ಓದುಗರ ಪತ್ರ
ಇತ್ತೀಚಿನ ಅಂಕಿಅಂಶಗಳ ಪ್ರಕಾರ, ಭಾರತದಲ್ಲಿ ಅಕ್ರಮ ಸಿಗರೇಟ್ ಮಾರುಕಟ್ಟೆಯು ವಾರ್ಷಿಕವಾಗಿ ಸುಮಾರು ರೂ.೧೫,೦೦೦ ಕೋಟಿಗೂ ಅಧಿಕ ನಷ್ಟವನ್ನು ಸರ್ಕಾರಕ್ಕೆ ಉಂಟುಮಾಡುತ್ತಿದೆ. ತೆರಿಗೆ ಏರಿಕೆಯು ಜನರ ಆರೋಗ್ಯ ಸುಧಾರಿಸುವ ಬದಲು, ಶೇ.೨೫-೩೦ ರಷ್ಟು ಮಾರುಕಟ್ಟೆಯನ್ನು ಕಾಳಸಂತೆಯ ಪಾಲಾಗುವಂತೆ ಮಾಡಿದೆ. ಇದು ಕೇವಲ ಆರ್ಥಿಕ ಅಪರಾಧವಲ್ಲ; ರಾಷ್ಟ್ರೀಯ ಭದ್ರತೆಗೆ ಹೊಡೆತ ನೀಡುವ ‘ಆರ್ಥಿಕ ಭಯೋತ್ಪಾದನೆ’. ಅಕ್ರಮವಾಗಿ ಬರುವ ವಿದೇಶಿ ಉತ್ಪನ್ನಗಳಲ್ಲಿ ಯಾವುದೇ ಶಾಸನಬದ್ಧ ಎಚ್ಚರಿಕೆಗಳಿಲ್ಲದಿರುವುದು ಯುವಜನತೆಯನ್ನು ದಾರಿ ತಪ್ಪಿಸುತ್ತಿದೆ. ಸರ್ಕಾರವು ಈ ದಂಧೆಯನ್ನು ಬುಡಸಮೇತ ಕಿತ್ತೆಸೆಯಲು ‘ಶೂನ್ಯ ಸಹನೆ’ ನೀತಿ ಅನುಸರಿಸಬೇಕು. ಕಳ್ಳಸಾಗಾಣಿಕೆದಾರರ ಮೇಲೆ ಕಠಿಣ ಕ್ರಮ ಜರುಗಿಸಬೇಕು. ಕೂಡಲೇ ಸರ್ಕಾರ ಎಚ್ಚೆತ್ತುಕೊಳ್ಳದಿದ್ದರೆ ಪ್ರಾಮಾಣಿಕ ತೆರಿಗೆದಾರರು ಮತ್ತು ದೇಶೀಯ ಉತ್ಪಾದಕರು ಸಂಕಷ್ಟ ಪರಿಸ್ಥಿತಿ ಎದುರಿಸಬೇಕಾಗುತ್ತದೆ.
-ಡಾ. ಎಚ್.ಕೆ. ವಿಜಯಕುಮಾರ್, ಬೆಂಗಳೂರು
5,54,32,314 ಎನ್ಯುಮರೇಷನ್ ಫಾರಂ ಹಂಚಿಕೆ ; ಶೇ.100 ರಷ್ಟು ಡಿಜಿಟಲೀಕರಣ ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್)…
ಮೈಸೂರು : ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ನಗರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗಾಗಿ ಸರ್ಕಾರ 6 ಕೋಟಿ ರೂ. ಬಿಡುಗಡೆ ಮಾಡಿದ್ದು,…
ತಾರಾಪಿತ್ (ಪಶ್ಚಿಮ ಬಂಗಾಳ) : ಬೆಂಕಿ ಅವಘಡದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದು, ಹಲವರು ಗಂಭೀರ ಗಾಯಗೊಂಡಿರುವ ಘಟನೆ ಪಶ್ಚಿಮ…
ಯಳಂದೂರು : ಚಿರತೆ ದಾಳಿಗೆ ಕರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಯರಗಂಬಳ್ಳಿ ಗ್ರಾಮದಲ್ಲಿ ನಡೆದಿದೆ. ಯರಗಂಬಳ್ಳಿ ಗ್ರಾಮದ ಶೋಭಾ ಕೋಂ…
ಹೊಸದಿಲ್ಲಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಸಂಬಂಧದ ವಿವಾದ ಮತ್ತೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಾವೇರಿ ನೀರು ನಿರ್ವಹಣಾ…
ಬೆಂಗಳೂರು : ನಗರದ ಖಾಸಗಿ ಶಾಲೆಯೊಂದರ ಇಬ್ಬರು ಶಿಕ್ಷಕರಿಗೆ ಹೆಚ್1ಎನ್1 (H1N1) ದೃಢಪಟ್ಟಿದ್ದು ಆತಂಕ ಮೂಡಿಸಿದೆ. ಸದ್ಯಕ್ಕೆ ಹೈಸ್ಕೂಲ್ ಮಾತ್ರ…