ದೇಶದಲ್ಲಿ ಒಂದಲ್ಲಾ ಒಂದು ಕಡೆ ಅತ್ಯಾಚಾರದಂತಹ ಪ್ರಕರಣ ವರದಿ ಯಾಗುತ್ತಲೇ ಇದ್ದು, ಹೆಣ್ಣುಮಕ್ಕಳು ಮನೆಯಿಂದ ಹೊರಬರಲೂ ಆತಂಕಪಡುವಂತಾಗಿದೆ.
ಹೆಣ್ಣು ಮಕ್ಕಳನ್ನು ರಸ್ತೆಯಲ್ಲಿ ಅಡ್ಡಗಟ್ಟಿ ಅಪಹರಿಸುವುದು, ಕೆಲಸ ಮಾಡುವ ಸ್ಥಳಗಳಲ್ಲಿ, ಶಾಲೆಗಳಲ್ಲಿ ಅವರ ಮೇಲೆ ದೌರ್ಜನ್ಯವೆಸಗುವುದು, ಕಾಲೇಜು, ಪಿಜಿಗಳಿಗೆ ನುಗ್ಗಿ ಬರ್ಬರವಾಗಿ ಕೊಲೆ ಮಾಡುವ ಪ್ರಕರಣಗಳನ್ನು ನೋಡಿದರೆ ಪೋಷಕರಿಗೆ ತಮ್ಮ ಮಕ್ಕಳನ್ನು ಮನೆ ಯಿಂದ ಹೊರಗೆ ಹೇಗೆ ಕಳುಹಿಸುವುದು ಎಂಬ ಚಿಂತೆ ಶುರುವಾಗಿದೆ.
ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯವನ್ನು ತಡೆಗಟ್ಟಲು ಸರ್ಕಾರ ಎಷ್ಟೇ ಕಾನೂನುಗಳನ್ನು ರೂಪಿಸಿದರೂ ಅತ್ಯಾಚಾರಗಳು ನಿಲ್ಲುತ್ತಿಲ್ಲ. ಮಹಿಳೆಯರು ಎಲ್ಲೇ ಹೋದರೂ ಅವರ ಮೇಲಿನ ದೌರ್ಜನ್ಯಗಳು ಕಡಿಮೆಯಾಗುತ್ತಿಲ್ಲ. ಖಂಡಿತವಾಗಿಯೂ ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ವಿಧಿಸದ ಹೊರತಾಗಿ ಅತ್ಯಾಚಾರದಂತಹ ಅನಿಷ್ಟವನ್ನು ಕೊನೆಗಾಣಿಸಲು ಸಾಧ್ಯವಾಗುವುದಿಲ್ಲ. ಆದ್ದರಿಂದ ವಿದೇಶಗಳಲ್ಲಿ ಅತ್ಯಾಚಾರಿಗಳಿಗೆ ನೀಡುವ ಶಿಕ್ಷೆಯ ಮಾದರಿಯಲ್ಲಿಯೇ ಭಾರತದಲ್ಲಿಯೂ ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು. –
ಎಂ.ಎಸ್.ಉಷಾ ಪ್ರಕಾಶ್, ಎಸ್ಬಿಎಂ ಕಾಲೋನಿ, ಮೈಸೂರು.
ಮೈಸೂರು: ಆಷಾಢ ಶುಕ್ರವಾರ, ಶನಿವಾರ ಹಾಗೂ ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಸಚಿವ ಯತೀಂದ್ರ…
ಮೈಸೂರು: ಜೀವವೈವಿಧ್ಯ ತಾಣವಾಗಿರುವn ಹಾಗೂ ಪ್ರಕೃತಿಯ ಸೊಬಗಿನ ವಾತಾವರಣದಿಂದ ಕೂಡಿರುವ ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’ ನಿರ್ಮಾಣ…
ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…
ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲ್ಲೂಕು ಕಚೇರಿ ಆಡಳಿತ ಸೌಧದಲ್ಲಿ ಇರುವ ನೆಮ್ಮದಿ ಕೇಂದ್ರದ ಮೂಲಕ ಜಾತಿ ಪ್ರಮಾಣ ಪತ್ರ, ಆದಾಯ…
ನಗರ ಪ್ರದೇಶಗಳ ಹೋಟೆಲ್ಗಳಲ್ಲಿ ನೀಡಲಾಗುವ ಆಹಾರ ಪಾರ್ಸೆಲ್ಗಳು ಹಾಗೂ ಆನ್ ಲೈನ್ ಮೂಲಕ ಸರಬರಾಜಾಗುವ ಶೇ.೯೦ ಕ್ಕಿಂತ ಹೆಚ್ಚು ಆಹಾರ…
ಸಾಮಾಜಿಕ ಮಾಧ್ಯಮ ಬಳಕೆದಾರರು ಬೆಂಗಳೂರಿನ ನಂತರ ಅತಿ ಹೆಚ್ಚು ಕ್ರಿಯಾಶೀಲರಾಗಿರುವುದು ಮೈಸೂರು ನಗರದಲ್ಲಿ. ಆದರೆ ಬೇಸರದ ಸಂಗತಿ ಎಂದರೆ ಇಲ್ಲಿನ…