ಮುಂದಿನ ದಿನಗಳಲ್ಲಿ ಕ್ರಿಕೆಟ್ ಆಟಗಾರರಿಗೆ ಸಾಧನೆ ಆಧಾರದ ಮೇಲೆ ವೇತನ ನೀಡುವುದು ಹಾಗೂ ವಿದೇಶಿ ಪ್ರವಾಸದ ವೇಳೆ ಅವರ ಕುಟುಂಬದವರನ್ನು ಕರೆದುಕೊಂಡು ಹೋಗಲು ಅವಕಾಶ ನೀಡದಿರಲು ಭಾರತೀಯ ಕ್ರಿಕೆಟ್ ಮಂಡಳಿ ನಿರ್ಧರಿಸಿದೆ ಎಂಬುದಾಗಿ ವರದಿಯಾಗಿದೆ.
ಇದು ಬಹು ಅಪೇಕ್ಷಿತ ಕ್ರಮವಾಗಿದ್ದು, ಕ್ರಿಕೆಟ್ ಪ್ರೇಮಿಗಳು ಈ ಕ್ರಮವನ್ನು ಸ್ವಾಗತಿಸುತ್ತಾರೆ ಎಂಬುದರಲ್ಲಿ ಯಾವುದೇ ಸಂದೇಹವಿಲ್ಲ. ಯಾವುದೇ ಸಾಧನೆ ಮಾಡದ ಆಟಗಾರರಿಗೂ ಲಕ್ಷ ರೂ. ಲೆಕ್ಕದಲ್ಲಿ ವೇತನ ನೀಡುತ್ತಿರುವ ಕ್ರಿಕೆಟ್ ಮಂಡಳಿಯ ಧೋರಣೆ ಬಹುಕಾಲ ದಿಂದಲೂ ಟೀಕೆಗೆ ಗುರಿಯಾಗಿತ್ತು. ಐಪಿಎಲ್ನಲ್ಲಿ ಉತ್ತಮ ಪ್ರದರ್ಶನ ನೀಡುವ ಆಟಗಾರರಿಗೆ ಕೋಟಿ ರೂ.ಲೆಕ್ಕದಲ್ಲಿ ಸಂಭಾವನೆ ನೀಡುತ್ತಾರೆ. ಇದನ್ನು ಕೇಳಿದಾಗ ಆಶ್ಚರ್ಯವಾಗುತ್ತದೆ. ಆದರೆ ಮಳೆ, ಚಳಿ, ಬಿಸಿಲು ಎಂಬುದನ್ನೂ ಲೆಕ್ಕಿಸದೆ ಗಡಿಯಲ್ಲಿ ದೇಶಕಾಯುವ ಸೈನಿಕರಿಗೆ ಸರಿಯಾದ ಸೌಕರ್ಯಗಳನ್ನು ಒದಗಿಸಲು ಸರ್ಕಾರ ಮೀನಮೇಷ ಎಣಿಸುತ್ತದೆ. ಆದರೆ ಕ್ರಿಕೆಟ್ ಆಟಗಾರರಿಗೆ ಹಾಗೂ ಅವರ ಕುಟುಂಬದವರಿಗೆ ಹಣವನ್ನು ವ್ಯಯಿಸುತ್ತದೆ. ಇತ್ತ ಸೈನಿಕರು ಕುಟುಂಬವನ್ನು ಬಿಟ್ಟು ಗಡಿಯಲ್ಲಿ ಸೇವೆ ಸಲ್ಲಿಸುತ್ತಾರೆ. ಆದರೆ ಕ್ರಿಕೆಟಿಗರು ಮಾತ್ರ ಕನಿಷ್ಠ ಎರಡು ತಿಂಗಳೂ ಕುಟುಂಬವನ್ನು ಬಿಟ್ಟಿರಲಾಗುವುದಿಲ್ಲವೇನೋ ಎಂಬಂತೆ ಅವರ ಕುಟುಂಬಕ್ಕೂ ಸಕಲ ಸೌಕರ್ಯವನ್ನು ಕಲ್ಪಿಸುತ್ತದೆ. ಇದು ಸರಿಯಾದ ಕ್ರಮವಲ್ಲ. ಸದ್ಯ ತಡವಾಗಿಯಾದರೂ ಕ್ರಿಕೆಟ್ ಆಡಳಿತ ಮಂಡಳಿಗೆ ಜ್ಞಾನೋದಯವಾಗಿದೆ.
-ರಮಾನಂದ ಶರ್ಮಾ, ಜೆ.ಪಿ.ನಗರ, ಬೆಂಗಳೂರು.
ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…
ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್ಪಿಜಿಯನ್ನು ಹೊತ್ತ…
ಬೆಂಗಳೂರು: ಸಮುದ್ರ ಭಾಗದಲ್ಲಿ ವೈಪರೀತ್ಯಗಳು ಮುಂದುವರಿದಿದ್ದು, ಮುಂಗಾರು ಮಳೆ ಆಗಮನಕ್ಕೆ ದಿನಗಣನೇ ಶುರುವಾಗಿದೆ. ಮತ್ತೊಂದೆಡೆ ರಾಜ್ಯದ ವಿವಿಧ ಕಡೆಗಳಲ್ಲಿ ಪೂರ್ವ…
ಮಡಿಕೇರಿ: ರಾಜ್ಯದಲ್ಲಿ ಮಳೆಯ ನಡುವೆಯೇ ವಾಯು ಗುಣಮಟ್ಟದಲ್ಲಿ ಬದಲಾವಣೆ ಕಂಡಿದ್ದು, ಬೆಂಗಳೂರಿನಲ್ಲಿ ಇಂದು 75 AQI ನೊಂದಿಗೆ ಸಾಧಾರಣ ಗಾಳಿ…
ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರ ಸಾಧನೆಯನ್ನು ಸೂಪರ್ ಸ್ಟಾರ್ ರಜನಿಕಾಂತ್ ಮನಬಿಚ್ಚಿ ಹೊಗಳಿದ್ದಾರೆ. ಚನ್ನೈನ ತಮ್ಮ ನಿವಾಸದಲ್ಲಿ…
ಇಂದೋರ್ : ಕೇರಳದ ತಿರುವನಂತಪುರಂನಿಂದ ದೆಹಲಿಗೆ ತೆರಳುತ್ತಿದ್ದ ರಾಜಧಾನಿ ಎಕ್ಸ್ಪ್ರೆಸ್ ರೈಲಿನ ಎಸಿ ಕೋಚ್ನಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದೆ. ಭಾನುವಾರ…