ಹೊಸ ವರ್ಷದಂದು ಹಲವರು ಬಂಧು,ಬಳಗ, ಸ್ನೇಹಿತರ ಜತೆ ಸೇರಿ ಸಂಭ್ರಮಿಸಿದರು. ಆದರೆ ಸಾಂಸ್ಕ ತಿಕ ನಗರ ಮೈಸೂರಿನಲ್ಲಿ ದಾಖಲೆ ಮದ್ಯ ಮಾರಾಟವಾಗಿದೆ ಎಂದರೆ ಸುಖವೋ ಅಥವಾ ಸಂಕಟವೋ ತಿಳಿಯದಾಗಿದೆ. ಒಂದೆಡೆ ಕುಡಿತದ ಚಟ, ಡ್ರಗ್ಸ್, ತಂಬಾಕು ಸೇವನೆ, ಸಿಗರೇಟು ಹೀಗೆ ಹಲವಾರು ದುಶ್ಚಟಗಳನ್ನು ದೂರ ಮಾಡಲು ನಿರಂತರವಾಗಿ ಅರಿವು ಕಾರ್ಯಕ್ರಮಗಳು ನಡೆಯುತ್ತಿರುವಾಗ ದಾಖಲೆ ಮಟ್ಟದಲ್ಲಿ ಮದ್ಯ ಮಾರಾಟವಾಗಿದೆ
ಎಂದರೆ ಜನರ ಮನಸ್ಥಿತಿ ಎತ್ತ ಸಾಗಿದೆ? ಈ ಸಂಗತಿ ಪ್ರಜ್ಞಾವಂತರೆಲ್ಲರೂ ತಲೆತಗ್ಗಿಸುವಂತಿದೆ. ರಾಜ್ಯ ಸರ್ಕಾರ ಈ ಸಂದರ್ಭದಲ್ಲಿ ಯಾರ ಮನೆ ಹಾಳಾದರೂ ಪರವಾಗಿಲ್ಲ. ಹೆಂಡತಿ, ಮಕ್ಕಳು ಉಪಾಸವಿದ್ದರೂ ಚಿಂತೆ ಇಲ್ಲ ಎನ್ನುವ ನಿರ್ಧಾರಕ್ಕೆ ಬಂದಂತಿದೆ. ಸರ್ಕಾರ ಬೊಕ್ಕಸ ತುಂಬಿದರೆ ಸಾಕು ಎಂದು ತೀರ್ಮಾನಿಸಿದಂತಿದೆ. ಏಕೆ ಈ ದ್ವಂದ್ವ? ಯುವಜನತೆ ಆಳುವವರ ಇಂತಹ ಕುಟಿಲಗಳ ಬಗ್ಗೆ ಎಚ್ಚೆತ್ತುಕೊಳ್ಳ ಬೇಕಾಗಿದೆ. ಸಾಂಸ್ಕ ತಿಕ ನಗರ ಎಂದು ಹೆಸರಾಗಿರುವ ಮೈಸೂರಿನಲ್ಲಿ ನಿಮ್ಮ ಕೌಶಲಗಳನ್ನು ತೋರಿಸಿ ದಾಖಲೆ ಮಾಡಿ. ಇದರಿಂದ ಎಲ್ಲರಿಗೂ ಹೆಮ್ಮೆ ಅನಿಸುತ್ತದೆ. ಗುಂಡಿನ ಗಮ್ಮತ್ತಿನಿಂದ ತೂರಾಡಿ ದಾಖಲೆ ಮಾಡುವುದು ಬೇಡ. ರಾಜ್ಯ ಸರ್ಕಾರ ತನ್ನ ಸ್ವಾರ್ಥಕ್ಕಾಗಿ ಮದ್ಯ ಮಾರಾಟಕ್ಕೆ ಮನಸ್ಸಿಗೆ ಬಂದಂತೆ ಪರವಾನಗಿ ನೀಡಬಾರದು. ಹೀಗೆ ಗಲ್ಲಿ ಗಲ್ಲಿಗೆ ಒಂದು ಮದ್ಯ ಮಾರಾಟ ಅಂಗಡಿಗೆ ಪರವಾನಗಿ ಕೊಟ್ಟರೆ ಕರ್ನಾಟಕ ಕುಡುಕರ ಸಾಮ್ರಾಜ್ಯವಾಗುತ್ತದೆ. ಇದನ್ನು ನಿಯಂತ್ರಿಸಲು ಪ್ರತಿಯೊಬ್ಬರೂ ಪಣತೊಡಬೇಕು. ಎಲ್ಲರೂ ಮೆಚ್ಚುವ ಹಾಗೆ ಸರಿದಾರಿಯತ್ತ ಸಾಗಬೇಕು.
