Andolana originals

ಓದುಗರ ಪತ್ರ: ಎನ್‌ಪಿಎ ಹೆಚ್ಚಳ ಆತಂಕಕಾರಿ

ಕಳೆದ ಹತ್ತು ವರ್ಷಗಳಲ್ಲಿ ದೇಶದ ವಿವಿಧ ಬ್ಯಾಂಕುಗಳಲ್ಲಿ ರೈಟ್‌ ಆಫ್ ಮಾಡಿರುವ ಒಟ್ಟು ಸಾಲದ ಮೊತ್ತ (ಎನ್‌ಪಿಎ) 16.35 ಲಕ್ಷ ಕೋಟಿ ರೂ. ಎಂದು ಕೇಂದ್ರ ವಿತ್ತ ಸಚಿವ ನಿರ್ಮಲಾ ಸೀತಾರಾಮನ್ ಇತ್ತೀಚಿಗೆ ಲೋಕಸಭೆಗೆ ತಿಳಿಸಿದ್ದಾರೆ.
2023-24ನೇ ವಿತ್ತೀಯ ವರ್ಷದಲ್ಲಿ ಒಟ್ಟು 1.70 ಲಕ್ಷ ಕೋಟಿ ರೂ. ವಸೂಲಾಗದ ಸಾಲವನ್ನು ಲೈಟ್‌ಆಫ್ ಮಾಡಲಾಗಿದೆ ಎಂದೂ ಮಾಹಿತಿ ನೀಡಿದ್ದಾರೆ. ಈ ರೀತಿಯ ವಸೂಲಾಗದ ಸಾಲ ಅಥವಾ ಅನುತ್ಪಾದಕ ಆಸ್ತಿ (ಎನ್‌ಪಿಎ) ಪ್ರತಿ ಬ್ಯಾಂಕಿನಲ್ಲೂ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಲೇ ಇದೆ. ಇವುಗಳ ವಸೂಲಾತಿಯ ಬಗ್ಗೆ ಸಂಬಂಧಿಸಿದ ಬ್ಯಾಂಕುಗಳ ಆಡಳಿತ ಮಂಡಳಿಗಳು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳದಿರುವುದೇ ಎನ್‌ಪಿಎಗಳ ಹೆಚ್ಚಳಕ್ಕೆ ಕಾರಣವಾಗಿರಬಹದು. ಉದ್ಯಮಿ ವಿಜಯ್ ಮಲ್ಯ ಕೂಡ ದೇಶದ ಹಲವಾರು ಬ್ಯಾಂಕುಗಳಿಗೆ 9,000 ಸಾವಿರ ಕೋಟಿ ರೂ.ಗಳಷ್ಟು ಸಾಲದ ಹಣವನ್ನು ಮರು ಪಾವತಿಸದೇ ವಿದೇಶದಲ್ಲಿ ಅಡಗಿರುವುದು ಗುಟ್ಟಿನ ವಿಷಯವೇನಲ್ಲ. ಅವರನ್ನು ಭಾರತಕ್ಕೆ ಕರೆತರುವ ಕಾನೂನಿನ ಪ್ರಕ್ರಿಯೆಗೆ ಬಾಲಗ್ರಹ ಬಡಿದಂತೆ ಕಾಣುತ್ತದೆ. ವಿಜಯ್ ಮಲ್ಯರಂತೆ ಇನ್ನೂ ಹಲವಾರು ಉದ್ಯಮಿಗಳು ದೇಶದ ಸಾರ್ವಜನಿಕ ಬ್ಯಾಂಕುಗಳಿಂದ ಪಡೆದ ಲಕ್ಷಾಂತರ ಕೋಟಿ ರೂ. ಸಾಲ ವಸೂಲಾಗದೇ ಎನ್‌ಪಿಎ ಆಗುತ್ತಿರುವುದು ಅತ್ಯಂತ ಆತಂಕಕಾರಿಯಾದ ವಿಚಾರ.
ಆ‌ರ್‌ಬಿಐ ನೀಡಿರುವ ಮಾಹಿತಿಯಂತೆ 2024ರ ಡಿಸೆಂಬರ್ ಅಂತ್ಯಕ್ಕೆ ವಾಣಿಜ್ಯ ಬ್ಯಾಂಕುಗಳಳಲ್ಲಿ ತಲಾ 1,000 ಕೋಟಿ ರೂ.ಗಳಿಂತ ಹೆಚ್ಚಿನ ಸಾಲ ಪಡೆದು ಅದನ್ನು ಸರಿಯಾಗಿ ಮರಳಿಸದ 29 ಕಂಪೆನಿಗಳು ದೇಶದಲ್ಲಿ ಇವೆ. ಬ್ಯಾಂಕಿನಲ್ಲಿ ಇರುವ ಹಣ ದೇಶದ ಜನರ ಹಣ. ಇದನ್ನು ಮನಸೋ ಇಚ್ಛೆ ಸಾಲ ನೀಡಿ ಅನುತ್ಪಾದಕ ಆಸ್ತಿಯನ್ನಾಗಿ ಮಾಡುವುದು ಸರಿಯಲ್ಲ. ಕೇಂದ್ರ ಸರ್ಕಾರ ಹಾಗೂ ರಿಸರ್ವ್ ಬ್ಯಾಂಕ್‌ ಆಗಿಂದಾಗ್ಗೆ ಬ್ಯಾಂಕುಗಳ ಎನ್‌ಪಿಎ ಹೆಚ್ಚಾಗದಂತೆ ಕ್ರಮವಹಿಸಬೇಕು.
-ಕೆ.ವಿ.ವಾಸು, ವಕೀಲರು, ವಿವೇಕಾನಂದ ನಗರ, ಮೈಸೂರು.

