ಓದುಗರ ಪತ್ರ
ಮೈಸೂರಿನಲ್ಲಿರುವ ಶಾಸ್ತ್ರೀಯ ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರವನ್ನು ಬೆಂಗಳೂರಿಗೆ ಸ್ಥಳಾಂತರಿಸುವ ಬಗೆಗಿನ ಆಲೋಚನೆಯನ್ನು ಕೈಬಿಡಬೇಕು ಎಂದು ಕನ್ನಡ ಕ್ರಿಯಾ ಸಮಿತಿ ಮತ್ತು ಶಾಸ್ತ್ರೀಯ ಕನ್ನಡ ಭಾಷಾ ಹೋರಾಟ ಸಮಿತಿ ನಿರ್ಣಯ ಕೈಗೊಂಡಿರುವುದು ಶ್ಲಾಘನೀಯ.
ಸ್ವಾಯತ್ತತೆ ಪಡೆದ ಬಳಿಕ ಶಾಸ್ತ್ರೀಯ ಕನ್ನಡಅತ್ಯುನ್ನತ ಅಧ್ಯಯನ ಕೇಂದ್ರವನ್ನು ಬೆಂಗಳೂರಿಗೆ ಸ್ಥಳಾಂತರಿಸಿದರೆ ಮಾತ್ರ ಅಭಿವೃದ್ಧಿ ಕಾರ್ಯಗಳು ಪರಿಣಾಮಕಾರಿಯಾಗಿ ನಡೆಯಲು ಸಾಧ್ಯ ಎಂದು ಕನ್ನಡ ಅಭಿವೃದ್ಧಿ ಪ್ರಾಽಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆಯವರು ಹೇಳಿರುವುದು ಸೂಕ್ತವಲ್ಲ. ಕಳೆದ ೧೬ ವರ್ಷಗಳಿಂದಲೂ ಇದೇ ವಿಚಾರವನ್ನು ಮುಂದಿಟ್ಟುಕೊಂಡು ಮೈಸೂರಿನ ಶಾಸ್ತ್ರೀಯ ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರವು ತನ್ನ ಕಾರ್ಯವನ್ನು ಪೂರ್ಣಪ್ರಮಾಣದಲ್ಲಿ ಆರಂಭಿಸದಿರುವುದು ಬೇಸರದ ಸಂಗತಿ. ಇನ್ನಾದರೂ ಸ್ಥಳಾಂತರಿಸುವ ವಿಷಯಕ್ಕೆ ಇತಿಶ್ರೀ ಹಾಡಿ ಕನ್ನಡ ಭಾಷೆಯನ್ನು ಬೆಳೆಸುವ ಕಡೆಗೆ ಗಮನ ಹರಿಸುವುದು ಒಳ್ಳೆಯದು.
-ಬೆಸಗರಹಳ್ಳಿ ರವಿಪ್ರಸಾದ್, ಮೈಸೂರು.
ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…
ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…
ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…
ಪಂಜು ಗಂಗೊಳ್ಳಿ ಅವರ ವಾರದ ಅಂಕಣ ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…
ಕೇಶವ್ ಜೆಎಸ್ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯಿಂದ ಅಚ್ಚರಿಯ ಸಂಶೋಧನೆ! ಮೈಸೂರು: ಬಸವನಹುಳುಗಳನ್ನು ಜಮೀನುಗಳಲ್ಲಿ ರೈತರು ನೋಡಿದರೆ, ನಮ್ಮ…
ಕೆ.ಬಿ.ರಮೇಶನಾಯಕ ನಮೂನೆ-೬ ಸಲ್ಲಿಸಿ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಇನ್ನೂ ಇದೆ ಅವಕಾಶ ಮೈಸೂರು: ಮುಂಬರುವ ವಿಧಾನಸಭೆ, ಲೋಕಸಭಾ ಚುನಾವಣೆಗೂ…