– ಎಂ. ಎಸ್. ಉಷಾ ಪ್ರಕಾಶ್, ಮೈಸೂರು
ಸ್ವಾಗತಾರ್ಹ ನಡೆ! ಜಾತಿ ಮೀರಿ ಪ್ರೀತಿಸಿದರೆ ಕುಂದಲ್ಲವದು ಮರ್ಯಾದೆಗೆ ಬದಲಿಗೆ ಹೆಚ್ಚುವುದು ಮರ್ಯಾದೆ ಗೌರವ! ಜಾತಿ ಕಟ್ಟಳೆ ಮುರಿವ ಸಮತೆಯ…
ಸಾಂಸ್ಕ ತಿಕ ನಗರಿ ಮೈಸೂರಿನಲ್ಲಿ ಪೊಲೀಸ್ ಇಲಾಖೆಗೆ ಸೇರಿದ ಬ್ಯಾರಿಕೇಡ್ಗಳು ಬಳಕೆಯಾದ ನಂತರ ನಿರ್ಲಕ್ಷ್ಯಕ್ಕೆ ಒಳಪಡುತ್ತಿವೆ. ಅವುಗಳನ್ನು ಸುರಕ್ಷಿತವಾಗಿ ಒಂದೆಡೆ…
ಲೊಕ್ಕನಹಳ್ಳಿ ಬಳಿ ಶಾಲಾ-ಕಾಲೇಜು ವಿದ್ಯಾರ್ಥಿಗಳ ಪ್ರತಿಭಟನೆ; ಅಧಿಕಾರಿಗಳ ವಿರುದ್ಧ ಆಕ್ರೋಶ ಹನೂರು: ಒಂದೆಡೆ ಸಮರ್ಪಕ ಬಸ್ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿ ಶಾಲಾ-ಕಾಲೇಜು…
ನವೀನ್ ಡಿಸೋಜ ೧೮,೫೦೦ ಹೆಕ್ಟೇರ್ ಪ್ರದೇಶದಲ್ಲಿ ಭತ್ತ ಬೆಳೆದಿರುವ ರೈತರು; ಹವಾಮಾನ ವೈಪರೀತ್ಯದ ನಡುವೆಯೂ ಕಟಾವು ಕಾರ್ಯ ಚುರುಕು ಮಡಿಕೇರಿ:…
ಚಾಮರಾಜನಗರ: ತೀವ್ರ ಚಳಿಯಿಂದ ತತ್ತರಿಸಿದ್ದ ಜಿಲ್ಲೆಯ ಜನತೆ ಕಳೆದ ೨-೩ ದಿನಗಳಿಂದ ಎದುರಾಗಿರುವ ಮೋಡ ಕವಿದ ವಾತಾವರಣ ಮತ್ತು ಅಲ್ಲಲ್ಲಿ…
ಆನಂದ್ ಹೊಸೂರು ೪ ರಿಂದ ೬ ಲಕ್ಷ ರೂ.ಗೂ ಅಧಿಕ ಬೆಲೆಬಾಳುವ ದುಬಾರಿ ಎತ್ತುಗಳು ಆಕರ್ಷಣೆ; ರೈತರ ಸಂಭ್ರಮ ಹೊಸೂರು:…