ಆಂದೋಲನ ಡೆಸ್ಕ್

Recent Posts

ಕರ್ತವ್ಯ ಮುಗಿಸಿ ಮನೆಗೆ ಬಂದಾಗಲೇ ಹೃದಯಾಘಾತ: ಎಎಸ್‌ಐ ಸಾವು

ಚಾಮರಾಜನಗರ: ಕರ್ತವ್ಯ ಮುಗಿಸಿ ಮನೆಗೆ ಬದ ತಕ್ಷಣ ಹೃದಯಾಘಾತ ಸಂಭವಿಸಿ ಎಎಸ್‌ಐ ಮೃತಪಟ್ಟಿರುವ ಘಟನೆ ಗಡಿ ಜಿಲ್ಲೆ ಚಾಮರಾಜನಗರದಲ್ಲಿ ನಡೆದಿದೆ.…

31 mins ago

ಹುಣಸೂರು: ಕೇವಲ 4 ನಿಮಿಷದಲ್ಲೇ ಕೆಜಿ ಕೆಜಿ ಚಿನ್ನ ದರೋಡೆ

ಹುಣಸೂರು: ಇಲ್ಲಿನ ಜ್ಯುವೆಲ್ಲರಿ ಶಾಪ್‌ನಲ್ಲಿ ಚಿನ್ನ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಹಿತಿಯೊಂದು ಲಭ್ಯವಾಗಿದ್ದು, ದರೋಡೆಕೋರರ ಕೈಚಳಕ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.…

41 mins ago

ಬಿಜೆಪಿ ಶಾಸಕ ಶರಣು ಸಲಗರ್‌ ವಿರುದ್ಧ ಎಫ್‌ಐಆರ್:‌ ಕಾರಣ ಇಷ್ಟೇ

ಬೀದರ್:‌ 99 ಲಕ್ಷ ಸಾಲ ಹಿಂತಿರುಗಿಸದ ಆರೋಪದ ಮೇರೆಗೆ ಬಸವಕಲ್ಯಾಣ ಕ್ಷೇತ್ರದ ಬಿಜೆಪಿ ಶಾಸಕ ಶರಣು ಸಲಗರ್‌ ವಿರುದ್ಧ ಎಫ್‌ಐಆರ್‌…

60 mins ago

ಪ್ರೀತಿ ವಿಚಾರವಾಗಿ ಹಲ್ಲೆ: ಮನನೊಂದು ಯುವಕ ಆತ್ಮಹತ್ಯೆ

ಮೈಸೂರು: ಯುವತಿಯ ಪ್ರೀತಿ ವಿಚಾರವಾಗಿ ಯುವಕನ ಮೇಲೆ ಹಲ್ಲೆ ನಡೆಸಲಾಗಿದ್ದು, ಮನನೊಂದ ಯುವಕ ಆತ್ಮಹತ್ಯೆಗೆ ಶರಣಾಗಿದ್ದಾನೆ. ಮೈಸೂರು ಜಿಲ್ಲೆ ಟಿ.ನರಸೀಪುರ…

1 hour ago

ರಾಷ್ಟ್ರಕವಿ ಕುವೆಂಪು ಕಟ್ಟಿದ ಸಂವಿಧಾನ ಸ್ವಾಗತ ಗೀತೆ

ನಮ್ಮ ಸಂವಿಧಾನಕ್ಕೆ ಬರೋಬ್ಬರಿ 75ವರ್ಷಗಳು ತುಂಬಿವೆ. ಭಾರತದ ಪ್ರಜೆಗಳಾದ ನಮಗೆ ಸಂವಿಧಾನವೇ ‘ಸಾಮಾಜಿಕ ನ್ಯಾಯದ ತಾಯಿ’. ಸರ್ವಜನಾಂಗದ ಹಿತರಕ್ಷಣೆಯ ಹೊಣೆಹೊತ್ತ…

2 hours ago

ಆರ್‌.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಸಂಚಲನ ಮೂಡಿಸಿದ ಬಿಜೆಪಿ-ಜಾ.ದಳ ಮೈತ್ರಿ ವಿಚಾರ

ಭವಿಷ್ಯದ ಗುರಿಸಾಧನೆಗಾಗಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಏಕಾಂಗಿ ಸ್ಪರ್ಧೆಗೆ ನಿರ್ಧಾರ  ಕಳೆದ ವಾರ ಬಿಜೆಪಿ-ಜಾ.ದಳ ಪಾಳೆಯಗಳಲ್ಲಿ ದೊಡ್ಡ ಮಟ್ಟದ ಸಂಚಲನ…

2 hours ago