Andolana originals

ಓದುಗರ ಪತ್ರ: ಯುವಜನರ ದಾರಿತಪ್ಪಿಸುವ ಸರ್ಕಾರದ ಕುಟಿಲ ನೀತಿ

ಹೊಸ ವರ್ಷದಂದು ಹಲವರು ಬಂಧು,ಬಳಗ, ಸ್ನೇಹಿತರ ಜತೆ ಸೇರಿ ಸಂಭ್ರಮಿಸಿದರು. ಆದರೆ ಸಾಂಸ್ಕ ತಿಕ ನಗರ ಮೈಸೂರಿನಲ್ಲಿ ದಾಖಲೆ ಮದ್ಯ ಮಾರಾಟವಾಗಿದೆ ಎಂದರೆ ಸುಖವೋ ಅಥವಾ ಸಂಕಟವೋ ತಿಳಿಯದಾಗಿದೆ. ಒಂದೆಡೆ ಕುಡಿತದ ಚಟ, ಡ್ರಗ್ಸ್, ತಂಬಾಕು ಸೇವನೆ, ಸಿಗರೇಟು ಹೀಗೆ ಹಲವಾರು ದುಶ್ಚಟಗಳನ್ನು ದೂರ ಮಾಡಲು ನಿರಂತರವಾಗಿ ಅರಿವು ಕಾರ್ಯಕ್ರಮಗಳು ನಡೆಯುತ್ತಿರುವಾಗ ದಾಖಲೆ ಮಟ್ಟದಲ್ಲಿ ಮದ್ಯ ಮಾರಾಟವಾಗಿದೆ

ಎಂದರೆ ಜನರ ಮನಸ್ಥಿತಿ ಎತ್ತ ಸಾಗಿದೆ? ಈ ಸಂಗತಿ ಪ್ರಜ್ಞಾವಂತರೆಲ್ಲರೂ ತಲೆತಗ್ಗಿಸುವಂತಿದೆ. ರಾಜ್ಯ ಸರ್ಕಾರ ಈ ಸಂದರ್ಭದಲ್ಲಿ ಯಾರ ಮನೆ ಹಾಳಾದರೂ ಪರವಾಗಿಲ್ಲ. ಹೆಂಡತಿ, ಮಕ್ಕಳು ಉಪಾಸವಿದ್ದರೂ ಚಿಂತೆ ಇಲ್ಲ ಎನ್ನುವ ನಿರ್ಧಾರಕ್ಕೆ ಬಂದಂತಿದೆ. ಸರ್ಕಾರ ಬೊಕ್ಕಸ ತುಂಬಿದರೆ ಸಾಕು ಎಂದು ತೀರ್ಮಾನಿಸಿದಂತಿದೆ. ಏಕೆ ಈ ದ್ವಂದ್ವ? ಯುವಜನತೆ ಆಳುವವರ ಇಂತಹ ಕುಟಿಲಗಳ ಬಗ್ಗೆ ಎಚ್ಚೆತ್ತುಕೊಳ್ಳ ಬೇಕಾಗಿದೆ. ಸಾಂಸ್ಕ ತಿಕ ನಗರ ಎಂದು ಹೆಸರಾಗಿರುವ ಮೈಸೂರಿನಲ್ಲಿ ನಿಮ್ಮ ಕೌಶಲಗಳನ್ನು ತೋರಿಸಿ ದಾಖಲೆ ಮಾಡಿ. ಇದರಿಂದ ಎಲ್ಲರಿಗೂ ಹೆಮ್ಮೆ ಅನಿಸುತ್ತದೆ. ಗುಂಡಿನ ಗಮ್ಮತ್ತಿನಿಂದ ತೂರಾಡಿ ದಾಖಲೆ ಮಾಡುವುದು ಬೇಡ. ರಾಜ್ಯ ಸರ್ಕಾರ ತನ್ನ ಸ್ವಾರ್ಥಕ್ಕಾಗಿ ಮದ್ಯ ಮಾರಾಟಕ್ಕೆ ಮನಸ್ಸಿಗೆ ಬಂದಂತೆ ಪರವಾನಗಿ ನೀಡಬಾರದು. ಹೀಗೆ ಗಲ್ಲಿ ಗಲ್ಲಿಗೆ ಒಂದು ಮದ್ಯ ಮಾರಾಟ ಅಂಗಡಿಗೆ ಪರವಾನಗಿ ಕೊಟ್ಟರೆ ಕರ್ನಾಟಕ ಕುಡುಕರ ಸಾಮ್ರಾಜ್ಯವಾಗುತ್ತದೆ. ಇದನ್ನು ನಿಯಂತ್ರಿಸಲು ಪ್ರತಿಯೊಬ್ಬರೂ ಪಣತೊಡಬೇಕು. ಎಲ್ಲರೂ ಮೆಚ್ಚುವ ಹಾಗೆ ಸರಿದಾರಿಯತ್ತ ಸಾಗಬೇಕು.

