Andolana originals

ಓದುಗರ ಪತ್ರ: ಪ್ರಜಾಪ್ರಭುತ್ವ ಎಂಬ ಮೃಷ್ಟಾನ್ನ ಭೋಜನ ಶಾಲೆ!

ಭ್ರಷ್ಟಾಚಾರವೇ ಇಲ್ಲದ ವ್ಯವಸ್ಥೆ ನಿರ್ಮಾಣ ಮಾಡುವುದು ಇನ್ನು ತುಂಬಾ ಕಷ್ಟಕರವಾದ ಕೆಲಸ ಎಂದು ನಿವೃತ್ತ ಲೋಕಾಯುಕ್ತ ನ್ಯಾಯ ಮೂರ್ತಿ ಎನ್.ಸಂತೋಷ್ ಹೆಗ್ಡೆ ಅವರು ಹೇಳಿರುವುದಾಗಿ ೩೧.೧೨.೨೫ರಂದು ಮಾಧ್ಯಮಗಳಲ್ಲಿ ವರದಿಯಾಗಿದ್ದು, ಇದು ಸಾರ್ವಕಾಲಿಕ ಸತ್ಯವಾಗಿದೆ.ಮ ಸೂರ್ಯ ಮುಳುಗದ ಸಾಮ್ರಾಜ್ಯಎಂದು ಕರೆಯಲ್ಪಡುತ್ತಿದ್ದ ಬ್ರಿಟಿಷರು ೨೦೦ ವರ್ಷಗಳಿಗೂ ಹೆಚ್ಚು ಕಾಲ ನಮ್ಮನ್ನು ಆಳಿ ಸಾವಿರಾರು ಕೋಟಿ ರೂ.ಗಳಷ್ಟು ಸಂಪತ್ತನ್ನು ಕೊಳ್ಳೆ ಹೊಡೆದು ತಮ್ಮ ದೇಶಕ್ಕೆ ಸಾಗಿಸಿದರು.

ಸ್ವಾತಂತ್ರ್ಯ ಬಂದ ನಂತರ ಆಡಳಿತ ನಡೆಸಿದ ನಮ್ಮವರೇ ಆದ ಜನಪ್ರತಿನಿಧಿಗಳು ಭ್ರಷ್ಟಾಚಾರ ನಡೆಸಿ ಲೂಟಿ ಮಾಡಿ ದೇಶ ವಿದೇಶ ಗಳಲ್ಲಿ ಚರ/ಸ್ಥಿರ ಆಸ್ತಿ ಮಾಡಿದ್ದಾರೆ. ಶೇ.೯೦ರಷ್ಟು ಆಸ್ಪತ್ರೆಗಳು, ಸಕ್ಕರೆ ಕಾರ್ಖಾನೆಗಳು, ವೈದ್ಯಕೀಯ ಕಾಲೇಜುಗಳು, ಶಿಕ್ಷಣ ಸಂಸ್ಥೆಗಳು, ಐಷಾರಾಮಿ ಹೋಟೆಲ್‌ಗಳು ಎಲ್ಲವೂ ಜನಪ್ರದಿನಿಧಿಗಳ ಒಡೆತನಕ್ಕೆ ಸೇರಿವೆ.

ನಾವು ಅಧಿಕಾರಕ್ಕೆ ಬಂದರೆ ಸ್ವಿಸ್ ಬ್ಯಾಂಕ್ ಹಣವನ್ನು ವಾಪಸ್ ತರುತ್ತೇವೆ. ಅದನ್ನು ದೇಶದ ಪ್ರತಿಯೊಬ್ಬ ಪ್ರಜೆಗೂ ಹಂಚುತ್ತೇವೆ ಎಂದು ಹೇಳಿ ಅಧಿಕಾರಕ್ಕೆ ಬಂದವರು ಕೊಟ್ಟ ಆಶ್ವಾಸನೆಯನ್ನು ಈಡೇರಿಸುವಲ್ಲಿ ವಿಫಲರಾಗಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಅಧಿಕಾರ ಹಿಡಿಯಲು ‘ಭರವಸೆಯ ಬಂಡವಾಳ ವೇ ಜೀವಾಳ’! ಜನರ ಮೂಗಿಗೆ ತುಪ್ಪ ಸವರಿ, ತಾವು ಮೃಷ್ಟಾನ್ನ ಭೋಜನ ಮಾಡುವುದೇ ಇಂದಿನ ಪ್ರಜಾಪ್ರಭುತ್ವ ವ್ಯವಸ್ಥೆ….!

