Andolana originals

ಓದುಗರ ಪತ್ರ: ಯುವಜನರ ದಾರಿತಪ್ಪಿಸುವ ಸರ್ಕಾರದ ಕುಟಿಲ ನೀತಿ

ಹೊಸ ವರ್ಷದಂದು ಹಲವರು ಬಂಧು,ಬಳಗ, ಸ್ನೇಹಿತರ ಜತೆ ಸೇರಿ ಸಂಭ್ರಮಿಸಿದರು. ಆದರೆ ಸಾಂಸ್ಕ ತಿಕ ನಗರ ಮೈಸೂರಿನಲ್ಲಿ ದಾಖಲೆ ಮದ್ಯ ಮಾರಾಟವಾಗಿದೆ ಎಂದರೆ ಸುಖವೋ ಅಥವಾ ಸಂಕಟವೋ ತಿಳಿಯದಾಗಿದೆ. ಒಂದೆಡೆ ಕುಡಿತದ ಚಟ, ಡ್ರಗ್ಸ್, ತಂಬಾಕು ಸೇವನೆ, ಸಿಗರೇಟು ಹೀಗೆ ಹಲವಾರು ದುಶ್ಚಟಗಳನ್ನು ದೂರ ಮಾಡಲು ನಿರಂತರವಾಗಿ ಅರಿವು ಕಾರ್ಯಕ್ರಮಗಳು ನಡೆಯುತ್ತಿರುವಾಗ ದಾಖಲೆ ಮಟ್ಟದಲ್ಲಿ ಮದ್ಯ ಮಾರಾಟವಾಗಿದೆ

ಎಂದರೆ ಜನರ ಮನಸ್ಥಿತಿ ಎತ್ತ ಸಾಗಿದೆ? ಈ ಸಂಗತಿ ಪ್ರಜ್ಞಾವಂತರೆಲ್ಲರೂ ತಲೆತಗ್ಗಿಸುವಂತಿದೆ. ರಾಜ್ಯ ಸರ್ಕಾರ ಈ ಸಂದರ್ಭದಲ್ಲಿ ಯಾರ ಮನೆ ಹಾಳಾದರೂ ಪರವಾಗಿಲ್ಲ. ಹೆಂಡತಿ, ಮಕ್ಕಳು ಉಪಾಸವಿದ್ದರೂ ಚಿಂತೆ ಇಲ್ಲ ಎನ್ನುವ ನಿರ್ಧಾರಕ್ಕೆ ಬಂದಂತಿದೆ. ಸರ್ಕಾರ ಬೊಕ್ಕಸ ತುಂಬಿದರೆ ಸಾಕು ಎಂದು ತೀರ್ಮಾನಿಸಿದಂತಿದೆ. ಏಕೆ ಈ ದ್ವಂದ್ವ? ಯುವಜನತೆ ಆಳುವವರ ಇಂತಹ ಕುಟಿಲಗಳ ಬಗ್ಗೆ ಎಚ್ಚೆತ್ತುಕೊಳ್ಳ ಬೇಕಾಗಿದೆ. ಸಾಂಸ್ಕ ತಿಕ ನಗರ ಎಂದು ಹೆಸರಾಗಿರುವ ಮೈಸೂರಿನಲ್ಲಿ ನಿಮ್ಮ ಕೌಶಲಗಳನ್ನು ತೋರಿಸಿ ದಾಖಲೆ ಮಾಡಿ. ಇದರಿಂದ ಎಲ್ಲರಿಗೂ ಹೆಮ್ಮೆ ಅನಿಸುತ್ತದೆ. ಗುಂಡಿನ ಗಮ್ಮತ್ತಿನಿಂದ ತೂರಾಡಿ ದಾಖಲೆ ಮಾಡುವುದು ಬೇಡ. ರಾಜ್ಯ ಸರ್ಕಾರ ತನ್ನ ಸ್ವಾರ್ಥಕ್ಕಾಗಿ ಮದ್ಯ ಮಾರಾಟಕ್ಕೆ ಮನಸ್ಸಿಗೆ ಬಂದಂತೆ ಪರವಾನಗಿ ನೀಡಬಾರದು. ಹೀಗೆ ಗಲ್ಲಿ ಗಲ್ಲಿಗೆ ಒಂದು ಮದ್ಯ ಮಾರಾಟ ಅಂಗಡಿಗೆ ಪರವಾನಗಿ ಕೊಟ್ಟರೆ ಕರ್ನಾಟಕ ಕುಡುಕರ ಸಾಮ್ರಾಜ್ಯವಾಗುತ್ತದೆ. ಇದನ್ನು ನಿಯಂತ್ರಿಸಲು ಪ್ರತಿಯೊಬ್ಬರೂ ಪಣತೊಡಬೇಕು. ಎಲ್ಲರೂ ಮೆಚ್ಚುವ ಹಾಗೆ ಸರಿದಾರಿಯತ್ತ ಸಾಗಬೇಕು.

