Andolana originals

ಓದುಗರ ಪತ್ರ:  ಸರ್ವಾಧಿಕಾರದ ವಿರುದ್ಧದ ಹೋರಾಟಕ್ಕೆ ಸಂದ ಫಲ

ವೆನೆಜುವೆಲಾದ ಪ್ರಜಾಪ್ರಭುತ್ವ ಹೋರಾಟಗಾರ್ತಿ ಮರಿಯಾ ಕೊರಿನ ಮಚಾಡೋ ಅವರಿಗೆ ಈ ಬಾರಿಯ ನೊಬೆಲ್ ಶಾಂತಿ ಪ್ರಶಸ್ತಿ ಸಂದಿದೆ. ಅಲ್ಲಿನ ಸರ್ವಾಧಿಕಾರಿ ಆಡಳಿತದ ವಿರುದ್ಧ ಹೋರಾಡಿದ ಅವರಿಗೆ ತಕ್ಕ ಫಲ ಸಂದಿದೆ. ಅಮೆರಿಕದ ಅಧ್ಯಕ್ಷ ಟ್ರಂಪ್ ರವರು ಈ ಗೌರವ ಪಡೆಯಲು ಇನ್ನಿಲ್ಲದ ಕಸರತ್ತು ನಡೆಸಿದ್ದರು. ಭಾರತ-ಪಾಕ್, ರಷ್ಯಾ-ಉಕ್ರೇನ್, ಹಮಾಸ್-ಇಸ್ರೇಲ್ ಯುದ್ಧ ವನ್ನು ನಾನೇ ನಿಲ್ಲಿಸಿದೆ ಎಂದು ಟ್ರಂಪ್ ಬಡಾಯಿ ಕೊಚ್ಚಿ ಕೊಳ್ಳುತ್ತಿದ್ದರು.

ಪ್ರಶಸ್ತಿಗಾಗಿ ಭಾರೀ ಒತ್ತಡ ಕೂಡ ಹೇರಿದ್ದರು. ಪಾಕ್ ವಿದೇಶಾಂಗ ಸಚಿವರು ಟ್ರಂಪ್ ಗೆ ನೊಬೆಲ್ ಶಾಂತಿ ಪ್ರಶಸ್ತಿ ಕೊಡಬೇಕು ಎಂದು ಹೇಳಿದ್ದು ಕೂಡ ವರದಿಯಾಗಿತ್ತು. ಟ್ರಂಪ್ ಗೆ ನೊಬೆಲ್ ಶಾಂತಿ ಪ್ರಶಸ್ತಿ ನೀಡಿದ್ದರೆ ಅದು ನೊಬೆಲ್ ಇತಿಹಾಸದಲ್ಲಿ ಕಪ್ಪು ಚುಕ್ಕೆಯಾಗಿ ಉಳಿದು ಬಿಡುತ್ತಿತ್ತು. ನೊಬೆಲ್ ಪ್ರತಿಷ್ಠಾನ ಅರ್ಹರಿಗೆ ಪ್ರಶಸ್ತಿ ನೀಡಿ ಪ್ರಶಸ್ತಿಯ ಘನತೆಯನ್ನು ಎತ್ತಿ ಹಿಡಿದಿದೆ.

-ಮುಳ್ಳೂರು ಪ್ರಕಾಶ್, ಕನಕದಾಸನಗರ, ಮೈಸೂರು

ಆಂದೋಲನ ಡೆಸ್ಕ್

Recent Posts

ಮೈಸೂರು| ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆ

ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…

4 mins ago

ಮೈಶುಗರ್‌ ಶಾಲಾ ಶಿಕ್ಷಕರಿಗೆ ನೆರವಾದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಮಂಡ್ಯ: ಸುಮಾರು 15 ತಿಂಗಳಿನಿಂದ ವೇತನ ಸಿಗದೇ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದ ಮಂಡ್ಯದ ಮೈಶುಗರ್‌ ಶಾಲೆಯ ಶಿಕ್ಷಕರ ಬಾಕಿ ವೇತನಕ್ಕಾಗಿ…

29 mins ago

ಸಮಾನತೆ ತರಲೆಂದೇ ಗ್ಯಾರಂಟಿ ಯೋಜನೆಗೆ ಕೋಟಿಗಟ್ಟಲೇ ಹಣ ಖರ್ಚಿ ಮಾಡ್ತಿರೋದು: ಸಿಎಂ ಸಿದ್ದರಾಮಯ್ಯ

ಹಾಸನ: ಗ್ಯಾರಂಟಿಗೆ ಕೋಟಿಗಟ್ಟಲೇ ಹಣ ಖರ್ಚು ಮಾಡ್ತಿರೋದು ಸಮಾನತೆ ತರಲು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಹಾಸನದಲ್ಲಿ…

55 mins ago

ಟಿಬಿ ಡ್ಯಾಂ ಕ್ರಸ್ಟ್‌ ಗೇಟ್‌ ಅಳವಡಿಕೆಗೆ ಚಾಲನೆ

ಬಳ್ಳಾರಿ: ಹೊಸಪೇಟೆ ಹೊರವಲಯದಲ್ಲಿರುವ ತುಂಗಭದ್ರಾ ಜಲಾಶಯದ ಕ್ರಸ್ಟ್‌ ಗೇಟ್‌ ಅಳವಡಿಕೆ ಕಾರ್ಯಕ್ಕೆ ಚಾಲನೆ ಸಿಕ್ಕಿದೆ. ಜಲಾಶಯದ ಮೇಲ್ಬಾಗದಲ್ಲಿ ಗೇಟ್‌ ಮುಂದೆ…

1 hour ago

ಮೈಸೂರು| ಮದುವೆ ಆಗುವುದಾಗಿ ನಂಬಿಸಿ ವಕೀಲೆಗೆ ಮೋಸ

ಮೈಸೂರು: ಮದುವೆ ಆಗುವುದಾಗಿ ನಂಬಿಸಿ ಮಹಿಳಾ ವಕೀಲೆಯೊಬ್ಬರೊಂದಿಗೆ ದೈಹಿಕ ಸಂಪರ್ಕ ಬೆಳೆಸಿ ನಂತರ ಮೋಸ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ವಕೀಲ…

1 hour ago

ಪುರಾವೆ ಇಲ್ಲದೇ ಯಾರ ಮೇಲೂ ತನಿಖೆ ಮಾಡಲ್ಲ: ಬಿ.ವೈ.ವಿಜಯೇಂದ್ರ

ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ನೊಟೀಸ್ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯೆ…

2 hours ago