ಕೆಲದಿನಗಳ ಹಿಂದೆಯಷ್ಟೆ ಬೆಂಗಳೂರಿನ ಕೋರಮಂಗಲದ ಪಿಜಿಯೊಂದರಲ್ಲಿ ಯುವತಿಯನ್ನು ಹತ್ಯೆ ಮಾಡಿದ ಘಟನೆ ಮಾಸುವ ಮುನ್ನವೇ ಬೆಂಗಳೂರಿನಲ್ಲಿಯೇ ಅತ್ಯಾಚಾರದ ಪ್ರಕರಣವೊಂದು ವರದಿಯಾಗಿರುವುದು ಆತಂಕ ಮೂಡಿಸಿದೆ.
ಈ ಅತ್ಯಾಚಾರಿಗಳಿಗೆ ಮತ್ತು ಕೊಲೆಗಡುಕರಿಗೆ ಕಾನೂನಿನ ಭಯವಿಲ್ಲವೇನೋ ಅನಿಸುತ್ತದೆ. ಯಾವ ಅಂಜಿಕೆಯೂ ಇಲ್ಲದೆ ಹೆಣ್ಣುಮಕ್ಕಳ ಮೇಲೆ ಅತ್ಯಾಚಾರವೆಸಗುವುದು, ಅವರನ್ನು ಕೊಲೆ ಮಾಡುವ ದುಷ್ಕೃತ್ಯಗಳಿಗೆ ಇಳಿಯುತ್ತಿದ್ದಾರೆ. ನಗರ ಭಾಗಗಳಲ್ಲಿ ಇತ್ತೀಚೆಗೆ ನೈಟ್ಪಾರ್ಟಿಗಳ ಸಂಖ್ಯೆ ಹೆಚ್ಚಾಗುತ್ತಿದೆ. ಯುವಕ-ಯುವತಿಯರು ಮಧ್ಯರಾತ್ರಿಯವರೆಗೂ ಮೋಜು ಮಸ್ತಿ ಮಾಡಿಕೊಂಡು, ಪಾನಮತ್ತರಾಗಿ ರಸ್ತೆಯಲ್ಲಿ ಓಡಾಡುತ್ತಿದ್ದಾರೆ. ಇಂತಹ ಬೆಳವಣಿಗೆಗಳಿಂದಾಗಿಯೂ ಅಪರಾಧ ಪ್ರಕರಣಗಳು ಹೆಚ್ಚಾಗಬಹುದು.
ಅಲ್ಲದೆ ಬೆಂಗಳೂರಿನಂತಹ ಬೃಹತ್ ನಗರಗಳಲ್ಲಿ ಗಾಂಜಾ, ಡ್ರಗ್ಸ್ ಸುಲಭವಾಗಿ ಯುವಸಮೂಹದ ಕೈ ಸೇರುತ್ತಿದೆ. ಅವುಗಳ ಸೇವನೆಯೂ ಇಂತಹ ದುಷ್ಕೃ ತ್ಯಗಳಿಗೆ ಪ್ರಚೋದಿಸಬಹುದು. ಆದ್ದರಿಂದ ಮೊದಲು ನಮ್ಮ ಕಾನೂನು-ವ್ಯವಸ್ಥೆ ಬದಲಾಗಬೇಕು. ಅತ್ಯಾಚಾರಿಗಳಿಗೆ ಮರಣದಂಡನೆಯಂತಹ ಕಠಿಣ ಶಿಕ್ಷೆ ವಿಧಿಸಬೇಕು. ರಾತ್ರಿಕೂಟಗಳನ್ನು ನಿರ್ಬಂಧಿಸುವ ಜತೆಗೆ ಗಾಂಜಾ, ಡ್ರಗ್ಸ್ ಸೇವನೆಗೆ ಕಡಿವಾಣ ಹಾಕಬೇಕು.
-ವಿಜಯ್ ಹೆಮ್ಮಿಗೆ, ವಿಜಯನಗರ ರೈಲ್ವೆ ಬಡಾವಣೆ, ಮೈಸೂರು.
ಮಂಡ್ಯ : ಜಲ ಶಕ್ತಿ ಜನ ಭಾಗೀದಾರಿ, ಮಹಾತ್ಮ ಗಾಂಧಿ ನರೇಗಾ, ತೆರಿಗೆ ವಸೂಲಾತಿ ಸೇರಿದಂತೆ ಇತರೆ ಯೋಜನೆ ಮತ್ತು…
ಸೋಮವಾರಪೇಟೆ : ಮರದ ನಾಟಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನವನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಹೊಸಳ್ಳಿ ಗ್ರಾಮದಲ್ಲಿ ವಶಪಡಿಸಿಕೊಂಡಿದ್ದಾರೆ. ಹುದುಗೂರು…
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲಿನಲ್ಲಿ ಇದ್ರೂ ಗುರುವಾರ ಬಿಡುಗಡೆಯಾದ ಅವರ ಅಭಿನಯದ ಡೆವಿಲ್…
ಮಳವಳ್ಳಿ : ವಿದ್ಯುತ್ ಸ್ಪರ್ಶಿಸಿ ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ತಾಲ್ಲೂಕಿನ ಕಲ್ಕುಣಿ ಗ್ರಾಮದ ಬಳಿ ನಡೆದಿದ್ದು, ಸೆಸ್ಕ್ ಅಧಿಕಾರಿಗಳ…
ಹೊಸದಿಲ್ಲಿ : ದೇಶದಾದ್ಯಂತ ನಡೆಸಲು ಉದ್ದೇಶಿಸಿರುವ ೨೦೨೭ರ ಜನಗಣತಿಗೆ ರೂ. ೧೧,೭೧೮ ಕೋಟಿ ಅನುದಾನ ನೀಡಲು ಕೇಂದ್ರ ಸಚಿವ ಸಂಪುಟವು…
ಮುಂಬೈ : ಇಂಡಿಗೊ ವಿಮಾನ ಕಾರ್ಯಾಚರಣೆ ವ್ಯತ್ಯಯ ಪ್ರಕರಣ ಸಂಬಂಧ ನಾಲ್ವರು ವಿಮಾನ ನಿರ್ವಹಣಾ ಇನ್ಸ್ಪೆಕ್ಟರ್ಗಳನ್ನು (ಎಫ್.ಒ.ಐ) ನಾಗರಿಕ ವಿಮಾನಯಾನ…