ಕೆಲದಿನಗಳ ಹಿಂದೆಯಷ್ಟೆ ಬೆಂಗಳೂರಿನ ಕೋರಮಂಗಲದ ಪಿಜಿಯೊಂದರಲ್ಲಿ ಯುವತಿಯನ್ನು ಹತ್ಯೆ ಮಾಡಿದ ಘಟನೆ ಮಾಸುವ ಮುನ್ನವೇ ಬೆಂಗಳೂರಿನಲ್ಲಿಯೇ ಅತ್ಯಾಚಾರದ ಪ್ರಕರಣವೊಂದು ವರದಿಯಾಗಿರುವುದು ಆತಂಕ ಮೂಡಿಸಿದೆ.
ಈ ಅತ್ಯಾಚಾರಿಗಳಿಗೆ ಮತ್ತು ಕೊಲೆಗಡುಕರಿಗೆ ಕಾನೂನಿನ ಭಯವಿಲ್ಲವೇನೋ ಅನಿಸುತ್ತದೆ. ಯಾವ ಅಂಜಿಕೆಯೂ ಇಲ್ಲದೆ ಹೆಣ್ಣುಮಕ್ಕಳ ಮೇಲೆ ಅತ್ಯಾಚಾರವೆಸಗುವುದು, ಅವರನ್ನು ಕೊಲೆ ಮಾಡುವ ದುಷ್ಕೃತ್ಯಗಳಿಗೆ ಇಳಿಯುತ್ತಿದ್ದಾರೆ. ನಗರ ಭಾಗಗಳಲ್ಲಿ ಇತ್ತೀಚೆಗೆ ನೈಟ್ಪಾರ್ಟಿಗಳ ಸಂಖ್ಯೆ ಹೆಚ್ಚಾಗುತ್ತಿದೆ. ಯುವಕ-ಯುವತಿಯರು ಮಧ್ಯರಾತ್ರಿಯವರೆಗೂ ಮೋಜು ಮಸ್ತಿ ಮಾಡಿಕೊಂಡು, ಪಾನಮತ್ತರಾಗಿ ರಸ್ತೆಯಲ್ಲಿ ಓಡಾಡುತ್ತಿದ್ದಾರೆ. ಇಂತಹ ಬೆಳವಣಿಗೆಗಳಿಂದಾಗಿಯೂ ಅಪರಾಧ ಪ್ರಕರಣಗಳು ಹೆಚ್ಚಾಗಬಹುದು.
ಅಲ್ಲದೆ ಬೆಂಗಳೂರಿನಂತಹ ಬೃಹತ್ ನಗರಗಳಲ್ಲಿ ಗಾಂಜಾ, ಡ್ರಗ್ಸ್ ಸುಲಭವಾಗಿ ಯುವಸಮೂಹದ ಕೈ ಸೇರುತ್ತಿದೆ. ಅವುಗಳ ಸೇವನೆಯೂ ಇಂತಹ ದುಷ್ಕೃ ತ್ಯಗಳಿಗೆ ಪ್ರಚೋದಿಸಬಹುದು. ಆದ್ದರಿಂದ ಮೊದಲು ನಮ್ಮ ಕಾನೂನು-ವ್ಯವಸ್ಥೆ ಬದಲಾಗಬೇಕು. ಅತ್ಯಾಚಾರಿಗಳಿಗೆ ಮರಣದಂಡನೆಯಂತಹ ಕಠಿಣ ಶಿಕ್ಷೆ ವಿಧಿಸಬೇಕು. ರಾತ್ರಿಕೂಟಗಳನ್ನು ನಿರ್ಬಂಧಿಸುವ ಜತೆಗೆ ಗಾಂಜಾ, ಡ್ರಗ್ಸ್ ಸೇವನೆಗೆ ಕಡಿವಾಣ ಹಾಕಬೇಕು.
-ವಿಜಯ್ ಹೆಮ್ಮಿಗೆ, ವಿಜಯನಗರ ರೈಲ್ವೆ ಬಡಾವಣೆ, ಮೈಸೂರು.
ನವದೆಹಲಿ: ಮೇ.3ರಂದು ನಡೆದಿದ್ದ ನೀಟ್ ಯುಜಿ ಪರೀಕ್ಷೆಯನ್ನು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ರದ್ದುಗೊಳಿಸಿದೆ. ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಎನ್ಜಿಎ…
ಗುವಾಹಟಿ: ಹಿಮಂತ ಬಿಸ್ವಾ ಶರ್ಮಾ ಅವರು ಸತತ ಎರಡನೇ ಬಾರಿಗೆ ಅಸ್ಸಾಂನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಗುವಾಹಟಿಯ ಖಾನಾಪಾರಾದಲ್ಲಿರುವ ಪಶುವೈದ್ಯಕೀಯ…
ಮೈಸೂರು: SIR ಮೂಲಕ ರಾಜ್ಯದ 86 ಲಕ್ಷ ಮತದಾರರ ಹಕ್ಕಿಗೆ ಕನ್ನ ಹಾಕುವ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದು ಕೆಪಿಸಿಸಿ ವಕ್ತಾರ…
ಚೆನ್ನೈ: ತಮಿಳುನಾಡು ವಿಧಾನಸಭಾ ಸ್ಪೀಕರ್ ಆಗಿ ಶಾಸಕ ಜೆಸಿಡಿ ಪ್ರಭಾಕರ್ ಅವರಿಂದು ಸರ್ವಾನುಮತದಿಂದ ಆಯ್ಕೆಯಾದರು. ಸಿಎಂ ವಿಜಯ್ ಅವರು ಪ್ರಭಾಕರ್…
ಮಂಡ್ಯ: ರಾಜ್ಯದಲ್ಲಿ ತಾಪಮಾನ ಏರಿಕೆಯಾಗುತ್ತಿದ್ದಂತೆ ಕೆಆರ್ಎಸ್ ಜಲಾಶಯದ ನೀರಿನ ಮಟ್ಟ 90 ಅಡಿಗೆ ಕುಸಿದಿದೆ. 124.80 ಅಡಿ ಗರಿಷ್ಠ ಮಟ್ಟವನ್ನು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಮಿಳುನಾಡಿನ ಮುಖ್ಯಮಂತ್ರಿಯಾಗಿ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ಸಿ…