– ಎಂ. ಎಸ್. ಉಷಾ ಪ್ರಕಾಶ್, ಮೈಸೂರು

ಆಂದೋಲನ ಡೆಸ್ಕ್

Recent Posts

ರಾಜ್ಯದ 50 ವರ್ಷಗಳ ಹಳೆಯ ಎಲ್ಲಾ ಡ್ಯಾಂ ಗೇಟ್‌ ಬದಲಾವಣೆಗೆ ನಿರ್ಧಾರ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ರಾಜ್ಯದಲ್ಲಿ ಇರುವ 50 ವರ್ಷ ಹಳೆಯ ಎಲ್ಲಾ ಜಲಾಶಯಗಳ ಗೇಟ್‌ಗಳನ್ನು ಬದಲಾವಣೆ ಮಾಡಲು ನಮ್ಮ ಸರ್ಕಾರ ನಿರ್ಧಾರ ಮಾಡಿದೆ…

11 hours ago

ಗೃಹ ಬಳಕೆ ಗ್ಯಾಸ್‌ ಸಿಲಿಂಡರ್‌ಗೆ ಸಮಸ್ಯೆ ಇಲ್ಲ: ಸಚಿವ ಮುನಿಯಪ್ಪ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಗ್ಯಾಸ್‌ ಸಿಲಿಂಡರ್‌ ಕೊರತೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಆಹಾರ ಇಲಾಖೆ ಸಚಿವ ಮುನಿಯಪ್ಪ ಪ್ರತಿಕ್ರಿಯೆ…

11 hours ago

ಗುಂಡ್ಲುಪೇಟೆ: ಬರಗಿ ಗ್ರಾಮದಲ್ಲಿ ದೇವಸ್ಥಾನದ ಬಾಗಿಲು ಮುರಿದು ದೇವರನ್ನೇ ಹೊತ್ತೋಯ್ದ ಕಳ್ಳರು

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ತಾಲ್ಲೂಕಿನಾದ್ಯಂತ ಗ್ರಾಮೀಣ ಭಾಗದ ದೇವಸ್ಥಾನಗಳ ಕಳ್ಳತನ ಪ್ರಕರಣ ಸಂಖ್ಯೆ ದಿನದಿಂದ ದಿನಕ್ಕೆ…

11 hours ago

ನಮ್‌ ಜೀವನ ನಮ್ದಲ್ಲಾ.? ಕನ್ನಡದಲ್ಲೇ ಪೋಸ್ಟ್‌ ಹಾಕಿದ ರಶ್ಮಿಕಾ ಮಂದಣ್ಣ

ವಿವಾಹದ ಬಳಿಕ ಭಾರೀ ಸುದ್ದಿಯಲ್ಲಿರುವ ನಟಿ ರಶ್ಮಿಕಾ ಮಂದಣ್ಣ ಅವರು ಕನ್ನಡದಲ್ಲಿಯೇ ಪೋಸ್ಟ್‌ ಒಂದನ್ನು ಹಾಕಿದ್ದಾರೆ. ಇಲ್ಲಿ ತನಕ ನನಗೆ…

12 hours ago

ಅನೈತಿಕ ಸಂಬಂಧ; ಜೋಡಿ ಕೊಲೆ: ಮಹಿಳೆ ಸೋದರನಿಂದಲೇ ಕೃತ್ಯ

ಮಡಿಕೇರಿ: ಅನೈತಿಕ ಸಂಬಂಧ ಹಿನ್ನೆಲೆ ಸಹೋದರಿ ಹಾಗೂ ಆಕೆಯ ಜೊತೆ ಸಹ ಜೀವನ ನಡೆಸುತ್ತಿದ್ದ ವ್ಯಕ್ತಿಯನ್ನು ೭೦ ವರ್ಷದ ವೃದ್ಧ…

12 hours ago

ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕ ಭೈರತಿ ಬಸವರಾಜುಗೆ ಜಾಮೀನು ಮಂಜೂರು

ಬೆಂಗಳೂರು: ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜುಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ ಜಾಮೀನು…

12 hours ago