Andolana originals

ಓದುಗರ ಪತ್ರ: ಎನ್‌ಪಿಎ ಹೆಚ್ಚಳ ಆತಂಕಕಾರಿ

ಕಳೆದ ಹತ್ತು ವರ್ಷಗಳಲ್ಲಿ ದೇಶದ ವಿವಿಧ ಬ್ಯಾಂಕುಗಳಲ್ಲಿ ರೈಟ್‌ ಆಫ್ ಮಾಡಿರುವ ಒಟ್ಟು ಸಾಲದ ಮೊತ್ತ (ಎನ್‌ಪಿಎ) 16.35 ಲಕ್ಷ ಕೋಟಿ ರೂ. ಎಂದು ಕೇಂದ್ರ ವಿತ್ತ ಸಚಿವ ನಿರ್ಮಲಾ ಸೀತಾರಾಮನ್ ಇತ್ತೀಚಿಗೆ ಲೋಕಸಭೆಗೆ ತಿಳಿಸಿದ್ದಾರೆ.
2023-24ನೇ ವಿತ್ತೀಯ ವರ್ಷದಲ್ಲಿ ಒಟ್ಟು 1.70 ಲಕ್ಷ ಕೋಟಿ ರೂ. ವಸೂಲಾಗದ ಸಾಲವನ್ನು ಲೈಟ್‌ಆಫ್ ಮಾಡಲಾಗಿದೆ ಎಂದೂ ಮಾಹಿತಿ ನೀಡಿದ್ದಾರೆ. ಈ ರೀತಿಯ ವಸೂಲಾಗದ ಸಾಲ ಅಥವಾ ಅನುತ್ಪಾದಕ ಆಸ್ತಿ (ಎನ್‌ಪಿಎ) ಪ್ರತಿ ಬ್ಯಾಂಕಿನಲ್ಲೂ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಲೇ ಇದೆ. ಇವುಗಳ ವಸೂಲಾತಿಯ ಬಗ್ಗೆ ಸಂಬಂಧಿಸಿದ ಬ್ಯಾಂಕುಗಳ ಆಡಳಿತ ಮಂಡಳಿಗಳು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳದಿರುವುದೇ ಎನ್‌ಪಿಎಗಳ ಹೆಚ್ಚಳಕ್ಕೆ ಕಾರಣವಾಗಿರಬಹದು. ಉದ್ಯಮಿ ವಿಜಯ್ ಮಲ್ಯ ಕೂಡ ದೇಶದ ಹಲವಾರು ಬ್ಯಾಂಕುಗಳಿಗೆ 9,000 ಸಾವಿರ ಕೋಟಿ ರೂ.ಗಳಷ್ಟು ಸಾಲದ ಹಣವನ್ನು ಮರು ಪಾವತಿಸದೇ ವಿದೇಶದಲ್ಲಿ ಅಡಗಿರುವುದು ಗುಟ್ಟಿನ ವಿಷಯವೇನಲ್ಲ. ಅವರನ್ನು ಭಾರತಕ್ಕೆ ಕರೆತರುವ ಕಾನೂನಿನ ಪ್ರಕ್ರಿಯೆಗೆ ಬಾಲಗ್ರಹ ಬಡಿದಂತೆ ಕಾಣುತ್ತದೆ. ವಿಜಯ್ ಮಲ್ಯರಂತೆ ಇನ್ನೂ ಹಲವಾರು ಉದ್ಯಮಿಗಳು ದೇಶದ ಸಾರ್ವಜನಿಕ ಬ್ಯಾಂಕುಗಳಿಂದ ಪಡೆದ ಲಕ್ಷಾಂತರ ಕೋಟಿ ರೂ. ಸಾಲ ವಸೂಲಾಗದೇ ಎನ್‌ಪಿಎ ಆಗುತ್ತಿರುವುದು ಅತ್ಯಂತ ಆತಂಕಕಾರಿಯಾದ ವಿಚಾರ.
ಆ‌ರ್‌ಬಿಐ ನೀಡಿರುವ ಮಾಹಿತಿಯಂತೆ 2024ರ ಡಿಸೆಂಬರ್ ಅಂತ್ಯಕ್ಕೆ ವಾಣಿಜ್ಯ ಬ್ಯಾಂಕುಗಳಳಲ್ಲಿ ತಲಾ 1,000 ಕೋಟಿ ರೂ.ಗಳಿಂತ ಹೆಚ್ಚಿನ ಸಾಲ ಪಡೆದು ಅದನ್ನು ಸರಿಯಾಗಿ ಮರಳಿಸದ 29 ಕಂಪೆನಿಗಳು ದೇಶದಲ್ಲಿ ಇವೆ. ಬ್ಯಾಂಕಿನಲ್ಲಿ ಇರುವ ಹಣ ದೇಶದ ಜನರ ಹಣ. ಇದನ್ನು ಮನಸೋ ಇಚ್ಛೆ ಸಾಲ ನೀಡಿ ಅನುತ್ಪಾದಕ ಆಸ್ತಿಯನ್ನಾಗಿ ಮಾಡುವುದು ಸರಿಯಲ್ಲ. ಕೇಂದ್ರ ಸರ್ಕಾರ ಹಾಗೂ ರಿಸರ್ವ್ ಬ್ಯಾಂಕ್‌ ಆಗಿಂದಾಗ್ಗೆ ಬ್ಯಾಂಕುಗಳ ಎನ್‌ಪಿಎ ಹೆಚ್ಚಾಗದಂತೆ ಕ್ರಮವಹಿಸಬೇಕು.
-ಕೆ.ವಿ.ವಾಸು, ವಕೀಲರು, ವಿವೇಕಾನಂದ ನಗರ, ಮೈಸೂರು.

