ಹೊಸ ವರ್ಷದಂದು ಹಲವರು ಬಂಧು,ಬಳಗ, ಸ್ನೇಹಿತರ ಜತೆ ಸೇರಿ ಸಂಭ್ರಮಿಸಿದರು. ಆದರೆ ಸಾಂಸ್ಕ ತಿಕ ನಗರ ಮೈಸೂರಿನಲ್ಲಿ ದಾಖಲೆ ಮದ್ಯ ಮಾರಾಟವಾಗಿದೆ ಎಂದರೆ ಸುಖವೋ ಅಥವಾ ಸಂಕಟವೋ ತಿಳಿಯದಾಗಿದೆ. ಒಂದೆಡೆ ಕುಡಿತದ ಚಟ, ಡ್ರಗ್ಸ್, ತಂಬಾಕು ಸೇವನೆ, ಸಿಗರೇಟು ಹೀಗೆ ಹಲವಾರು ದುಶ್ಚಟಗಳನ್ನು ದೂರ ಮಾಡಲು ನಿರಂತರವಾಗಿ ಅರಿವು ಕಾರ್ಯಕ್ರಮಗಳು ನಡೆಯುತ್ತಿರುವಾಗ ದಾಖಲೆ ಮಟ್ಟದಲ್ಲಿ ಮದ್ಯ ಮಾರಾಟವಾಗಿದೆ
ಎಂದರೆ ಜನರ ಮನಸ್ಥಿತಿ ಎತ್ತ ಸಾಗಿದೆ? ಈ ಸಂಗತಿ ಪ್ರಜ್ಞಾವಂತರೆಲ್ಲರೂ ತಲೆತಗ್ಗಿಸುವಂತಿದೆ. ರಾಜ್ಯ ಸರ್ಕಾರ ಈ ಸಂದರ್ಭದಲ್ಲಿ ಯಾರ ಮನೆ ಹಾಳಾದರೂ ಪರವಾಗಿಲ್ಲ. ಹೆಂಡತಿ, ಮಕ್ಕಳು ಉಪಾಸವಿದ್ದರೂ ಚಿಂತೆ ಇಲ್ಲ ಎನ್ನುವ ನಿರ್ಧಾರಕ್ಕೆ ಬಂದಂತಿದೆ. ಸರ್ಕಾರ ಬೊಕ್ಕಸ ತುಂಬಿದರೆ ಸಾಕು ಎಂದು ತೀರ್ಮಾನಿಸಿದಂತಿದೆ. ಏಕೆ ಈ ದ್ವಂದ್ವ? ಯುವಜನತೆ ಆಳುವವರ ಇಂತಹ ಕುಟಿಲಗಳ ಬಗ್ಗೆ ಎಚ್ಚೆತ್ತುಕೊಳ್ಳ ಬೇಕಾಗಿದೆ. ಸಾಂಸ್ಕ ತಿಕ ನಗರ ಎಂದು ಹೆಸರಾಗಿರುವ ಮೈಸೂರಿನಲ್ಲಿ ನಿಮ್ಮ ಕೌಶಲಗಳನ್ನು ತೋರಿಸಿ ದಾಖಲೆ ಮಾಡಿ. ಇದರಿಂದ ಎಲ್ಲರಿಗೂ ಹೆಮ್ಮೆ ಅನಿಸುತ್ತದೆ. ಗುಂಡಿನ ಗಮ್ಮತ್ತಿನಿಂದ ತೂರಾಡಿ ದಾಖಲೆ ಮಾಡುವುದು ಬೇಡ. ರಾಜ್ಯ ಸರ್ಕಾರ ತನ್ನ ಸ್ವಾರ್ಥಕ್ಕಾಗಿ ಮದ್ಯ ಮಾರಾಟಕ್ಕೆ ಮನಸ್ಸಿಗೆ ಬಂದಂತೆ ಪರವಾನಗಿ ನೀಡಬಾರದು. ಹೀಗೆ ಗಲ್ಲಿ ಗಲ್ಲಿಗೆ ಒಂದು ಮದ್ಯ ಮಾರಾಟ ಅಂಗಡಿಗೆ ಪರವಾನಗಿ ಕೊಟ್ಟರೆ ಕರ್ನಾಟಕ ಕುಡುಕರ ಸಾಮ್ರಾಜ್ಯವಾಗುತ್ತದೆ. ಇದನ್ನು ನಿಯಂತ್ರಿಸಲು ಪ್ರತಿಯೊಬ್ಬರೂ ಪಣತೊಡಬೇಕು. ಎಲ್ಲರೂ ಮೆಚ್ಚುವ ಹಾಗೆ ಸರಿದಾರಿಯತ್ತ ಸಾಗಬೇಕು.
– ಎಂ. ಎಸ್. ಉಷಾ ಪ್ರಕಾಶ್, ಮೈಸೂರು
ಮೈಸೂರು : ನಗರದ ದಟ್ಟಗಳ್ಳಿಯಲ್ಲಿರುವ ಮಾರಾ ಬಾರ್ ಅಂಡ್ ರೆಸ್ಟೋರೆಂಟ್ (ಫಾಕ್ಸ್ಡೆನ್ಬಾರ್) ನಲ್ಲಿ ಸಂಭವಿಸಿದ ಅಗ್ನಿದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ…
ನನ್ನ ಆದರ್ಶ ವ್ಯಕ್ತಿ ಗಾಂಧಿ ಮಹಾತ್ಮ ಗಾಂಧೀಜಿ ತಮ್ಮ ಜೀವನದಲ್ಲಿ ಬಹಳ ಕಷ್ಟಪಟ್ಟು ಮೇಲೆ ಬಂದರು. ಭಾರತದ ಸ್ವಾತಂತ್ರ್ಯ ಕ್ಕಾಗಿ…
ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಪ್ರಾಣತ್ಯಾಗ ಮಾಡಿದ ಮಹನೀಯರಲ್ಲಿ ಎದ್ದು ಕಾಣುವ ಹೆಸರು ಕರ್ನಾಟಕದ ಹೆಮ್ಮೆಯ ಪುತ್ರ ಮೈಲಾರ…
೧೮೮೭ನೇ ಇಸವಿಯಲ್ಲಿ ನಾನು ಮೆಟ್ರಿಕ್ ಪರೀಕ್ಷೆಯಲ್ಲಿ ತೇರ್ಗಡೆಯಾದೆನು. ಮೆಟ್ರಿಕ್ ಪರೀಕ್ಷೆಗೆ ಬೊಂಬಾಯಿ ಮತ್ತು ಅಹಮದಾಬಾದ್ ಎರಡೂ ಕೇಂದ್ರಗಳಾಗಿದ್ದವು. ನಾನು ಹತ್ತಿರದ…
ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…