Andolana originals

ಓದುಗರ ಪತ್ರ: ಉಳುವ ‘ಯೋಗಿ’ ಕೂಗಿಗೆ ಸರ್ಕಾರ ತರ್ತಾಗಿ ಸ್ಪಂದಿಸಲಿ

ರಾಜ್ಯದ ೧೭೫ ತಾಲ್ಲೂಕುಗಳು ಭೀಕರ ಬರಕ್ಕೆ ತತ್ತರಿಸಿ, ಶೇಕಡಾ ೮೦ ಕ್ಕೂ ಹೆಚ್ಚು ಬೆಳೆ ನಷ್ಟದಿಂದ ಅನ್ನದಾತರು ಸಂಪೂರ್ಣ ಕಂಗಾಲಾಗಿದ್ದರೂ ಸರ್ಕಾರದ ಮಂದಗತಿಯ ಧೋರಣೆ ಸರಿಯಲ್ಲ.

ಬರ ಆವರಿಸಿ ೪ ತಿಂಗಳು ಕಳೆದ ನಂತರ ಎಚ್ಚೆತ್ತುಕೊಂಡಿರುವ ಸರ್ಕಾರ, ಕೇವಲ ೮೯ ತಾಲ್ಲೂಕುಗಳಲ್ಲಿ ತೀವ್ರ ಹಾಗೂ ೧೨ ತಾಲ್ಲೂಕುಗಳಲ್ಲಿ ಕಡಿಮೆ ಬರ ಎಂದು ಕಾಗದದ ಮೇಲೆ ವಿಂಗಡಿಸಿ ಕಾಲಹರಣ ಮಾಡುತ್ತಿರುವುದು ದುರಂತ. ಕೊಳ್ಳೆ ಹೊಡೆದ ಮೇಲೆ ಕೋಟೆ ಬಾಗಿಲು ಹಾಕಿದಂತೆ, ಕೇವಲ ಅಂಕಿ-ಅಂಶಗಳ ನಾಟಕವಾಡಿದರೆ ರೈತನ ಖಾಲಿ ಹೊಟ್ಟೆ ತುಂಬುವುದಿಲ್ಲ.ಆಡಳಿತ ಮತ್ತು ವಿರೋಧ ಪಕ್ಷಗಳು ಕೇವಲ ರಾಜಕೀಯ ಬಾಣಗಳ ಬಿಡುವುದನ್ನು ಬಿಟ್ಟು, ಕಷ್ಟದಲ್ಲಿರುವ ರೈತರ ನೆರವಿಗೆ ತಕ್ಷಣ ಬರಬೇಕು.

ವಿಳಂಬವಿಲ್ಲದೆ ಸರ್ಕಾರ ೧೭೫ ತಾಲ್ಲೂಕುಗಳಿಗೆ ಸೂಕ್ತ ಪರಿಹಾರ ಹಣ ಬಿಡುಗಡೆ ಮಾಡಿ, ರೈತರ ಸಂಪೂರ್ಣ ಕೃಷಿ ಸಾಲ ಮನ್ನಾ ಮಾಡಬೇಕು. ಅನ್ನದಾತನಿಗೆ ಜೀವದಾನ ನೀಡಲು ಸರ್ಕಾರ ತುರ್ತು ಕ್ರಮ ಕೈಗೊಳ್ಳುವುದು ಅತ್ಯಗತ್ಯ.

