Andolana originals

ಓದುಗರ ಪತ್ರ: ಅಮೆರಿಕ ಅಧ್ಯಕ್ಷರ ಹುಚ್ಚುತನ

ಉತ್ತರ ಅಟ್ಲಾಂಟಿಕ್ ಸಮುದ್ರದಲ್ಲಿ ಇರುವ ವಿಶ್ವದ ಅತಿದೊಡ್ಡ ದ್ವೀಪವಾಗಿರುವ ಹಾಗೂ ಡೆನ್ಮಾರ್ಕ್ ದೇಶದ ನಿಯಂತ್ರಣದಲ್ಲಿರುವ ‘ಗ್ರೀನ್ ಲ್ಯಾಂಡ್’ ದ್ವೀಪವನ್ನು ತನ್ನ ವಶಕ್ಕೆ ಪಡೆಯಬೇಕು ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ರವರ ಹುಚ್ಚುತನಕ್ಕೆ ಅಥವಾ ಹುಂಬತನಕ್ಕೆ ವಿಶ್ವದ ಪ್ರಮುಖ ರಾಷ್ಟ್ರಗಳು ಛೀಮಾರಿ ಹಾಕಿವೆ. ೬೩ ಲಕ್ಷ ಕೋಟಿ ರೂ.ಗಳನ್ನು ಡೆನ್ಮಾರ್ಕ್‌ಗೆ ನೀಡಿ ಈ ದ್ವೀಪವನ್ನು ತನ್ನ ಕೈವಶ ಮಾಡಿಕೊಳ್ಳುವ ಪ್ರಸ್ತಾವನೆಯನ್ನು ಅಮೆರಿಕ ಡೆನ್ಮಾರ್ಕ್ ಮುಂದಿಟ್ಟಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ.

ಒಂದು ವೇಳೆ ಡೆನ್ಮಾರ್ಕ್ ಈ ಪ್ರಸ್ತಾವನೆಯನ್ನು ತಿರಸ್ಕರಿಸಿದರೆ, ಅದರ ವಿರುದ್ಧ ಸೈನಿಕ ಕಾರ್ಯಾಚರಣೆ ನಡೆಸಲು ಕೂಡ ಅಮೆರಿಕ ಸಿದ್ಧತೆ ನಡೆಸಿದೆ ಎಂದು ಹೇಳಲಾಗುತ್ತಿದೆ. ಗ್ರೀನ್ ಲ್ಯಾಂಡ್ ನಲ್ಲಿರುವ ಅಪರೂಪದ ಖನಿಜ ಸಂಗ್ರಹಗಳ ಮೇಲೆ ಅಮೆರಿಕದ ಕಣ್ಣು ಬಿದ್ದಿದ್ದು, ಈ ದ್ವೀಪವನ್ನು ವಶಪಡಿಸಿಕೊಂಡು, ತನ್ನ ವಾಯು ರಕ್ಷಣೆ ವ್ಯವಸ್ಥೆಗೆ ಅನುವು ಮಾಡಿಕೊಡಲು ಟ್ರಂಪ್ ಆಡಳಿತ ನಿರ್ಧರಿಸಿದೆ ಎನ್ನಲಾಗಿದೆ. ಈ ದ್ವೀಪದಲ್ಲಿ ೩೯೭ ಲಕ್ಷ ಕೋಟಿ ರೂಪಾಯಿಗಳಷ್ಟು ಖನಿಜ ಸಂಪತ್ತಿದೆ ಎಂದು ಅಂದಾಜಿಸಲಾಗಿದೆ.

ಈಗಾಗಲೇ ವೆನುಜವೇಲಾದ ಅಧ್ಯಕ್ಷ ಹಾಗೂ ಅವರ ಪತ್ನಿಯನ್ನು ತನ್ನ ವಶಕ್ಕೆ ಪಡೆದುಕೊಂಡಿರುವ ಅಮೆರಿಕ ಈಗ ಇದೇ ಚಾಳಿಯನ್ನು ಗ್ರೀನ್ ಲ್ಯಾಂಡಿಗೂ ವಿಸ್ತರಿಸಿದೆ. ಮೆಕ್ಸಿಕೊ, ಕ್ಯೂಬಾ ದೇಶಗಳಿಗೂ ಇದೇ ರೀತಿಯ ಧಮಕಿ ಹಾಕಿರುವ ಅಮೆರಿಕದ ನಡೆ ಖಂಡನೀಯವಾಗಿದ್ದು, ಇಡೀ ವಿಶ್ವ ಸಮುದಾಯ ಅಮೆರಿಕದ ಇಂತಹ ಸಾಮ್ರಾಜ್ಯಶಾಹಿ ಭೀತಿಯ ವಿರುದ್ಧ ತಿರುಗಿ ಬೀಳಲು ಇದು ಸಕಾಲವಾಗಿದೆ.

-ಕೆ.ವಿ.ವಾಸು, ವಿವೇಕಾನಂದ ನಗರ, ಮೈಸೂರು

ಆಂದೋಲನ ಡೆಸ್ಕ್

Recent Posts

ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವು

ನವೀನ್‌ ಕುಮಾರ್:‌ ಪಿರಿಯಾಪಟ್ಟಣ ತಾಲ್ಲೂಕು ವರದಿಗಾರರು ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ…

6 mins ago

ಹನೂರು| ಅಮಾವಾಸ್ಯೆ ಪ್ರಯುಕ್ತ ಮಲೆ ಮಹದೇಶ್ವರ ಬೆಟ್ಟಕ್ಕೆ ಹರಿದುಬಂದ ಭಕ್ತಸಾಗರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ಬಾದಾಮಿ ಅಮಾವಾಸ್ಯೆ ಪ್ರಯುಕ್ತ…

1 hour ago

ಚಾ.ನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ: ಸಚಿವ ಕೆ.ವೆಂಕಟೇಶ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು:‌ ಚಾಮರಾಜನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕೆಂದು‌‌ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ…

1 hour ago

ಒಂದು ರಾಷ್ಟ್ರ ಒಂದು ಚುನಾವಣೆ ಪ್ರಸ್ತಾವನೆಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ವಿರೋಧ

ಬೆಂಗಳೂರು: ಕೇಂದ್ರ ಸರಕಾರದ ಉದ್ದೇಶಿತ 'ಒಂದು ರಾಷ್ಟ್ರ ಒಂದು ಚುನಾವಣೆ' ಪ್ರಸ್ತಾವನೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ…

1 hour ago

ಶಾಸಕ ಜಿಟಿಡಿ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೆ ಅಭ್ಯಂತರವಿಲ್ಲ: ಮಾಜಿ ಸಚಿವ ಸಾ.ರಾ.ಮಹೇಶ್‌

ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಅವರು ತಮ್ಮ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೇ ನಮ್ಮ ಅಭ್ಯಂತರವಿಲ್ಲ ಎಂದು ಮಾಜಿ ಶಾಸಕ ಸಾ.ರಾ.ಮಹೇಶ್‌…

2 hours ago

ಮಂಡ್ಯ| ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳ ಬಂಧನ

Θಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಪಾಂಡವಪುರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ…

2 hours ago