Andolana originals

ಓದುಗರ ಪತ್ರ: ಅಮೆರಿಕ ಅಧ್ಯಕ್ಷರ ಹುಚ್ಚುತನ

ಉತ್ತರ ಅಟ್ಲಾಂಟಿಕ್ ಸಮುದ್ರದಲ್ಲಿ ಇರುವ ವಿಶ್ವದ ಅತಿದೊಡ್ಡ ದ್ವೀಪವಾಗಿರುವ ಹಾಗೂ ಡೆನ್ಮಾರ್ಕ್ ದೇಶದ ನಿಯಂತ್ರಣದಲ್ಲಿರುವ ‘ಗ್ರೀನ್ ಲ್ಯಾಂಡ್’ ದ್ವೀಪವನ್ನು ತನ್ನ ವಶಕ್ಕೆ ಪಡೆಯಬೇಕು ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ರವರ ಹುಚ್ಚುತನಕ್ಕೆ ಅಥವಾ ಹುಂಬತನಕ್ಕೆ ವಿಶ್ವದ ಪ್ರಮುಖ ರಾಷ್ಟ್ರಗಳು ಛೀಮಾರಿ ಹಾಕಿವೆ. ೬೩ ಲಕ್ಷ ಕೋಟಿ ರೂ.ಗಳನ್ನು ಡೆನ್ಮಾರ್ಕ್‌ಗೆ ನೀಡಿ ಈ ದ್ವೀಪವನ್ನು ತನ್ನ ಕೈವಶ ಮಾಡಿಕೊಳ್ಳುವ ಪ್ರಸ್ತಾವನೆಯನ್ನು ಅಮೆರಿಕ ಡೆನ್ಮಾರ್ಕ್ ಮುಂದಿಟ್ಟಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ.

ಒಂದು ವೇಳೆ ಡೆನ್ಮಾರ್ಕ್ ಈ ಪ್ರಸ್ತಾವನೆಯನ್ನು ತಿರಸ್ಕರಿಸಿದರೆ, ಅದರ ವಿರುದ್ಧ ಸೈನಿಕ ಕಾರ್ಯಾಚರಣೆ ನಡೆಸಲು ಕೂಡ ಅಮೆರಿಕ ಸಿದ್ಧತೆ ನಡೆಸಿದೆ ಎಂದು ಹೇಳಲಾಗುತ್ತಿದೆ. ಗ್ರೀನ್ ಲ್ಯಾಂಡ್ ನಲ್ಲಿರುವ ಅಪರೂಪದ ಖನಿಜ ಸಂಗ್ರಹಗಳ ಮೇಲೆ ಅಮೆರಿಕದ ಕಣ್ಣು ಬಿದ್ದಿದ್ದು, ಈ ದ್ವೀಪವನ್ನು ವಶಪಡಿಸಿಕೊಂಡು, ತನ್ನ ವಾಯು ರಕ್ಷಣೆ ವ್ಯವಸ್ಥೆಗೆ ಅನುವು ಮಾಡಿಕೊಡಲು ಟ್ರಂಪ್ ಆಡಳಿತ ನಿರ್ಧರಿಸಿದೆ ಎನ್ನಲಾಗಿದೆ. ಈ ದ್ವೀಪದಲ್ಲಿ ೩೯೭ ಲಕ್ಷ ಕೋಟಿ ರೂಪಾಯಿಗಳಷ್ಟು ಖನಿಜ ಸಂಪತ್ತಿದೆ ಎಂದು ಅಂದಾಜಿಸಲಾಗಿದೆ.

ಈಗಾಗಲೇ ವೆನುಜವೇಲಾದ ಅಧ್ಯಕ್ಷ ಹಾಗೂ ಅವರ ಪತ್ನಿಯನ್ನು ತನ್ನ ವಶಕ್ಕೆ ಪಡೆದುಕೊಂಡಿರುವ ಅಮೆರಿಕ ಈಗ ಇದೇ ಚಾಳಿಯನ್ನು ಗ್ರೀನ್ ಲ್ಯಾಂಡಿಗೂ ವಿಸ್ತರಿಸಿದೆ. ಮೆಕ್ಸಿಕೊ, ಕ್ಯೂಬಾ ದೇಶಗಳಿಗೂ ಇದೇ ರೀತಿಯ ಧಮಕಿ ಹಾಕಿರುವ ಅಮೆರಿಕದ ನಡೆ ಖಂಡನೀಯವಾಗಿದ್ದು, ಇಡೀ ವಿಶ್ವ ಸಮುದಾಯ ಅಮೆರಿಕದ ಇಂತಹ ಸಾಮ್ರಾಜ್ಯಶಾಹಿ ಭೀತಿಯ ವಿರುದ್ಧ ತಿರುಗಿ ಬೀಳಲು ಇದು ಸಕಾಲವಾಗಿದೆ.

-ಕೆ.ವಿ.ವಾಸು, ವಿವೇಕಾನಂದ ನಗರ, ಮೈಸೂರು

ಆಂದೋಲನ ಡೆಸ್ಕ್

Recent Posts

ಮಕ್ಕಳಿಗೆ ಮೊಬೈಲ್‌ ನಿಷೇಧ ಸರಿಯಲ್ಲ: ವಾಟಾಳ್‌ ನಾಗರಾಜ್‌ ಕಿಡಿ

ಮೈಸೂರು: ಮಕ್ಕಳಿಗೆ ಮೊಬೈಲ್‌ ಬಳಕೆ ನಿಷೇಧ ಸರಿಯಲ್ಲ. ಸರ್ಕಾರದ ನಡೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ ಎಂದು ಕನ್ನಡಪರ ಹೋರಾಟಗಾರ ವಾಟಾಳ್‌…

17 mins ago

ಟ್ರಂಪ್‌ ಜೊತೆ ಸೇರಿಕೊಂಡು ಮೋದಿ ನಮ್ಮ ದೇಶ ಹಾಳು ಮಾಡುತ್ತಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ಕಲಬುರ್ಗಿ: ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಮೋದಿ ಮೂಗು ಹಿಡಿದುಕೊಂಡು ಕಂಟ್ರೋಲ್‌ ಮಾಡುತ್ತಿದ್ದಾನೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ…

31 mins ago

ಮಲಗಿದ್ದ ವೇಳೆ ಹೃದಯಾಘಾತ: ಆರೋಗ್ಯ ಇಲಾಖೆ ನೌಕರ ಸಾವು

ಹಾಸನ: ಹೃದಯಾಘಾತದಿಂದ ಆರೋಗ್ಯ ಇಲಾಖೆ ನೌಕರ ಸಾವನ್ನಪ್ಪಿರುವ ಘಟನೆ ಹಾಸನ ಹೊರವಲಯದ ಗವೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ದೇವಾನಂದ್‌ ಎಂಬುವವರೇ ಮೃತಪಟ್ಟ…

44 mins ago

ಉಡುತೊರೆ ಹಳ್ಳ ಜಲಾಶಯ ಕಾಮಗಾರಿಗೆ ಸಿಎಂ ಅನುಮೋದನೆ: ಮಲೆ ಮಹದೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿದ ಶಾಸಕ ಎಂ.ಆರ್.ಮಂಜುನಾಥ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಉಡುತೊರೆ ಹಳ್ಳ ಜಲಾಶಯ ಏತ ನೀರಾವರಿ ಯೋಜನೆ ಹಾಗೂ…

1 hour ago

ಮತ್ತೆ ಇರಾನ್‌ನ ನಾಲ್ಕು ತೈಲ ಘಟಕಗಳನ್ನು ಉಡೀಸ್‌ ಮಾಡಿದ ಅಮೇರಿಕಾ

ಟೆಹರಾನ್:‌ ಇರಾನ್‌ ಮೇಲೆ ಇಸ್ರೇಲ್‌ ಹಾಗೂ ಅಮೇರಿಕಾ ದಾಳಿ ಮುಂದುವರಿಸಿದ್ದು, ಪ್ರಕ್ಷುಬ್ಧ ಸ್ಥಿತಿ ನಿರ್ಮಾಣವಾಗಿದೆ. ಇರಾನ್‌ನ ಬೀದಿ ಬೀದಿಗಳಲ್ಲಿ ಬೆಂಕಿ…

1 hour ago

ಸ್ಯಾಂಡಲ್‌ವುಡ್‌ ಖ್ಯಾತ ನಿರ್ಮಾಪಕ ನರಹಳ್ಳಿ ಜ್ಞಾನೇಶ್‌ ನಿಧನ

ಪಾಂಡವಪುರ: ಸ್ಯಾಂಡಲ್‌ವುಡ್‌ ನಿರ್ಮಾಪಕ, ನಿರ್ದೇಶಕ, ಸಂಕಲನಕಾರ ಹಾಗೂ ಸಂಘಟಕ ನರಹಳ್ಳಿ ಜ್ಞಾನೇಶ್ (೪೮) ಅವರು ಶುಕ್ರವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಾರ್ಯನಿಮಿತ್ತ…

2 hours ago