Andolana originals

ಓದುಗರ ಪತ್ರ: ಎನ್‌ಪಿಎ ಹೆಚ್ಚಳ ಆತಂಕಕಾರಿ

ಕಳೆದ ಹತ್ತು ವರ್ಷಗಳಲ್ಲಿ ದೇಶದ ವಿವಿಧ ಬ್ಯಾಂಕುಗಳಲ್ಲಿ ರೈಟ್‌ ಆಫ್ ಮಾಡಿರುವ ಒಟ್ಟು ಸಾಲದ ಮೊತ್ತ (ಎನ್‌ಪಿಎ) 16.35 ಲಕ್ಷ ಕೋಟಿ ರೂ. ಎಂದು ಕೇಂದ್ರ ವಿತ್ತ ಸಚಿವ ನಿರ್ಮಲಾ ಸೀತಾರಾಮನ್ ಇತ್ತೀಚಿಗೆ ಲೋಕಸಭೆಗೆ ತಿಳಿಸಿದ್ದಾರೆ.
2023-24ನೇ ವಿತ್ತೀಯ ವರ್ಷದಲ್ಲಿ ಒಟ್ಟು 1.70 ಲಕ್ಷ ಕೋಟಿ ರೂ. ವಸೂಲಾಗದ ಸಾಲವನ್ನು ಲೈಟ್‌ಆಫ್ ಮಾಡಲಾಗಿದೆ ಎಂದೂ ಮಾಹಿತಿ ನೀಡಿದ್ದಾರೆ. ಈ ರೀತಿಯ ವಸೂಲಾಗದ ಸಾಲ ಅಥವಾ ಅನುತ್ಪಾದಕ ಆಸ್ತಿ (ಎನ್‌ಪಿಎ) ಪ್ರತಿ ಬ್ಯಾಂಕಿನಲ್ಲೂ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಲೇ ಇದೆ. ಇವುಗಳ ವಸೂಲಾತಿಯ ಬಗ್ಗೆ ಸಂಬಂಧಿಸಿದ ಬ್ಯಾಂಕುಗಳ ಆಡಳಿತ ಮಂಡಳಿಗಳು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳದಿರುವುದೇ ಎನ್‌ಪಿಎಗಳ ಹೆಚ್ಚಳಕ್ಕೆ ಕಾರಣವಾಗಿರಬಹದು. ಉದ್ಯಮಿ ವಿಜಯ್ ಮಲ್ಯ ಕೂಡ ದೇಶದ ಹಲವಾರು ಬ್ಯಾಂಕುಗಳಿಗೆ 9,000 ಸಾವಿರ ಕೋಟಿ ರೂ.ಗಳಷ್ಟು ಸಾಲದ ಹಣವನ್ನು ಮರು ಪಾವತಿಸದೇ ವಿದೇಶದಲ್ಲಿ ಅಡಗಿರುವುದು ಗುಟ್ಟಿನ ವಿಷಯವೇನಲ್ಲ. ಅವರನ್ನು ಭಾರತಕ್ಕೆ ಕರೆತರುವ ಕಾನೂನಿನ ಪ್ರಕ್ರಿಯೆಗೆ ಬಾಲಗ್ರಹ ಬಡಿದಂತೆ ಕಾಣುತ್ತದೆ. ವಿಜಯ್ ಮಲ್ಯರಂತೆ ಇನ್ನೂ ಹಲವಾರು ಉದ್ಯಮಿಗಳು ದೇಶದ ಸಾರ್ವಜನಿಕ ಬ್ಯಾಂಕುಗಳಿಂದ ಪಡೆದ ಲಕ್ಷಾಂತರ ಕೋಟಿ ರೂ. ಸಾಲ ವಸೂಲಾಗದೇ ಎನ್‌ಪಿಎ ಆಗುತ್ತಿರುವುದು ಅತ್ಯಂತ ಆತಂಕಕಾರಿಯಾದ ವಿಚಾರ.
ಆ‌ರ್‌ಬಿಐ ನೀಡಿರುವ ಮಾಹಿತಿಯಂತೆ 2024ರ ಡಿಸೆಂಬರ್ ಅಂತ್ಯಕ್ಕೆ ವಾಣಿಜ್ಯ ಬ್ಯಾಂಕುಗಳಳಲ್ಲಿ ತಲಾ 1,000 ಕೋಟಿ ರೂ.ಗಳಿಂತ ಹೆಚ್ಚಿನ ಸಾಲ ಪಡೆದು ಅದನ್ನು ಸರಿಯಾಗಿ ಮರಳಿಸದ 29 ಕಂಪೆನಿಗಳು ದೇಶದಲ್ಲಿ ಇವೆ. ಬ್ಯಾಂಕಿನಲ್ಲಿ ಇರುವ ಹಣ ದೇಶದ ಜನರ ಹಣ. ಇದನ್ನು ಮನಸೋ ಇಚ್ಛೆ ಸಾಲ ನೀಡಿ ಅನುತ್ಪಾದಕ ಆಸ್ತಿಯನ್ನಾಗಿ ಮಾಡುವುದು ಸರಿಯಲ್ಲ. ಕೇಂದ್ರ ಸರ್ಕಾರ ಹಾಗೂ ರಿಸರ್ವ್ ಬ್ಯಾಂಕ್‌ ಆಗಿಂದಾಗ್ಗೆ ಬ್ಯಾಂಕುಗಳ ಎನ್‌ಪಿಎ ಹೆಚ್ಚಾಗದಂತೆ ಕ್ರಮವಹಿಸಬೇಕು.
-ಕೆ.ವಿ.ವಾಸು, ವಕೀಲರು, ವಿವೇಕಾನಂದ ನಗರ, ಮೈಸೂರು.

