ಪ್ರತಿವರ್ಷ ಆಷಾಢ, ಶ್ರಾವಣ ಮಾಸದ ಸಮಯದಲ್ಲಿ ಎಲ್ಲ ಮಠಾಧೀಶರೂ ಚಾತುರ್ಮಾಸ ವ್ರತವನ್ನು ಆಚರಿಸುವುದು ವಾಡಿಕೆ. ಚಾತುರ್ಮಾಸ ಎಂದರೆ ನಾಲ್ಕು ತಿಂಗಳು. ಅಂದರೆ ಒಟ್ಟು ೧೨೦ ದಿನಗಳ ಲೆಕ್ಕ. ಆದರೆ ಕೆಲವು ವರ್ಷಗಳಿಂದ ಸ್ವಾಮೀಜಿಗಳ ವಯಸ್ಸಿನ ಪರಿಣಾಮದಿಂದ ಅಥವಾ ಅವರ ಕಾರ್ಯಕ್ರಮದ ವೇಳಾಪಟ್ಟಿಯಲ್ಲಿನ ವ್ಯತ್ಯಾಸದಿಂದಾಗಿ ಕೇವಲ ೪೮ ದಿನ ಅಂದರೆ ಒಂದು ಮಂಡಲ ಮುಗಿಸಿ ಎದ್ದುಬಿಡುತ್ತಿದ್ದರು. ಆದರೆ ಇತ್ತೀಚಿನ ದಿನಗಳಲ್ಲಿ ಅದನ್ನು ೩೦ ದಿನ ಅಂದರೆ ಕೇವಲ ಒಂದು ತಿಂಗಳಿಗೆ ಮೊಟಕುಗೊಳಿಸುತ್ತಿರುವುದು ಎಷ್ಟು ಸಮಂಜಸ? ಇದು ಚಾತುರ್ಮಾಸ ಪದದ ಅರ್ಥವನ್ನು ಕಳೆದುಕೊಳ್ಳುತ್ತಿದೆ. ಒಂದು ವೇಳೆ ಮುಖ್ಯ ಸ್ವಾಮೀಜಿಗಳಿಗೆ ವಯಸ್ಸಾಗಿದ್ದರೆ ಅವರ ಉತ್ತರಾಧಿಕಾರಿಯನ್ನು ಆ ಸ್ಥಾನದಲ್ಲಿ ಕುಳಿತುಕೊಳ್ಳುವಂತೆ ಸಲಹೆ ನೀಡಬಹುದು. ಇನ್ನು ಮುಂದಾದರೂ ಚಾತುರ್ಮಾಸದ ದಿನಗಳಲ್ಲಿ ಮಠಾಧೀಶರು ಕನಿಷ್ಠ ಪಕ್ಷ ಒಂದು ಮಂಡಲ ಅಂದರೆ ೪೮ ದಿನಗಳನ್ನಾದರೂ ಪೂರೈಸಿದರೆ ಚಾತುರ್ಮಾಸ ಎಂಬ ಪದಕ್ಕೆ ಅರ್ಥ ಬರುತ್ತದೆ.
– ಜಿ.ಪಿ.ಹರೀಶ್, ಮೈಸೂರು
ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…
ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವವು ನಮ್ಮ ನಾಡಿನ ಸಾಂಸ್ಕೃತಿಕ ಅನನ್ಯತೆಯನ್ನು ಎತ್ತಿ ಹಿಡಿಯುತ್ತದೆ. ಕಲೆ, ಸಾಹಿತ್ಯ, ಸಂಸ್ಕೃತಿಯ ಮೂಲಕ…
ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯು ಯಶಸ್ವಿಯಾಗಿ ಮೂರು ವರ್ಷಗಳನ್ನು ಪೂರೈಸಿದೆ. ಗ್ರಾಮೀಣ ಆರ್ಥಿಕತೆಗೆ ನವಚೈತನ್ಯ ತುಂಬಿದೆ. ಮಹಿಳೆಯರಿಗೆ ಆರ್ಥಿಕ…
ನವೀನ್ ಡಿಸೋಜ ಶೀತ, ಕೆಮ್ಮು, ಜ್ವರ ಸಂಬಂಧ ೩,೭೬೨ ಪ್ರಕರಣ ದಾಖಲು; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಮನವಿ ಮಡಿಕೇರಿ:…
ಮಹಾದೇಶ್ ಎಂ.ಗೌಡ ಹನೂರು: ಕುಡಿಯುವ ನೀರು, ಮೇವಿಗೂ ತೀವ್ರ ಹಾಹಾಕಾರ ಹನೂರು: ತಾಲ್ಲೂಕಿನಲ್ಲಿ ಈ ಬಾರಿ ಮುಂಗಾರು ಮಳೆ ಕೈಕೊಟ್ಟಿದ್ದು,…
ಕೆ.ಬಿ.ರಮೇಶನಾಯಕ ಈಗಾಗಲೇ ಜವಾಬ್ದಾರಿ ಹೊತ್ತಿರುವ ಡಾ.ಯತೀಂದ್ರ, ಸುನಿಲ್ಬೋಸ್, ಜಿ.ಡಿ.ಹರೀಶ್ ಗೌಡ ತಂದೆಯಂದಿರ ನಿಧನದಿಂದ ತೆರವಾದ ಸ್ಥಾನ ತುಂಬಿದ ಅನಿಲ್ ಚಿಕ್ಕಮಾದು,…