ಕೆಲದಿನಗಳ ಹಿಂದೆಯಷ್ಟೆ ಬೆಂಗಳೂರಿನ ಕೋರಮಂಗಲದ ಪಿಜಿಯೊಂದರಲ್ಲಿ ಯುವತಿಯನ್ನು ಹತ್ಯೆ ಮಾಡಿದ ಘಟನೆ ಮಾಸುವ ಮುನ್ನವೇ ಬೆಂಗಳೂರಿನಲ್ಲಿಯೇ ಅತ್ಯಾಚಾರದ ಪ್ರಕರಣವೊಂದು ವರದಿಯಾಗಿರುವುದು ಆತಂಕ ಮೂಡಿಸಿದೆ.
ಈ ಅತ್ಯಾಚಾರಿಗಳಿಗೆ ಮತ್ತು ಕೊಲೆಗಡುಕರಿಗೆ ಕಾನೂನಿನ ಭಯವಿಲ್ಲವೇನೋ ಅನಿಸುತ್ತದೆ. ಯಾವ ಅಂಜಿಕೆಯೂ ಇಲ್ಲದೆ ಹೆಣ್ಣುಮಕ್ಕಳ ಮೇಲೆ ಅತ್ಯಾಚಾರವೆಸಗುವುದು, ಅವರನ್ನು ಕೊಲೆ ಮಾಡುವ ದುಷ್ಕೃತ್ಯಗಳಿಗೆ ಇಳಿಯುತ್ತಿದ್ದಾರೆ. ನಗರ ಭಾಗಗಳಲ್ಲಿ ಇತ್ತೀಚೆಗೆ ನೈಟ್ಪಾರ್ಟಿಗಳ ಸಂಖ್ಯೆ ಹೆಚ್ಚಾಗುತ್ತಿದೆ. ಯುವಕ-ಯುವತಿಯರು ಮಧ್ಯರಾತ್ರಿಯವರೆಗೂ ಮೋಜು ಮಸ್ತಿ ಮಾಡಿಕೊಂಡು, ಪಾನಮತ್ತರಾಗಿ ರಸ್ತೆಯಲ್ಲಿ ಓಡಾಡುತ್ತಿದ್ದಾರೆ. ಇಂತಹ ಬೆಳವಣಿಗೆಗಳಿಂದಾಗಿಯೂ ಅಪರಾಧ ಪ್ರಕರಣಗಳು ಹೆಚ್ಚಾಗಬಹುದು.
ಅಲ್ಲದೆ ಬೆಂಗಳೂರಿನಂತಹ ಬೃಹತ್ ನಗರಗಳಲ್ಲಿ ಗಾಂಜಾ, ಡ್ರಗ್ಸ್ ಸುಲಭವಾಗಿ ಯುವಸಮೂಹದ ಕೈ ಸೇರುತ್ತಿದೆ. ಅವುಗಳ ಸೇವನೆಯೂ ಇಂತಹ ದುಷ್ಕೃ ತ್ಯಗಳಿಗೆ ಪ್ರಚೋದಿಸಬಹುದು. ಆದ್ದರಿಂದ ಮೊದಲು ನಮ್ಮ ಕಾನೂನು-ವ್ಯವಸ್ಥೆ ಬದಲಾಗಬೇಕು. ಅತ್ಯಾಚಾರಿಗಳಿಗೆ ಮರಣದಂಡನೆಯಂತಹ ಕಠಿಣ ಶಿಕ್ಷೆ ವಿಧಿಸಬೇಕು. ರಾತ್ರಿಕೂಟಗಳನ್ನು ನಿರ್ಬಂಧಿಸುವ ಜತೆಗೆ ಗಾಂಜಾ, ಡ್ರಗ್ಸ್ ಸೇವನೆಗೆ ಕಡಿವಾಣ ಹಾಕಬೇಕು.
-ವಿಜಯ್ ಹೆಮ್ಮಿಗೆ, ವಿಜಯನಗರ ರೈಲ್ವೆ ಬಡಾವಣೆ, ಮೈಸೂರು.
ಮೈಸೂರಿನಲ್ಲಿ ಇತ್ತೀಚಿನ ದಿನಗಳಲ್ಲಿ ಫ್ಲೆಕ್ಸ್ ಹಾವಳಿ ಮಿತಿ ಮೀರಿದ್ದು, ರಸ್ತೆ ಬದಿಯಲ್ಲಿ ಹಾಕಿರುವ ಬೃಹದಾಕಾರದ ಫ್ಲೆಕ್ಸ್ಗಳಿಂದಾಗಿ ಪ್ರತಿನಿತ್ಯ ರಸ್ತೆಯಲ್ಲಿ ಸಂಚರಿಸುವ…
ಉತ್ತರ ಪ್ರದೇಶ ಸರ್ಕಾರವು ಆ ರಾಜ್ಯದ ಎಲ್ಲಾ ಸರ್ಕಾರಿ ಅಧಿಕಾರಿಗಳು ಹಾಗೂ ನೌಕರರಿಗೆ ‘ಮಾನವ ಸಂಪದ್ ಪೋರ್ಟಲ್’ ಎಂಬ ಅಧಿಕೃತ…
ಹುಣಸೂರು ತಾಲ್ಲೂಕಿನ ಎಮ್ಮೆಕೊಪ್ಪಲು ಗ್ರಾಮದಲ್ಲಿ ಗ್ರಾಪಂನವರು ಸಕಾಲಕ್ಕೆ ಕಸ ವಿಲೇವಾರಿ ಮಾಡದೇ ಇರುವುದರಿಂದ ಕಸದ ರಾಶಿಯೇ ಬಿದ್ದಿದ್ದು, ಸೊಳ್ಳೆ, ನೊಣಗಳ…
ಐಪಿಎಲ್ ಆವೃತ್ತಿಯು ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಖ್ಯಾತಿಯನ್ನು ಹೊಂದಿದೆ, ಈ ಆವೃತ್ತಿಯಲ್ಲಿ ನಾನಾ ರಾಜ್ಯಗಳ ಹೆಸರಿನಲ್ಲಿ ಹಲವು ತಂಡಗಳು ಸೆಣಸಾಡಲಿವೆ. ನಮ್ಮ…
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಹಂಪೆಯ ಸಾಣಾಪುರದ ಬಳಿ ೨೦೨೫ ಮಾರ್ಚಿನಲ್ಲಿ ಇಸ್ರೇಲ್ ಮಹಿಳೆಯ ಮೇಲೆ ಅತ್ಯಾಚಾರ ಮತ್ತು ವಿದೇಶಿಗನ…
ಮೈಸೂರು ತಾಲ್ಲೂಕು ಜಯಪುರ ಹೋಬಳಿಯ ಧನಗಳ್ಳಿ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಕರ್ನಾಟಕ ಗೃಹ ಮಂಡಳಿ (ಕೆಹೆಚ್ಬಿ) ಬಡಾವಣೆಗೆ ಕುಡಿಯುವ ನೀರು ಸರಬರಾಜು…