-ಮುಳ್ಳೂರು ಪ್ರಕಾಶ್, ಕನಕದಾಸನಗರ, ಮೈಸೂರು

 

ಆಂದೋಲನ ಡೆಸ್ಕ್

Recent Posts

ಇರಾನ್-ಇಸ್ರೇಲ್‌ ಸಂಘರ್ಷ: ಘಟನೆಯಲ್ಲಿ ಮೈಸೂರಿನವರು ಸಿಲುಕಿರುವ ಬಗ್ಗೆ ಮಾಹಿತಿ ಇಲ್ಲ ಎಂದ ಸಚಿವ ಎಚ್‌ಸಿಎಂ

ಮೈಸೂರು: ಇರಾನ್-ಇಸ್ರೇಲ್‌ ಸಂಘರ್ಷದ ಬಗ್ಗೆ ಸಚಿವ ಎಚ್.ಸಿ.ಮಹದೇವಪ್ಪ ಪ್ರತಿಕ್ರಿಯೆ ನೀಡಿದ್ದು, ಘಟನೆಯಲ್ಲಿ ಮೈಸೂರಿನವರು ಸಿಲುಕಿರುವ ಬಗ್ಗೆ ಮಾಹಿತಿ ಇಲ್ಲ ಎಂದು…

4 mins ago

ಟಿ.ನರಸೀಪುರದಲ್ಲಿ ರೇಷ್ಮೆ ಕಾರ್ಖಾನೆಯನ್ನು ಮುಚ್ಚುವ ಪ್ರಶ್ನೆಯೇ ಇಲ್ಲ: ಸಚಿವ ಎಚ್.ಸಿ.ಮಹದೇವಪ್ಪ

ಮೈಸೂರು: ಟಿ.ನರಸೀಪುರದಲ್ಲಿ ರೇಷ್ಮೆ ಕಾರ್ಖಾನೆಯನ್ನು ಮುಚ್ಚುವ ಪ್ರಶ್ನೆಯೇ ಇಲ್ಲ ಎಂದು ಸಚಿವ ಎಚ್.ಸಿ.ಮಹದೇವಪ್ಪ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಮೈಸೂರಿನಲ್ಲಿ…

16 mins ago

ಶ್ರೀಮಂತರು ಸ್ವಯಂ ಪ್ರೇರಿತರಾಗಿ ಗ್ಯಾರಂಟಿ ಯೋಜನೆ ಲಾಭ ಪಡೆಯೋದನ್ನು ಬಿಡಬೇಕು: ಸಚಿವ ಎಂ.ಬಿ.ಪಾಟೀಲ್‌ ಆಗ್ರಹ

ಬೆಂಗಳೂರು: ಶ್ರೀಮಂತರು ಸ್ವಯಂ ಪ್ರೇರಿತರಾಗಿ ಗ್ಯಾರಂಟಿ ಯೋಜನೆ ಲಾಭ ಪಡೆಯೋದನ್ನು ಬಿಡಬೇಕು ಎಂದು ಸಚಿವ ಎಂ.ಬಿ.ಪಾಟೀಲ್‌ ಒತ್ತಾಯಿಸಿದ್ದಾರೆ. ಈ ಕುರಿತು…

2 hours ago

ಇರಾನ್‌ ಮೇಲೆ ಇಸ್ರೇಲ್-ಅಮೇರಿಕಾ ಜಂಟಿ ದಾಳಿ: ಸಹಾಯವಾಣಿ ತೆರೆದ ಹಾಸನ ಜಿಲ್ಲಾಡಳಿತ

ಹಾಸನ: ಇರಾನ್‌ ಮೇಲೆ ಇಸ್ರೇಲ್‌-ಅಮೇರಿಕಾ ಜಂಟಿ ದಾಳಿ ನಡೆಸುತ್ತಿರುವ ಪರಿಣಾಮ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಕರ್ನಾಟಕ ಸರ್ಕಾರ ದುಬೈ ಸೇರಿದಂತೆ…

2 hours ago

ಇರಾನ್‌ ಮೇಲೆ ಇಸ್ರೇಲ್-ಅಮೇರಿಕಾ ಜಂಟಿ ದಾಳಿ: ಇಸ್ರೇಲ್‌ ಪ್ರಧಾನಿ ನೆತನ್ಯಾಹುಗೆ ಪ್ರಧಾನಿ ನರೇಂದ್ರ ಮೋದಿ ಕರೆ

ನವದೆಹಲಿ: ಇರಾನ್‌ ಮೇಲೆ ಇಸ್ರೇಲ್‌-ಅಮೇರಿಕಾ ದಾಳಿತ ನಂತರ ನಡೆಯುತ್ತಿರುವ ಉದ್ವಿಗ್ನತೆಯ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರು ಇಸ್ರೇಲ್‌ ಪ್ರಧಾನಿ…

2 hours ago

ಅಮೇರಿಕಾ-ಇಸ್ರೇಲ್‌ ಜಂಟಿ ದಾಳಿ: ಒಂದೇ ಬಾರಿಗೆ ಇರಾನಿನ 48 ನಾಯಕರು ಸಾವು

ಟೆಹರಾನ್:‌ ಇರಾನ್‌ ವಿರುದ್ಧ ಅಮೇರಿಕಾ ಹಾಗೂ ಇಸ್ರೇಲ್‌ ನಡೆಸಿದ ಜಂಟಿ ಮಿಲಿಟರಿ ಕಾರ್ಯಾಚರಣೆಯಲ್ಲಿ 48 ಇರಾನಿನ ನಾಯಕರು ಸಾವನ್ನಪ್ಪಿದ್ದಾರೆ ಎಂದು…

3 hours ago