ಆಂದೋಲನ ಡೆಸ್ಕ್

Recent Posts

ಶ್ರೀರಂಗಪಟ್ಟಣ | ನಟೋರಿಯಸ್ ರೌಡಿಶೀಟರ್‌ ಬರ್ಬರ ಹತ್ಯೆ

ಶ್ರೀರಂಗಪಟ್ಟಣ  : ತಾಲೂಕಿನ ಪಾಲಹಳ್ಳಿ ಲಕ್ಷ್ಮೀಪುರ ರಸ್ತೆಯಲ್ಲಿ ಮೈಸೂರಿನ ನಟೋರಿಯಸ್ ರೌಡಿಶೀಟರ್ ನ ಬರ್ಬರ ಹತ್ಯೆ ಮಾಡಿರುವ ಘಟನೆ ನಡೆದಿದೆ.…

9 hours ago

ಅರ್ಜುನ ಆನೆ ಸ್ಮಾರಕ ಲೋಕರ್ಪಣೆ

ಹಾಸನ : ಯಸಳೂರಿನ ದಬ್ಬಳಿಕಟ್ಟೆ ನೆಡುತೋಪಿನಲ್ಲಿ ನಿರ್ಮಿಸಿರುವ ಹುತಾತ್ಮ ಅರ್ಜುನ ಆನೆಯ 650 ಕೆ.ಜಿ. ತೂಕದ ಸುಂದರ ಪ್ರತಿಮೆಯ ಸ್ಮಾರಕವನ್ನು…

9 hours ago

ಅಮೃತ್‌ಸರ, ಜಲಂಧರ್‌ನಲ್ಲಿ ಸ್ಫೋಟ : ಪಂಜಾಬ್‌ನಲ್ಲಿ ಕಟ್ಟೆಚ್ಚರ

ಅಮೃತ್‌ಸರ : ಪಂಜಾಬ್‌ನ ಅಮೃತ್‌ಸರ್ ಮತ್ತು ಜಲಂಧರ್‌ನ ಹೈ ಸೆಕ್ಯೂರಿಟಿ ವಲಯಗಳ ಬಳಿ ಮಂಗಳವಾರ ಕೆಲವೇ ಗಂಟೆಗಳ ಅಂತರದಲ್ಲಿ ಸ್ಛೋಟ…

9 hours ago

ದುಬಾರೆಯಲ್ಲಿ ತೂಗು ಸೇತುವೆಗೆ ಶಂಕುಸ್ಥಾಪನೆ ನೆರವೇರಿಸಿದ ಈಶ್ವರ ಖಂಡ್ರೆ

7.3 ಕೋಟಿ ರೂ. ವೆಚ್ಚದಲ್ಲಿ ತೂಗು ಸೇತುವೆ ನಿರ್ಮಾಣ ಶೀಘ್ರ :ಈಶ್ವರ ಖಂಡ್ರೆ ದುಬಾರೆ :  ವನ್ಯಜೀವಿಗಳ ಸಂಖ್ಯೆ ದಿನದಿಂದ…

10 hours ago

ಒಳಮೀಸಲಾತಿ ಜಾರಿ ಸರ್ಕಾರದ ಐತಿಹಾಸಿಕ ತೀರ್ಮಾನ : ಸಿಎಂ ಪ್ರತಿಪಾದನೆ

ಮೈಸೂರು : ರಾಜ್ಯದಲ್ಲಿ ಒಳಮೀಸಲಾತಿ ಜಾರಿಗೊಳಿಸುವಲ್ಲಿ ಕಾಂಗ್ರೆಸ್‌ ಸಫಲವಾಗಿದ್ದು, ಇದು ಸರ್ಕಾರದ ಐತಿಹಾಸಿಕ ತೀರ್ಮಾನವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.…

10 hours ago

ಮೈಸೂರು | ಉದ್ದೇಶಿತ ಮೇಲ್ಸೇತುವೆ ಪ್ರದೇಶಕ್ಕೆ ಈಶ್ವರ ಖಂಡ್ರೆ ಭೇಟಿ, ಪರಿಶೀಲನೆ

ಮೈಸೂರು : ಮೈಸೂರಿನ ಸಿದ್ದಿಕಿ ನಗರ, ಮಣಿಪಾಲ್ ಆಸ್ಪತ್ರೆ ವೃತ್ತದ ಬಳಿ ರಾ.ಹೆ.275ರಲ್ಲಿ ಉದ್ದೇಶಿತ ಮೇಲ್ಸೇತುವೆ ಸ್ಥಳಕ್ಕೆ ಅರಣ್ಯ, ಜೀವಿಶಾಸ್ತ್ರ…

10 hours ago