ದೇಶದಲ್ಲಿ ಒಂದಲ್ಲಾ ಒಂದು ಕಡೆ ಅತ್ಯಾಚಾರದಂತಹ ಪ್ರಕರಣ ವರದಿ ಯಾಗುತ್ತಲೇ ಇದ್ದು, ಹೆಣ್ಣುಮಕ್ಕಳು ಮನೆಯಿಂದ ಹೊರಬರಲೂ ಆತಂಕಪಡುವಂತಾಗಿದೆ.
ಹೆಣ್ಣು ಮಕ್ಕಳನ್ನು ರಸ್ತೆಯಲ್ಲಿ ಅಡ್ಡಗಟ್ಟಿ ಅಪಹರಿಸುವುದು, ಕೆಲಸ ಮಾಡುವ ಸ್ಥಳಗಳಲ್ಲಿ, ಶಾಲೆಗಳಲ್ಲಿ ಅವರ ಮೇಲೆ ದೌರ್ಜನ್ಯವೆಸಗುವುದು, ಕಾಲೇಜು, ಪಿಜಿಗಳಿಗೆ ನುಗ್ಗಿ ಬರ್ಬರವಾಗಿ ಕೊಲೆ ಮಾಡುವ ಪ್ರಕರಣಗಳನ್ನು ನೋಡಿದರೆ ಪೋಷಕರಿಗೆ ತಮ್ಮ ಮಕ್ಕಳನ್ನು ಮನೆ ಯಿಂದ ಹೊರಗೆ ಹೇಗೆ ಕಳುಹಿಸುವುದು ಎಂಬ ಚಿಂತೆ ಶುರುವಾಗಿದೆ.
ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯವನ್ನು ತಡೆಗಟ್ಟಲು ಸರ್ಕಾರ ಎಷ್ಟೇ ಕಾನೂನುಗಳನ್ನು ರೂಪಿಸಿದರೂ ಅತ್ಯಾಚಾರಗಳು ನಿಲ್ಲುತ್ತಿಲ್ಲ. ಮಹಿಳೆಯರು ಎಲ್ಲೇ ಹೋದರೂ ಅವರ ಮೇಲಿನ ದೌರ್ಜನ್ಯಗಳು ಕಡಿಮೆಯಾಗುತ್ತಿಲ್ಲ. ಖಂಡಿತವಾಗಿಯೂ ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ವಿಧಿಸದ ಹೊರತಾಗಿ ಅತ್ಯಾಚಾರದಂತಹ ಅನಿಷ್ಟವನ್ನು ಕೊನೆಗಾಣಿಸಲು ಸಾಧ್ಯವಾಗುವುದಿಲ್ಲ. ಆದ್ದರಿಂದ ವಿದೇಶಗಳಲ್ಲಿ ಅತ್ಯಾಚಾರಿಗಳಿಗೆ ನೀಡುವ ಶಿಕ್ಷೆಯ ಮಾದರಿಯಲ್ಲಿಯೇ ಭಾರತದಲ್ಲಿಯೂ ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು. –
ಎಂ.ಎಸ್.ಉಷಾ ಪ್ರಕಾಶ್, ಎಸ್ಬಿಎಂ ಕಾಲೋನಿ, ಮೈಸೂರು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್ಕೌಂಟರ್ ಘಟನೆಯ…
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…
ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ಕಾಂಗ್ರೆಸ್ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…
ಮಹಾದೇಶ ಎಂ ಗೌಡ ೨೦೧೪ರಿಂದ ೨೦೨೬ರವರೆಗೆ ನಡೆದ ಪ್ರಕರಣಗಳು ಹನೂರು: ತಾಲ್ಲೂಕಿನ ಕಾವೇರಿ ವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ…