Andolana originals

ಓದುಗರ ಪತ್ರ: ಅಮೆರಿಕ ಅಧ್ಯಕ್ಷರ ಹುಚ್ಚುತನ

ಉತ್ತರ ಅಟ್ಲಾಂಟಿಕ್ ಸಮುದ್ರದಲ್ಲಿ ಇರುವ ವಿಶ್ವದ ಅತಿದೊಡ್ಡ ದ್ವೀಪವಾಗಿರುವ ಹಾಗೂ ಡೆನ್ಮಾರ್ಕ್ ದೇಶದ ನಿಯಂತ್ರಣದಲ್ಲಿರುವ ‘ಗ್ರೀನ್ ಲ್ಯಾಂಡ್’ ದ್ವೀಪವನ್ನು ತನ್ನ ವಶಕ್ಕೆ ಪಡೆಯಬೇಕು ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ರವರ ಹುಚ್ಚುತನಕ್ಕೆ ಅಥವಾ ಹುಂಬತನಕ್ಕೆ ವಿಶ್ವದ ಪ್ರಮುಖ ರಾಷ್ಟ್ರಗಳು ಛೀಮಾರಿ ಹಾಕಿವೆ. ೬೩ ಲಕ್ಷ ಕೋಟಿ ರೂ.ಗಳನ್ನು ಡೆನ್ಮಾರ್ಕ್‌ಗೆ ನೀಡಿ ಈ ದ್ವೀಪವನ್ನು ತನ್ನ ಕೈವಶ ಮಾಡಿಕೊಳ್ಳುವ ಪ್ರಸ್ತಾವನೆಯನ್ನು ಅಮೆರಿಕ ಡೆನ್ಮಾರ್ಕ್ ಮುಂದಿಟ್ಟಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ.

ಒಂದು ವೇಳೆ ಡೆನ್ಮಾರ್ಕ್ ಈ ಪ್ರಸ್ತಾವನೆಯನ್ನು ತಿರಸ್ಕರಿಸಿದರೆ, ಅದರ ವಿರುದ್ಧ ಸೈನಿಕ ಕಾರ್ಯಾಚರಣೆ ನಡೆಸಲು ಕೂಡ ಅಮೆರಿಕ ಸಿದ್ಧತೆ ನಡೆಸಿದೆ ಎಂದು ಹೇಳಲಾಗುತ್ತಿದೆ. ಗ್ರೀನ್ ಲ್ಯಾಂಡ್ ನಲ್ಲಿರುವ ಅಪರೂಪದ ಖನಿಜ ಸಂಗ್ರಹಗಳ ಮೇಲೆ ಅಮೆರಿಕದ ಕಣ್ಣು ಬಿದ್ದಿದ್ದು, ಈ ದ್ವೀಪವನ್ನು ವಶಪಡಿಸಿಕೊಂಡು, ತನ್ನ ವಾಯು ರಕ್ಷಣೆ ವ್ಯವಸ್ಥೆಗೆ ಅನುವು ಮಾಡಿಕೊಡಲು ಟ್ರಂಪ್ ಆಡಳಿತ ನಿರ್ಧರಿಸಿದೆ ಎನ್ನಲಾಗಿದೆ. ಈ ದ್ವೀಪದಲ್ಲಿ ೩೯೭ ಲಕ್ಷ ಕೋಟಿ ರೂಪಾಯಿಗಳಷ್ಟು ಖನಿಜ ಸಂಪತ್ತಿದೆ ಎಂದು ಅಂದಾಜಿಸಲಾಗಿದೆ.

ಈಗಾಗಲೇ ವೆನುಜವೇಲಾದ ಅಧ್ಯಕ್ಷ ಹಾಗೂ ಅವರ ಪತ್ನಿಯನ್ನು ತನ್ನ ವಶಕ್ಕೆ ಪಡೆದುಕೊಂಡಿರುವ ಅಮೆರಿಕ ಈಗ ಇದೇ ಚಾಳಿಯನ್ನು ಗ್ರೀನ್ ಲ್ಯಾಂಡಿಗೂ ವಿಸ್ತರಿಸಿದೆ. ಮೆಕ್ಸಿಕೊ, ಕ್ಯೂಬಾ ದೇಶಗಳಿಗೂ ಇದೇ ರೀತಿಯ ಧಮಕಿ ಹಾಕಿರುವ ಅಮೆರಿಕದ ನಡೆ ಖಂಡನೀಯವಾಗಿದ್ದು, ಇಡೀ ವಿಶ್ವ ಸಮುದಾಯ ಅಮೆರಿಕದ ಇಂತಹ ಸಾಮ್ರಾಜ್ಯಶಾಹಿ ಭೀತಿಯ ವಿರುದ್ಧ ತಿರುಗಿ ಬೀಳಲು ಇದು ಸಕಾಲವಾಗಿದೆ.

-ಕೆ.ವಿ.ವಾಸು, ವಿವೇಕಾನಂದ ನಗರ, ಮೈಸೂರು

ಆಂದೋಲನ ಡೆಸ್ಕ್

Recent Posts

ರಾಜ್ಯದಲ್ಲಿ ಎಸ್‌ಐಆರ್‌ ಪ್ರಕ್ರಿಯೆ ಅಂತ್ಯ

5,54,32,314 ಎನ್ಯುಮರೇಷನ್ ಫಾರಂ ಹಂಚಿಕೆ ; ಶೇ.100 ರಷ್ಟು ಡಿಜಿಟಲೀಕರಣ ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)…

2 hours ago

ಮೈಸೂರು | ದಸರಾ ವೇಳೆಗೆ ಫುಟ್‌ಪಾತ್‌ಗಳ ದುರಸ್ತಿಗೆ ಸೂಚನೆ

ಮೈಸೂರು‌ : ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ನಗರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗಾಗಿ ಸರ್ಕಾರ 6 ಕೋಟಿ ರೂ. ಬಿಡುಗಡೆ ಮಾಡಿದ್ದು,…

3 hours ago

ಪ.ಬಂಗಾಳ | ಬೆಂಕಿ ಅವಘಡದಲ್ಲಿ ಏಳು ಮಂದಿ ಸಾವು, ಹಲವರು ಗಂಭೀರ

ತಾರಾಪಿತ್ (ಪಶ್ಚಿಮ ಬಂಗಾಳ) : ಬೆಂಕಿ ಅವಘಡದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದು, ಹಲವರು ಗಂಭೀರ ಗಾಯಗೊಂಡಿರುವ ಘಟನೆ ಪಶ್ಚಿಮ…

3 hours ago

ಯಳಂದೂರು | ಚಿರತೆ ದಾಳಿಗೆ ಕರು ಬಲಿ

ಯಳಂದೂರು : ಚಿರತೆ ದಾಳಿಗೆ ಕರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಯರಗಂಬಳ್ಳಿ ಗ್ರಾಮದಲ್ಲಿ ನಡೆದಿದೆ. ಯರಗಂಬಳ್ಳಿ ಗ್ರಾಮದ ಶೋಭಾ ಕೋಂ…

4 hours ago

ಸಿಡಬ್ಲ್ಯುಎಂಎ ಆದೇಶ ಪಾಲಿಸಿ ; ಕರ್ನಾಟಕಕ್ಕೆ ಸುಪ್ರೀಂ ಸೂಚನೆ

ಹೊಸದಿಲ್ಲಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಸಂಬಂಧದ ವಿವಾದ ಮತ್ತೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಾವೇರಿ ನೀರು ನಿರ್ವಹಣಾ…

5 hours ago

ಬೆಂಗಳೂರಿನ ಖಾಸಗಿ ಶಾಲೆಯಲ್ಲಿ ಎಚ್1ಎನ್1‌ ಸೋಂಕು ದೃಢ

ಬೆಂಗಳೂರು : ನಗರದ ಖಾಸಗಿ ಶಾಲೆಯೊಂದರ ಇಬ್ಬರು ಶಿಕ್ಷಕರಿಗೆ ಹೆಚ್1ಎನ್1 (H1N1) ದೃಢಪಟ್ಟಿದ್ದು ಆತಂಕ ಮೂಡಿಸಿದೆ. ಸದ್ಯಕ್ಕೆ ಹೈಸ್ಕೂಲ್ ಮಾತ್ರ…

5 hours ago