ಓದುಗರ ಪತ್ರ
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ ಶುಲ್ಕವನ್ನೂ ಏಕಾಏಕಿ ಶೇ.೧೦೦ರಷ್ಟು ಏರಿಸಿದೆ. ಅಂದರೆ ಈ ಹಿಂದೆ ಪ್ರತಿ ತಿಂಗಳು ಇದ್ದ ಯುಜಿಡಿ ಶುಲ್ಕ ೩೮ ರೂ. ನಿಂದ ೭೫ ರೂ.ಗಳಿಗೆ ಏರಿಕೆಯಾಗಿದೆ. ಪ್ರತಿ ನೀರು ಬಳಕೆದಾರರ ಮನೆಯ ಒಳ ಚರಂಡಿ ನಿರ್ವಹಣೆಯನ್ನೂ ತೆರಿಗೆದಾರರೇ ನಿರ್ವಹಿಸುತ್ತಿದ್ದು, ಹೊರಗಿನ ಒಳಚರಂಡಿಗಳಿಗೆ ಪಾಲಿಕೆ ಏನು ನಿರ್ವಹಣೆ ಮಾಡುತ್ತಿದೆ ಎಂಬುದನ್ನು ಬಲ್ಲವರೇ ತಿಳಿಸಬೇಕು. ಒಟ್ಟಾರೆ ಹಾಲು, ಕರೆಂಟು, ಬಸ್ಸು ಪ್ರಯಾಣ ದರದೊಂದಿಗೆ ನೀರಿನ ಕಂದಾಯವನ್ನೂ ಹೆಚ್ಚಿಸಿರುವುದು ಜನ ಸಾಮಾನ್ಯರಿಗೆ ಇನ್ನಷ್ಟು ಹೊರೆಯಾಗಿದೆ. ಸರ್ಕಾರ ಖಾಲಿಯಾಗಿರುವ ಬೊಕ್ಕಸವನ್ನು ತುಂಬಿಕೊಳ್ಳಲು ಎಲ್ಲಾ ದರಗಳನ್ನು ಏರಿಸುತ್ತಿದ್ದು, ಬಡ ಮತ್ತು ಮಧ್ಯಮ ವರ್ಗದವರು ಜೀವನ ನಡೆಸುವುದೇ ದುಸ್ತರವಾಗಿದೆ.
-ವಿಜಯ್ ಹೆಮ್ಮಿಗೆ, ಮೈಸೂರು
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…
ನವದೆಹಲಿ: ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯಿಸಿ ಸಿಜೆಪಿ ನಡೆಸಿದ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳ ಮೇಲೆ…
ರೈಲ್ವೆ ಇಲಾಖೆಯಿಂದ ಅನುಮತಿ ಪಡೆದ ಮಾರಾಟಗಾರರು ಪ್ರತಿನಿತ್ಯ ರೈಲುಗಳಲ್ಲಿ ಕಾಫಿ, ಟೀ, ಇಡ್ಲಿ, ರೈಸ್ ಬಾತ್ ಮೊದಲಾದ ಆಹಾರ ಪದಾರ್ಥಗಳು,…