ಆಂದೋಲನ ಡೆಸ್ಕ್

Recent Posts

ಎರಡೇ ವರ್ಷಕ್ಕೆ ಬ್ರಿಟನ್‌ ಪ್ರಧಾನಿ ಕೀರ್‌ ಸ್ಟಾರ್ಮರ್‌ ರಾಜೀನಾಮೆ

ಲಂಡನ್:‌ ನಿರೀಕ್ಷೆಯಂತೆ ಬ್ರಿಟನ್‌ ಪ್ರಧಾನಿ ಕೀರ್‌ ಸ್ಟಾರ್ಮರ್‌ ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆಡಳಿತಾರೂಢ ಲೇಬರ್‌ ಪಕ್ಷದೊಳಗೆ…

34 mins ago

ಟಿ.ನರಸೀಪುರ: ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ಟಿ.ನರಸೀಪುರ: ಡೆತ್‌ನೋಟ್‌ ಬರೆದಿಟ್ಟು ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ಹಳೇಕೆಂಪಯ್ಯನಹುಂಡಿ ಗ್ರಾಮದಲ್ಲಿ…

60 mins ago

ಬಿಇಒಗಳು ಪ್ರಯಾಣಿಸುತ್ತಿದ್ದ ಕಾರು ಅಪಘಾತ : ಓರ್ವ ಸಾವು, ಹಲವರು ಗಂಭೀರ

ಮದ್ದೂರು : ಮೈಸೂರು ಜಿಲ್ಲೆಯ ಬ್ಲಾಕ್ ಶಿಕ್ಷಣಾಧಿಕಾರಿಗಳು (ಬಿಇಒ) ಪ್ರಯಾಣಿಸುತ್ತಿದ್ದ ವಾಹನ ಅಪಘಾತದಲ್ಲಿ ಕಾರು ಚಾಲಕ ಮೃತಪಟ್ಟಿದ್ದಾರೆ. ಮದ್ದೂರು ಸಮೀಪದ…

2 hours ago

ಪಿರಿಯಾಪಟ್ಟಣ | ವಿಶೇಷಚೇತನರಿಗೆ ವಿತರಣೆಯಾಗದ ಸಾಧನಗಳು

ಫಲಾನುಭವಿಗಳಿಗೆ ವಿತರಿಸಲು ಶಾಸಕರ ದಿನಾಂಕ ಸಿಗದೆ ಕೊಠಡಿಯಲ್ಲಿ ತುಂಬಿ ಬೀಗ ಹಾಕಿದ ಅಧಿಕಾರಿಗಳು ಪಿರಿಯಾಪಟ್ಟಣ : ಕೇಂದ್ರ ಸರ್ಕಾರದ ಅಲಿಂಕೋ…

4 hours ago

3 ತಿಂಗಳಿಂದ ಬಾರದ ಮಾಸಾಶನ ; ಬಡಜನರು ಕಂಗಾಲು

ವೃದ್ಧರು, ವಿಧವೆಯರು, ಅಂಗವಿಕಲರಿಗೆ ಬಾರದ ಮಾಸಿಕ ಹಣ ; ಕಚೇರಿಗಳಿಗೆ ನಿತ್ಯ ಅಲೆದಾಟ ಎಚ್.ಡಿ.ಕೋಟೆ : ವೃದ್ಧರು, ವಿಧವೆಯರು, ಅಂಗವಿಕಲರೂ…

4 hours ago

ಗ್ರಾಪಂನಲ್ಲೇ ವಾಸಸ್ಥಳ ದೃಢೀಕರಣ ಪತ್ರ ; ಇನ್ನು ಹೋಬಳಿ ಕೇಂದ್ರಗಳಿಗೆ ಅಲೆಯುವಂತಿಲ್ಲ: ಸರ್ಕಾರದ ತೀರ್ಮಾನ

ಬೆಂಗಳೂರು : ಗ್ರಾಮೀಣ ಜನರಿಗೆ ರಾಜ್ಯ ಸರ್ಕಾರ ಮಹತ್ವದ ರಿಲೀಫ್ ನೀಡಿದ್ದು, ಇನ್ನು ಮುಂದೆ ವಾಸಸ್ಥಳ ದೃಢೀಕರಣ ಪತ್ರವನ್ನು ತಮ್ಮ…

5 hours ago