, ಬಸ್ ತಂಗುದಾಣ ಗಳು, ಸರ್ಕಾರಿ ಕಚೇರಿಗಳು ಸೇರಿದಂತೆ ಪ್ರಮುಖ ಸ್ಥಳಗಳಿಗೆ ಸುಣ್ಣ, ಬಣ್ಣ ಬಳಿದು ಸಿಂಗರಿಸಲಾಗಿದೆ.
ಸಿಎಂ ಸೂಚನೆಯ ಮೇರೆಗೆ ನಗರದ ಪ್ರಮುಖ ರಸ್ತೆಗಳನ್ನು ದುರಸ್ತಿ ಮಾಡುವುದರೊಂದಿಗೆ ಡಾಂಬರೀಕರಣ ಮಾಡಲಾಗಿದೆ. ನಗರದಲ್ಲಿ ಎಲ್ಲೆಂದರಲ್ಲಿ ಬಿದ್ದಿದ್ದ ಕಸವನ್ನು ತೆರವುಗೊಳಿಸಲಾಗಿದ್ದು, ಫುಟ್ಪಾತ್ ಮೊದಲಾದ ಸ್ಥಳಗಳನ್ನು ದುರಸ್ತಿ ಪಡಿಸಲಾಗುತ್ತಿದ್ದು, ಇಡೀ ನಗರವೇ ನವ ವಧುವಿನಂತೆ ಸಿಂಗಾರಗೊಳ್ಳುತ್ತಿದೆ.
ಇದನ್ನೂ ಓದಿ: ‘ಯಾವ ನಿಲ್ದಾಣವೂ ಅಂತಿಮವಾಗಿರಬಾರದು ಎನ್ನುವ ನಿಲ್ದಾಣಕ್ಕೆ ಬಂದಿದ್ದೇನೆ!’
ಹೊರ ಜಿಲ್ಲೆ, ರಾಜ್ಯ ಹಾಗೂ ವಿದೇಶಗಳಿಂದ ಬರುವ ಪ್ರವಾಸಿಗರು ನಗರದ ಸೌಂದರ್ಯವನ್ನು ವರ್ಣಿಸುವಂತಾಗಿದೆ. ಆದರೆ ಇದು ದಸರಾ ಸಂಭ್ರಮ ಮುಗಿಯುವ ವರೆಗೆ ಮಾತ್ರ ಎಂಬುದು ವಿಪರ್ಯಾಸದ ಸಂಗತಿಯಾಗಿದೆ.
ಸಾಂಸ್ಕೃತಿಕ ನಗರಿ ಮೈಸೂರಿಗೆ ವರ್ಷವಿಡೀ ದೇಶ, ವಿದೇಶಗಳಿಂದ ಪ್ರವಾಸಿಗರು ಆಗಮಿಸುತ್ತಾರೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮೈಸೂರು ನಗರದ ರಸ್ತೆಗಳನ್ನು ದುರಸ್ತಿ ಮಾಡಿಸುವುದರೊಂದಿಗೆ ಅಗತ್ಯ ಮೂಲ ಸೌಕರ್ಯಗಳನ್ನು ಕಲ್ಪಿಸಲು ಕ್ರಮ ಕೈಗೊಳ್ಳಬೇಕು. ಆಗ ಸಾಂಸ್ಕೃತಿಕ ರಾಜಧಾನಿ ಇನ್ನಷ್ಟು ಸುಂದರವಾಗುತ್ತದೆ.
-ಶರತ್, ಮೈಸೂರು
ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…
ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್…
ಬೀಜಿಂಗ್: ಉತ್ತರ ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಅನಿಲ ಸ್ಫೋಟದಲ್ಲಿ 82 ಜನರು ಸಾವನ್ನಪ್ಪಿದ್ದಾರೆ. ಇದು ಇತ್ತೀಚಿನ ವರ್ಷಗಳಲ್ಲಿ ದೇಶದಲ್ಲಿ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ನಟ ದರ್ಶನ್ ಜೈಲಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆಂಬ ವದಂತಿ ಕುರಿತು ಗೃಹ…
ಶಾಲಾ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಹೊಸದಾಗಿ ೮೦೦ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯಲು…
ರಾಜ್ಯಾದ್ಯಂತ ಸರ್ಕಾರಿ ಶಾಲೆಗಳು ಮೇ ೨೯ರಂದು ಪ್ರಾರಂಭವಾಗುತ್ತಿವೆ. ಸರ್ಕಾರಿ ಶಾಲೆಗಳಲ್ಲಿ ರಾಜ್ಯ ಸರ್ಕಾರ ಪ್ರತೀ ವರ್ಷ ಮಕ್ಕಳಿಗೆ ಉಚಿತ ಪಠ್ಯಪುಸ್ತಕ,…