-ಡಾ. ಎಚ್.ಕೆ.ವಿಜಯಕುಮಾರ್, ಬೆಂಗಳೂರು

ಆಂದೋಲನ ಡೆಸ್ಕ್

Recent Posts

ರಾಜ್ಯದ 101 ತಾಲ್ಲೂಕುಗಳು ಬರ ತಾಲ್ಲೂಕುಗಳೆಂದು ಘೋಷಣೆ: ಡಿಸಿಎಂ ಜಿ.ಪರಮೇಶ್ವರ್‌

ಮೈಸೂರು: ರೈತರಿಗೆ ಬರ ಪರಿಹಾರ ನೀಡುವ ವಿಚಾರವಾಗಿ ಮಾತನಾಡಿರುವ ಡಿಸಿಎಂ ಪರಮೇಶ್ವರ್‌, ರಾಜ್ಯದ 101 ತಾಲೂಕುಗಳನ್ನು ಬರ ತಾಲೂಕುಗಳೆಂದು ಘೋಷಣೆ…

7 mins ago

ಓದುಗರ ಪತ್ರ: ರಾಷ್ಟ್ರಕವಿ ಶ್ಲಾಘನೆಯ ಸ್ಮರಣೆ

೧೯೮೬ರ ಆಗಸ್ಟ್ ೨೯ರಂದು (ಜಗದ್ಗುರು ವೀರಸಿಂಹಾಸನ ಮಹಾಸಂಸ್ಥಾನ ಮಠದ ೨೩ ನೇ ಮಠಾಧಿಪತಿ) ಶಿವರಾತ್ರಿ ರಾಜೇಂದ್ರ ಶ್ರೀಗಳ ಅಮೃತ ಮಹೋತ್ಸವದ…

1 hour ago

ಓದುಗರ ಪತ್ರ: ಸೈಬರ್ ವಂಚನೆ: ಜಾಗೃತಿಯೂ ಫಲ ನೀಡುತ್ತಿಲ್ಲವಲ್ಲ…

ರಾಜ್ಯದಲ್ಲಿ ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿದ್ದು, ಕಳೆದ ಏಳು ತಿಂಗಳ ಅವಧಿಯಲ್ಲಿ ಸುಮಾರು ರೂ.೬೦೦ ಕೋಟಿಯಷ್ಟು ಹಣ ಸೈಬರ್ ವಂಚಕರ…

1 hour ago

ಸೇವೆ, ಶಿಕ್ಷಣ, ಸಂಸ್ಕಾರದ ಸಂಗಮವಾಗಿದ್ದ ರಾಜೇಂದ್ರ ಶ್ರೀ

ಡಾ.ಕೆ.ಪಿ.ಸಿದ್ಧಲಿಂಗಸ್ವಾಮಿ ಇಂದು ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ೧೧೧ನೇ ಜಯಂತಿ ಕೆಲವರು ತಮ್ಮ ಕಾಲದಲ್ಲಿ ಬದುಕುತ್ತಾರೆ; ಕೆಲವರು ತಮ್ಮ ಕಾಲವನ್ನೇ…

4 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಆತ್ಮಬಲ ಅಸ್ತ್ರದಿಂದ ಬ್ರಿಟಿಷರ ಮಣಿಸಿದ ಗಾಂಧಿ ಗಾಂಧಿಜಿ ಕಲ್ಪನೆಯ ಸರ್ವೋದಯ ಸಮಾಜದಲ್ಲಿ ಎಲ್ಲರೂ ಸ್ವತಂತ್ರವಾಗಿರುತ್ತಾರೆ. ಇಲ್ಲಿ ಜಾತಿ, ವರ್ಗ, ಶೋಷಣೆ…

4 hours ago

ಗಾಂಧಿವಾದಕ್ಕೆ ಮರುಳಾಗಿದ್ದ ಮೈಸೂರಿನ ಯಶೋಧರಾ ದಾಸಪ್ಪ

ರೋಹಿಣಿ ಸಂಗಪ್ಪ ದಳವಾಯಿ ಮೈಸೂರು ರಾಜ್ಯ ಕಂಡ ಅಪ್ರತಿಮ ಹೋರಾಟಗಾರ್ತಿ ಮತ್ತು ಜನಸೇವಕಿ ಯಶೋಧರಾ ದಾಸಪ್ಪ. ತಮ್ಮ ದಿಟ್ಟ ನಿಲುವು,…

4 hours ago