– ಎಂ. ಎಸ್. ಉಷಾ ಪ್ರಕಾಶ್, ಮೈಸೂರು

ಆಂದೋಲನ ಡೆಸ್ಕ್

Recent Posts

ಗ್ಯಾಸ್ ಬೆಲೆ ಗಗನಕ್ಕೆ : ಕೇಂದ್ರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು : ವಿಧಾನಸಭಾ ಚುನಾವಣೆ ಮುಗಿಯುತ್ತಿದ್ದಂತೆ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರವನ್ನು 993 ರೂ. ಏಕಾಏಕಿ ಹೆಚ್ಚಿಸಿರುವ ಕೇಂದ್ರ ಸರ್ಕಾರದ…

6 hours ago

ಸಮೀಕ್ಷೆ ಭವಿಷ್ಯ : ದ್ರಾವಿಡ ಕೋಟೆ ಅಲುಗಾಟ ; ಕಿಂಗ್‌ ಮೇಕರ್‌ ಆಗ್ತಾರಾ ದಳಪತಿ ವಿಜಯ್?‌

ಚೆನ್ನೈ : ತಮಿಳುನಾಡಿನ ದಶಕಗಳ ದ್ರಾವಿಡ ರಾಜಕಾರಣಕ್ಕೆ ಸವಾಲು ಹಾಕಿ ಅಖಾಡಕ್ಕಿಳಿದಿರುವ ದಳಪತಿ ವಿಜಯ್ ಅವರ ‘ತಮಿಳಗ ವೆಟ್ರಿ ಕಳಗಂ’…

6 hours ago

ಕಾರ್ಮಿಕರು ದೇಶದ ಆರ್ಥಿಕ, ಸಾಮಾಜಿಕ, ಅಭಿವೃದ್ಧಿಯ ಶಿಲ್ಪಿಗಳು : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : ಕಾರ್ಮಿಕರು ದೇಶದ ಆರ್ಥಿಕ ಸಾಮಾಜಿಕ, ಅಭಿವೃದ್ಧಿಯ ಶಿಲ್ಪಿಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಕೆಪಿಸಿಸಿ ಕಚೇರಿಯಲ್ಲಿ…

9 hours ago

ಹೊರ್ಮುಜ್‌ ಅನ್ನು ʼಟ್ರಂಪ್‌ ಜಲಸಂಧಿʼ ಎಂಬ ಹೆಸರಿನ ನಕ್ಷೆ ಹಂಚಿಕೊಂಡ ಟ್ರಂಪ್‌

ವಾಷಿಂಗ್ಟನ್‌ : ಮಧ್ಯಪ್ರಾಚ್ಯದಲ್ಲಿ ಅಮೆರಿಕಾ-ಇರಾನ್‌ ನಡುವಿನ ಸಂಘರ್ಷದಲ್ಲಿ ಹೊರ್ಮುಜ್‌ ಜಲಸಂಧಿ ಕೇಂದ್ರಬಿಂದುವಾಗಿ ಹೊರಹೊಮ್ಮಿದೆ. ಈಗಾಗಲೇ ಅಮೆರಿಕ ನೌಕಾಪಡೆ ಈ ಜಲಸಂಧಿಯಲ್ಲಿ…

10 hours ago

ಮೈಸೂರು | ಮರುಮೌಲ್ಯಮಾಪನ ; ರಾಜ್ಯಕ್ಕೆ 10ನೇ ಸ್ಥಾನ ಪಡೆದ ಮಹಾರಾಣಿ ಪಿಯು ಕಾಲೇಜಿನ ವಿದ್ಯಾರ್ಥಿನಿ

ರಾಜ್ಯಕ್ಕೆ 10ನೇ ಸ್ಥಾನ ಪಡೆದ ಮಹಾರಾಣಿ ಪಿಯು ಕಾಲೇಜಿನ ವಿದ್ಯಾರ್ಥಿನಿ  ಮೈಸೂರು : ಬಡತನದ ಬೇಗೆಯ ನಡುವೆಯೂ ಸಾಧನೆಯ ಛಲ…

11 hours ago

ಜಾತ್ರೆ, ಧಾರ್ಮಿಕ ಆಚರಣೆಯಿಂದ ಸಂಸ್ಕೃತಿ, ಪರಂಪರೆಯ ಪುನರುತ್ಥಾನ : ಈಶ್ವರ ಖಂಡ್ರೆ

ಮಳವಳ್ಳಿ : ಜಾತ್ರೆ, ಉತ್ಸವ, ರಾಜಗೋಪುರ ಲೋಕಾರ್ಪಣೆಯಂತಹ ಧಾರ್ಮಿಕ ಆಚರಣೆಗಳಿಂದ ನಮ್ಮಲ್ಲಿ ಹೊಸ ಚೈತನ್ಯ ಮೂಡುವುದರ ಜೊತೆಗೆ ನಮ್ಮ ಸಂಸ್ಕೃತಿ,…

11 hours ago