ಓದುಗರ ಪತ್ರ
ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಂಪೆನಿಗಳ ಕಿರುಕುಳದಿಂದಾಗಿ ಅನೇಕ ಬಡ ಕುಟುಂಬಗಳು ಗ್ರಾಮಗಳನ್ನು ತೊರೆದಿವೆ. ಅಲ್ಲದೆ ಕೆಲವರು ಸಾಲಕ್ಕೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿರುವ ಉದಾಹರಣೆಗಳೂ ಇವೆ. ಅಂತಹವರಲ್ಲಿ ದಲಿತ ಕುಟುಂಬಗಳೇ ಹೆಚ್ಚಾಗಿದ್ದು, ರಾಜ್ಯ ಸರ್ಕಾರ ಅವರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ವಿಪಕ್ಷ ನಾಯಕ ಆರ್.ಅಶೋಕ್ ಹೇಳಿರುವುದಾಗಿ ‘ಆಂದೋಲನ’ ದಿನಪತ್ರಿಕೆಯಲ್ಲಿ ವರದಿಯಾಗಿದೆ.
ಸರ್ಕಾರ ಆರ್.ಅಶೋಕ್ರವರ ಸಲಹೆಯನ್ನು ಗಂಭೀರವಾಗಿ ಪರಿಗಣಿಸಿ ಶೀಘ್ರದಲ್ಲೇ ಸುಗ್ರೀವಾಜ್ಞೆಯನ್ನು ಜಾರಿಗೆ ತರಬೇಕು. ಅಲ್ಲದೆ ಸಂತ್ರಸ್ತ ಕುಟುಂಬಗಳಿಗೆ ಸೂಕ್ತ ಪರಿಹಾರವನ್ನು ಒದಗಿಸಬೇಕು. ಸರ್ಕಾರದ ಅಽನದಲ್ಲಿರುವ ಅಂಬೇಡ್ಕರ್ ಅಭಿವೃದ್ಧಿ ನಿಗಮ ಸೇರಿದಂತೆ ಇನ್ನಿತರ ಸಮುದಾಯಗಳ ಅಭಿವೃದ್ಧಿ ನಿಗಮದ ವತಿಯಿಂದ ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಸ್ವಯಂ ಉದ್ಯೋಗಗಳನ್ನು ಸ್ಥಾಪಿಸಿಕೊಳ್ಳಲು ಸಹಾಯಧನವನ್ನು ನೀಡುವ ಜತೆಗೆ ಅವರು ಗಳಿಸುವ ಆದಾಯಕ್ಕನುಗುಣವಾಗಿ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯ ನೀಡಿದರೆ ಅವರು ಸಾಲಕ್ಕಾಗಿ ಮೈಕ್ರೋ ಫೈನಾನ್ಸ್ ಕಂಪೆನಿಗಳ ಮೊರೆ ಹೋಗುವುದು ತಪ್ಪುತ್ತದೆ. ಆದ್ದರಿಂದ ಸರ್ಕಾರ ಮೈಕ್ರೋ ಫೈನಾನ್ಸ್ ಕಂಪೆನಿಗಳಿಂದ ಕಿರುಕುಳ ಅನುಭವಿಸುತ್ತಿರುವ ಸಂತ್ರಸ್ತರ ನೆರವಿಗೆ ಬಂದು ಆತ್ಮಹತ್ಯೆ ಪ್ರಕರಣಗಳು ಮರುಕಳಿಸದಂತೆ ಎಚ್ಚರ ವಹಿಸಬೇಕಿದೆ.
–ಎಂ.ಪಿ.ದರ್ಶನ್ ಚಂದ್ರ, ಮುಕ್ಕಡಹಳ್ಳಿ, ಚಾಮರಾಜನಗರ ತಾ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಸ್ವಂತ ಮಗನಿಗೆ ತಾಯಿ ಕಿಡ್ನಿ ಜೋಡಣೆಗೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣ ವ್ಯಾಪ್ತಿಯಲ್ಲಿ ಭಿಕ್ಷೆ ಬೇಡುತ್ತಿದ್ದ ಬಾಲಕನನ್ನು ಮಕ್ಕಳ ರಕ್ಷಣಾ ಘಟಕದ…
ನವದೆಹಲಿ: ಭಾರತ ಚುನಾವಣಾ ಆಯೋಗವು ಕರ್ನಾಟಕ ಸೇರಿದಂತೆ 16 ರಾಜ್ಯಗಳು ಮತ್ತು ಮೂರು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾರರ ಪಟ್ಟಿಯ ವಿಶೇಷ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹದೇಶ್ವರ ಸ್ವಾಮಿಗೆ ಗುರುವಾರ…
ಸೆಸ್ಕ್ ವತಿಯಿದ ಮೈಸೂರು ನಗರದಲ್ಲಿ ಕೈಗೊಂಡಿರುವ ಯೋಜನೆ ಮೈಸೂರು : ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (ಸೆಸ್ಕ್)ದಿಂದ ಮೈಸೂರು…
ಕೇರಳಂ : ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿ.ಡಿ.ಸತೀಶನ್ ಆಯ್ಕೆಯಾಗಿದ್ದಾರೆ. ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಎಐಸಿಸಿ…