Andolana originals

ಓದುಗರ ಪತ್ರ| ಕಾನೂನು ಬಿಗಿಗೊಳಿಸುವುದು ಅಗತ್ಯ

ಕೆಲದಿನಗಳ ಹಿಂದೆಯಷ್ಟೆ ಬೆಂಗಳೂರಿನ ಕೋರಮಂಗಲದ ಪಿಜಿಯೊಂದರಲ್ಲಿ ಯುವತಿಯನ್ನು ಹತ್ಯೆ ಮಾಡಿದ ಘಟನೆ ಮಾಸುವ ಮುನ್ನವೇ ಬೆಂಗಳೂರಿನಲ್ಲಿಯೇ ಅತ್ಯಾಚಾರದ ಪ್ರಕರಣವೊಂದು ವರದಿಯಾಗಿರುವುದು ಆತಂಕ ಮೂಡಿಸಿದೆ.

ಈ ಅತ್ಯಾಚಾರಿಗಳಿಗೆ ಮತ್ತು ಕೊಲೆಗಡುಕರಿಗೆ ಕಾನೂನಿನ ಭಯವಿಲ್ಲವೇನೋ ಅನಿಸುತ್ತದೆ. ಯಾವ ಅಂಜಿಕೆಯೂ ಇಲ್ಲದೆ ಹೆಣ್ಣುಮಕ್ಕಳ ಮೇಲೆ ಅತ್ಯಾಚಾರವೆಸಗುವುದು, ಅವರನ್ನು ಕೊಲೆ ಮಾಡುವ ದುಷ್ಕೃತ್ಯಗಳಿಗೆ ಇಳಿಯುತ್ತಿದ್ದಾರೆ. ನಗರ ಭಾಗಗಳಲ್ಲಿ ಇತ್ತೀಚೆಗೆ ನೈಟ್‌ಪಾರ್ಟಿಗಳ ಸಂಖ್ಯೆ ಹೆಚ್ಚಾಗುತ್ತಿದೆ. ಯುವಕ-ಯುವತಿಯರು ಮಧ್ಯರಾತ್ರಿಯವರೆಗೂ ಮೋಜು ಮಸ್ತಿ ಮಾಡಿಕೊಂಡು, ಪಾನಮತ್ತರಾಗಿ ರಸ್ತೆಯಲ್ಲಿ ಓಡಾಡುತ್ತಿದ್ದಾರೆ. ಇಂತಹ ಬೆಳವಣಿಗೆಗಳಿಂದಾಗಿಯೂ ಅಪರಾಧ ಪ್ರಕರಣಗಳು ಹೆಚ್ಚಾಗಬಹುದು.

ಅಲ್ಲದೆ ಬೆಂಗಳೂರಿನಂತಹ ಬೃಹತ್ ನಗರಗಳಲ್ಲಿ ಗಾಂಜಾ, ಡ್ರಗ್ಸ್ ಸುಲಭವಾಗಿ ಯುವಸಮೂಹದ ಕೈ ಸೇರುತ್ತಿದೆ. ಅವುಗಳ ಸೇವನೆಯೂ ಇಂತಹ ದುಷ್ಕೃ ತ್ಯಗಳಿಗೆ ಪ್ರಚೋದಿಸಬಹುದು. ಆದ್ದರಿಂದ ಮೊದಲು ನಮ್ಮ ಕಾನೂನು-ವ್ಯವಸ್ಥೆ ಬದಲಾಗಬೇಕು. ಅತ್ಯಾಚಾರಿಗಳಿಗೆ ಮರಣದಂಡನೆಯಂತಹ ಕಠಿಣ ಶಿಕ್ಷೆ ವಿಧಿಸಬೇಕು. ರಾತ್ರಿಕೂಟಗಳನ್ನು ನಿರ್ಬಂಧಿಸುವ ಜತೆಗೆ ಗಾಂಜಾ, ಡ್ರಗ್ಸ್ ಸೇವನೆಗೆ ಕಡಿವಾಣ ಹಾಕಬೇಕು.

-ವಿಜಯ್ ಹೆಮ್ಮಿಗೆ, ವಿಜಯನಗರ ರೈಲ್ವೆ ಬಡಾವಣೆ, ಮೈಸೂರು.

ಆಂದೋಲನ ಡೆಸ್ಕ್

Recent Posts

ಹನೂರಿನಲ್ಲಿ ಮೂವರ ಎನ್‌ಕೌಂಟರ್ ಪ್ರಕರಣ: ಘಟನಾ ಸ್ಥಳಕ್ಕೆ ತನಿಖಾ ತಂಡ ಭೇಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್‌ಕೌಂಟರ್ ಘಟನೆಯ…

21 mins ago

ವಿಚಾರಣೆ ಇಲ್ಲದೆ ಶಿಕ್ಷೆ ಕೊಡಲು ಸಂವಿಧಾನ ಒಪ್ಪುವುದಿಲ್ಲ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…

3 hours ago

ಆ ಮೂರು ಜೀವಗಳಿಗೂ ಬೆಲೆಯೇ ಇರಲಿಲ್ಲವೇ?

ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…

3 hours ago

ಅಸಮಾಧಾನದ ಬೇಗೆ: ಸಿಎಂ ಡಿಕೆಶಿಗೆ ಹೈಕಮಾಂಡ್ ‘ಎಸಿ’

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ರಾಜ್ಯ ಕಾಂಗ್ರೆಸ್‌ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…

3 hours ago

ನಾಲ್ಕು ಶೂಟೌಟ್ ಪ್ರಕರಣ; ಏಳು ಸಾವು

ಮಹಾದೇಶ ಎಂ ಗೌಡ ೨೦೧೪ರಿಂದ ೨೦೨೬ರವರೆಗೆ ನಡೆದ ಪ್ರಕರಣಗಳು ಹನೂರು: ತಾಲ್ಲೂಕಿನ ಕಾವೇರಿ ವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ…

4 hours ago