Andolana originals

ಓದುಗರ ಪತ್ರ: ಎನ್‌ಪಿಎ ಹೆಚ್ಚಳ ಆತಂಕಕಾರಿ

ಕಳೆದ ಹತ್ತು ವರ್ಷಗಳಲ್ಲಿ ದೇಶದ ವಿವಿಧ ಬ್ಯಾಂಕುಗಳಲ್ಲಿ ರೈಟ್‌ ಆಫ್ ಮಾಡಿರುವ ಒಟ್ಟು ಸಾಲದ ಮೊತ್ತ (ಎನ್‌ಪಿಎ) 16.35 ಲಕ್ಷ ಕೋಟಿ ರೂ. ಎಂದು ಕೇಂದ್ರ ವಿತ್ತ ಸಚಿವ ನಿರ್ಮಲಾ ಸೀತಾರಾಮನ್ ಇತ್ತೀಚಿಗೆ ಲೋಕಸಭೆಗೆ ತಿಳಿಸಿದ್ದಾರೆ.
2023-24ನೇ ವಿತ್ತೀಯ ವರ್ಷದಲ್ಲಿ ಒಟ್ಟು 1.70 ಲಕ್ಷ ಕೋಟಿ ರೂ. ವಸೂಲಾಗದ ಸಾಲವನ್ನು ಲೈಟ್‌ಆಫ್ ಮಾಡಲಾಗಿದೆ ಎಂದೂ ಮಾಹಿತಿ ನೀಡಿದ್ದಾರೆ. ಈ ರೀತಿಯ ವಸೂಲಾಗದ ಸಾಲ ಅಥವಾ ಅನುತ್ಪಾದಕ ಆಸ್ತಿ (ಎನ್‌ಪಿಎ) ಪ್ರತಿ ಬ್ಯಾಂಕಿನಲ್ಲೂ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಲೇ ಇದೆ. ಇವುಗಳ ವಸೂಲಾತಿಯ ಬಗ್ಗೆ ಸಂಬಂಧಿಸಿದ ಬ್ಯಾಂಕುಗಳ ಆಡಳಿತ ಮಂಡಳಿಗಳು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳದಿರುವುದೇ ಎನ್‌ಪಿಎಗಳ ಹೆಚ್ಚಳಕ್ಕೆ ಕಾರಣವಾಗಿರಬಹದು. ಉದ್ಯಮಿ ವಿಜಯ್ ಮಲ್ಯ ಕೂಡ ದೇಶದ ಹಲವಾರು ಬ್ಯಾಂಕುಗಳಿಗೆ 9,000 ಸಾವಿರ ಕೋಟಿ ರೂ.ಗಳಷ್ಟು ಸಾಲದ ಹಣವನ್ನು ಮರು ಪಾವತಿಸದೇ ವಿದೇಶದಲ್ಲಿ ಅಡಗಿರುವುದು ಗುಟ್ಟಿನ ವಿಷಯವೇನಲ್ಲ. ಅವರನ್ನು ಭಾರತಕ್ಕೆ ಕರೆತರುವ ಕಾನೂನಿನ ಪ್ರಕ್ರಿಯೆಗೆ ಬಾಲಗ್ರಹ ಬಡಿದಂತೆ ಕಾಣುತ್ತದೆ. ವಿಜಯ್ ಮಲ್ಯರಂತೆ ಇನ್ನೂ ಹಲವಾರು ಉದ್ಯಮಿಗಳು ದೇಶದ ಸಾರ್ವಜನಿಕ ಬ್ಯಾಂಕುಗಳಿಂದ ಪಡೆದ ಲಕ್ಷಾಂತರ ಕೋಟಿ ರೂ. ಸಾಲ ವಸೂಲಾಗದೇ ಎನ್‌ಪಿಎ ಆಗುತ್ತಿರುವುದು ಅತ್ಯಂತ ಆತಂಕಕಾರಿಯಾದ ವಿಚಾರ.
ಆ‌ರ್‌ಬಿಐ ನೀಡಿರುವ ಮಾಹಿತಿಯಂತೆ 2024ರ ಡಿಸೆಂಬರ್ ಅಂತ್ಯಕ್ಕೆ ವಾಣಿಜ್ಯ ಬ್ಯಾಂಕುಗಳಳಲ್ಲಿ ತಲಾ 1,000 ಕೋಟಿ ರೂ.ಗಳಿಂತ ಹೆಚ್ಚಿನ ಸಾಲ ಪಡೆದು ಅದನ್ನು ಸರಿಯಾಗಿ ಮರಳಿಸದ 29 ಕಂಪೆನಿಗಳು ದೇಶದಲ್ಲಿ ಇವೆ. ಬ್ಯಾಂಕಿನಲ್ಲಿ ಇರುವ ಹಣ ದೇಶದ ಜನರ ಹಣ. ಇದನ್ನು ಮನಸೋ ಇಚ್ಛೆ ಸಾಲ ನೀಡಿ ಅನುತ್ಪಾದಕ ಆಸ್ತಿಯನ್ನಾಗಿ ಮಾಡುವುದು ಸರಿಯಲ್ಲ. ಕೇಂದ್ರ ಸರ್ಕಾರ ಹಾಗೂ ರಿಸರ್ವ್ ಬ್ಯಾಂಕ್‌ ಆಗಿಂದಾಗ್ಗೆ ಬ್ಯಾಂಕುಗಳ ಎನ್‌ಪಿಎ ಹೆಚ್ಚಾಗದಂತೆ ಕ್ರಮವಹಿಸಬೇಕು.
-ಕೆ.ವಿ.ವಾಸು, ವಕೀಲರು, ವಿವೇಕಾನಂದ ನಗರ, ಮೈಸೂರು.

