Andolana originals

ಓದುಗರ ಪತ್ರ: ಕ್ರಿಕೆಟ್ ಮಂಡಳಿಯ ನಿರ್ಧಾರ ಸಾಗತಾರ್ಹ

ಮುಂದಿನ ದಿನಗಳಲ್ಲಿ ಕ್ರಿಕೆಟ್ ಆಟಗಾರರಿಗೆ ಸಾಧನೆ ಆಧಾರದ ಮೇಲೆ ವೇತನ ನೀಡುವುದು ಹಾಗೂ ವಿದೇಶಿ ಪ್ರವಾಸದ ವೇಳೆ ಅವರ ಕುಟುಂಬದವರನ್ನು ಕರೆದುಕೊಂಡು ಹೋಗಲು ಅವಕಾಶ ನೀಡದಿರಲು ಭಾರತೀಯ ಕ್ರಿಕೆಟ್ ಮಂಡಳಿ ನಿರ್ಧರಿಸಿದೆ ಎಂಬುದಾಗಿ ವರದಿಯಾಗಿದೆ.

ಇದು ಬಹು ಅಪೇಕ್ಷಿತ ಕ್ರಮವಾಗಿದ್ದು, ಕ್ರಿಕೆಟ್ ಪ್ರೇಮಿಗಳು ಈ ಕ್ರಮವನ್ನು ಸ್ವಾಗತಿಸುತ್ತಾರೆ ಎಂಬುದರಲ್ಲಿ ಯಾವುದೇ ಸಂದೇಹವಿಲ್ಲ. ಯಾವುದೇ ಸಾಧನೆ ಮಾಡದ ಆಟಗಾರರಿಗೂ ಲಕ್ಷ ರೂ. ಲೆಕ್ಕದಲ್ಲಿ ವೇತನ ನೀಡುತ್ತಿರುವ ಕ್ರಿಕೆಟ್ ಮಂಡಳಿಯ ಧೋರಣೆ ಬಹುಕಾಲ ದಿಂದಲೂ ಟೀಕೆಗೆ ಗುರಿಯಾಗಿತ್ತು. ಐಪಿಎಲ್‌ನಲ್ಲಿ ಉತ್ತಮ ಪ್ರದರ್ಶನ ನೀಡುವ ಆಟಗಾರರಿಗೆ ಕೋಟಿ ರೂ.ಲೆಕ್ಕದಲ್ಲಿ ಸಂಭಾವನೆ ನೀಡುತ್ತಾರೆ. ಇದನ್ನು ಕೇಳಿದಾಗ ಆಶ್ಚರ್ಯವಾಗುತ್ತದೆ. ಆದರೆ ಮಳೆ, ಚಳಿ, ಬಿಸಿಲು ಎಂಬುದನ್ನೂ ಲೆಕ್ಕಿಸದೆ ಗಡಿಯಲ್ಲಿ ದೇಶಕಾಯುವ ಸೈನಿಕರಿಗೆ ಸರಿಯಾದ ಸೌಕರ್ಯಗಳನ್ನು ಒದಗಿಸಲು ಸರ್ಕಾರ ಮೀನಮೇಷ ಎಣಿಸುತ್ತದೆ. ಆದರೆ ಕ್ರಿಕೆಟ್ ಆಟಗಾರರಿಗೆ ಹಾಗೂ ಅವರ ಕುಟುಂಬದವರಿಗೆ ಹಣವನ್ನು ವ್ಯಯಿಸುತ್ತದೆ. ಇತ್ತ ಸೈನಿಕರು ಕುಟುಂಬವನ್ನು ಬಿಟ್ಟು ಗಡಿಯಲ್ಲಿ ಸೇವೆ ಸಲ್ಲಿಸುತ್ತಾರೆ. ಆದರೆ ಕ್ರಿಕೆಟಿಗರು ಮಾತ್ರ ಕನಿಷ್ಠ ಎರಡು ತಿಂಗಳೂ ಕುಟುಂಬವನ್ನು ಬಿಟ್ಟಿರಲಾಗುವುದಿಲ್ಲವೇನೋ ಎಂಬಂತೆ ಅವರ ಕುಟುಂಬಕ್ಕೂ ಸಕಲ ಸೌಕರ್ಯವನ್ನು ಕಲ್ಪಿಸುತ್ತದೆ. ಇದು ಸರಿಯಾದ ಕ್ರಮವಲ್ಲ. ಸದ್ಯ ತಡವಾಗಿಯಾದರೂ ಕ್ರಿಕೆಟ್ ಆಡಳಿತ ಮಂಡಳಿಗೆ ಜ್ಞಾನೋದಯವಾಗಿದೆ.

-ರಮಾನಂದ ಶರ್ಮಾ, ಜೆ.ಪಿ.ನಗರ, ಬೆಂಗಳೂರು.

 

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

13 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

13 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

13 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

13 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

13 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

13 hours ago