ಓದುಗರ ಪತ್ರ
ಆರ್ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.
ಆರಂಭಿಕ ಹಂತದಲ್ಲಿ ರೂಪಾಯಿ ೧೦ ಮತ್ತು ೨೦ ಮುಖಬೆಲೆಯ ತಲಾ ೧೦೦ ಕೋಟಿ ನೋಟುಗಳನ್ನು ಬಿಡುಗಡೆ ಮಾಡಲು ಉದ್ದೇಶಿಸಲಾಗಿದೆ.ಸಾಮಾನ್ಯ ಕಾಗದದ ನೋಟುಗಳಿಗಿಂತ ಇವು ೪ ಪಟ್ಟು ಹೆಚ್ಚು ಬಾಳಿಕೆ ಬರುತ್ತವೆ. ಕೈಯಿಂದ ಕೈಗೆ ಚಲಾವಣೆಯಾಗುವಾಗ ಇವು ಬೇಗನೆ ಹರಿಯುವುದಿಲ್ಲ, ನೀರಿನಲ್ಲಿ ನೆನೆಯುವುದಿಲ್ಲ ಹಾಗೂ ಇವುಗಳನ್ನು ನಕಲಿ ಮಾಡುವುದು ಅತ್ಯಂತ ಕಷ್ಟಕರ. ದಿನನಿತ್ಯದ ಸಣ್ಣ ಮೌಲ್ಯದ ವಹಿವಾಟುಗಳಲ್ಲಿ ಹರಿದ ನೋಟುಗಳ ಕಿರಿಕಿರಿಯನ್ನು ತಪ್ಪಿಸಲು ಇದು ಸಹಕಾರಿ. ಜೊತೆಗೆ ನೋಟುಗಳನ್ನು ಪದೇ ಪದೇ ಮರುಮುದ್ರಿಸುವ ಆರ್ಬಿಐ ವೆಚ್ಚ ಗಣನೀಯವಾಗಿ ತಗ್ಗಲಿದ್ದು, ದೇಶದ ಆರ್ಥಿಕತೆಗೆ ದೊಡ್ಡ ಬಲ ತರಲಿದೆ.
-ಡಾ.ಎಚ್.ಕೆ.ವಿಜಯಕುಮಾರ್, ಬೆಂಗಳೂರು
ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…
ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…
ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್ಗೇಟ್ಗಳನ್ನು ಬಂದ್…