ಆಂದೋಲನ ಡೆಸ್ಕ್

Recent Posts

ಎಲ್‌ಪಿಜಿ ಸಿಲಿಂಡರ್‌ ಸಿಗುತ್ತದೆ, ಜನರಲ್ಲಿ ಭೀತಿ ಬೇಡ : ಕೇಂದ್ರ

ಹೊಸದಿಲ್ಲಿ : ಮಧ್ಯಪ್ರಾಚ್ಯದ ಸಂಘರ್ಷದಿಂದ ಉಂಟಾಗಿರುವ ಎಲ್‌ಪಿಜಿ ಸಿಲಿಂಡರ್ ಕೊರತೆ ಬಗ್ಗೆ ಸಾರ್ವಜನಿಕರಲ್ಲಿ ಉದಿಸಿದ ಆತಂಕದ ನಡುವೆ, ಕೇಂದ್ರ ಸರ್ಕಾರವು…

7 hours ago

IPL 2026 | ಮಾ.28ರಿಂದ ಪಂದ್ಯ ಆರಂಭ, ಬೆಂಗಳೂರಿನಲ್ಲಿ ಉದ್ಘಾಟನೆ, ಹೀಗಿದೆ ವೇಳಾಪಟ್ಟಿ

ಬೆಂಗಳೂರು : ಬಹುನಿರೀಕ್ಷಿತ 2026ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟಿ-20 ಕ್ರಿಕೆಟ್ ಟೂರ್ನಿಯ ಮೊದಲ ಹಂತದ ವೇಳಾಪಟ್ಟಿಯನ್ನು…

7 hours ago

“ಸಂಶೋಧನೆಗೆ AI ನಿಂದಲ್ಲ, ಸ್ವಂತಿಕೆಯಿಂದ ಕೂಡಿರಲಿ” : ಕುಲಪತಿ ಶರಣಪ್ಪ ಹಲಸೆ ಸಲಹೆ

ಮೈಸೂರು : ಸಂಶೋಧನೆ ಮಾಡುವಾಗ ವಿದ್ಯಾರ್ಥಿಗಳು ತಮ್ಮ ಸಂಪೂರ್ಣ ಪರಿಶ್ರಮದಿಂದ ಸಂಶೋಧನೆಗಳನ್ನು ಸಿದ್ಧಪಡಿಸಬೇಕು, AI ತಂತ್ರಜ್ಞಾನದ ಕಡೆ ಮೊರೆಹೋಗುವುದನ್ನು ಕಡಿಮೆ…

7 hours ago

ಖಾತೆ ಮಾಡಿಕೊಡದ ಅಧಿಕಾರಿಗಳು : ರೈತನಿಂದ ವಿಷ ಸೇವನೆ ಯತ್ನ

ಸಾಲಿಗ್ರಾಮ : ತನ್ನ ಜಮೀನಿಗೆ ಸಂಬಂಧಿಸಿದ ಖಾತೆಯನ್ನು ಮಾಡಿಕೊಡದೆ ಸಾಲಿಗ್ರಾಮ ನಾಡಕಚೇರಿ ಅವರು ಸತಾಯಿಸುತ್ತಿದ್ದಾರೆ ಎಂದು ಮನನೊಂದು ಸಾಲಿಗ್ರಾಮದ ನಾಡ…

7 hours ago

ಹಡುಗುಗಳ ಮೇಲೆ ದಾಳಿ : ಇಬ್ಬರು ಭಾರತೀಯರ ಸಾವು

ಹೊಸದಿಲ್ಲಿ : ಪಶ್ಚಿಮ ಏಷ್ಯಾದ ಸಂಘರ್ಷ ಪೀಡಿತ ಸಮುದ್ರ ವಲಯದಲ್ಲಿ ವ್ಯಾಪಾರಿ ಹಡಗುಗಳ ಮೇಲೆ ನಡೆದ ದಾಳಿಯಲ್ಲಿ ಇಬ್ಬರು ಭಾರತೀಯರು…

8 hours ago

ಗುಂಡ್ಲುಪೇಟೆ | ಕತ್ತು ಕೂಯ್ದು ವ್ಯಕ್ತಿಯ ಬರ್ಬರ ಹತ್ಯೆ

ಗುಂಡ್ಲುಪೇಟೆ : ಪಟ್ಟಣದ ಹೊರವಲಯದ ವಿಜಯಪುರ ಅಮಾನಿ ಕೆರೆಯ ಬಳಿ ವ್ಯಕ್ತಿಯೊಬ್ಬ ಬರ್ಬರವಾಗಿ ಕೊಲೆಯಾಗಿರುವ ಘಟನೆ ನಡೆದಿದೆ. ತಾಲ್ಲೂಕಿನ ಮೂಖಹಳ್ಳಿ…

8 hours ago