ಮಂಡ್ಯದಲ್ಲಿ ನಡೆಯಲಿರುವ ೮೭ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟದ ಪ್ರಸ್ತಾಪ ಚರ್ಚೆಗೆ ಒಳಗಾಗುತ್ತಿದೆ. ಅದು ಆಹಾರ ಸಂಸ್ಕೃತಿಯ ಮೇಲೆ ಪ್ರಭಾವ ಬೀರುತ್ತದೆ. ಅಲ್ಲದೆ ಅದು ಪರೋಕ್ಷವಾಗಿ ಜತಿ ವ್ಯವಸ್ಥೆಯ ಪರ- ವಿರೋಧವಾಗಿ ಕಾಣುತ್ತಿದೆ. ಯಾರು ಏನೇ ಹೇಳಿದರೂ ದೇಶದಲ್ಲಿ ಜತಿ ಪದ್ಧತಿಯ ಬೇರು ಗಟ್ಟಿಯಾಗುತ್ತಲೇ ಇರುವಂತಿದೆ. ಅಲ್ಲದೆ, ಆಧುನಿಕತೆಗೆ ಒಗಿಕೊಂಡಷ್ಟೂ, ಜತಿವಾದವೂ ನವೀನ ರೂಪದಲ್ಲಿ ಕಾಣಿಸಿಕೊಳ್ಳುತ್ತಿದೆ. ಈ ಮಾತಿಗೆ ಒಂದು ‘ಮನೆ ಭೋಗ್ಯಕ್ಕೆ ಖಾಲಿ ಇದೆ’ ಎಂಬ ಭಿತ್ತಿಪತ್ರ (ಗೋಡೆ ಬದಲಿಗೆ ಮರದ ಮೇಲಿದೆ)ದಲ್ಲಿರುವ ಒಕ್ಕಣೆ ಸಾಕ್ಷ್ಯವಾಗಿದೆ.
ಮೈಸೂರಿನ ಬಡಾವಣೆಯೊಂದರಲ್ಲಿ ಆ ಪತ್ರವನ್ನು ಮರಕ್ಕೆ ಅಂಟಿಸಲಾಗಿದೆ. ಅದರಲ್ಲಿ ಒಳಗೆ ೨ ಬಿಎಚ್ಕೆ ಎಂಬುದಾಗಿ ಇಂಗ್ಲಿಷ್ ಭಾಷೆಯಲ್ಲಿ ಬರೆಯಲಾಗಿದೆ. ಅದನ್ನು ಮೀರಿ ಅದೇ ಇಂಗ್ಲಿಷ್ ಭಾಷೆಯಲ್ಲಿ ಆವರಣದ ಒಳಗೆ ‘ವೆಜ್ ಓನ್ಲಿ’ ಎಂಬುದನ್ನು ರಾಜರೋಷವಾಗಿ ಬರೆಯಲಾಗಿದೆ. ಅದೂ ಮೊಬೈಲ್ ಸಂಖ್ಯೆ ಸಹಿತ ದಾಖಲಿಸಿದ್ದಾರೆ. ಆ ಮನೆಯ ಮಾಲೀಕರಿಗೆ ಬಹುಶಃ ಕಾನೂನಿನ ಅರಿವು ಇಲ್ಲದಿರಬಹುದು. ಆದರೆ, ಇದು ಪರಿಶಿಷ್ಟ ಜತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ಕಾಯ್ದೆ ಅಡಿಯಲ್ಲಿ ಅಪರಾಧ ಎಂಬುದು ಗೊತ್ತಿಲ್ಲದಿರಬಹುದು. ಆದರೆ, ಈ ನೆಲದಲ್ಲಿ ಜತಿ ಪದ್ಧತಿ ಯನ್ನು ಬೇರು ಸಮೇತ ಕೀಳುವುದು ಸಾಧ್ಯವೇ ಎಂಬ ಬೃಹತ್ ಪ್ರಶ್ನೆಯನ್ನು ಈ ಭಿತ್ತಿಪತ್ರ ಅಣಕಿಸಿ ಕೇಳಿದಂತಿತ್ತು. ಇದು ಒಂದು ಉದಾಹರಣೆ ಅಷ್ಟೆ. (ಬಹುಶಃ ಈಗ ಆ ಭಿತ್ತಿಪತ್ರ ಕಿತ್ತುಹೋಗಿರಬಹುದು)
-ಅನ್ವಿಕ್, ಕೆಎಚ್ಬಿ ಕಾಲೋನಿ, ನಂಜನಗೂಡು
ಸಾರ್ಥಕ ಬದುಕಿನ ಸಾಧಕ! ಗಹನ ಆರ್ಥಿಕ ಚಿಂತನೆಗಳನು ಎಳೆಎಳೆಯಾಗಿ ಬಿಡಿಸಿ ನೀಡಿದ ನಾಡ ಅಪ್ಪಟ ಆರ್ಥಿಕ ಚಿಂತಕ! ಶಿಷ್ಯರ ಮನದ…
ತೆಲಂಗಾಣದಲ್ಲಿ ೩೦,೦೦೦ ಕೆ.ಜಿ. ನಕಲಿ ಮಸಾಲೆ ಜಪ್ತಿಯಾಗಿರುವುದು ಕೇವಲ ಎಚ್ಚರಿಕೆಯಲ್ಲ ನಮಗಿದು ನೇರ ಬೆದರಿಕೆ! ಮಸಾಲೆ, ಹಾಲು, ಎಣ್ಣೆ ಹಾಗೂ…
ಮೈಸೂರು ಮಹಾನಗರ ಪಾಲಿಕೆಯು ಹೊರಾಂಗಣ ಸಂಗೀತ ವಾದ್ಯಗಳ ಜೋಡಣೆ ಎಂಬ ಹೆಸರಿನಲ್ಲಿ ಉದ್ಯಾನವನಗಳಲ್ಲಿ ಸಂಗೀತ ವಾದ್ಯಗಳನ್ನು ಜೋಡಿಸುವ ವಿನೂತನ ಪ್ರಯೋಗವನ್ನು…
ಶಿವಾಜಿ ಗಣೇಶನ್ ಅವರ ವಾರದ ಅಂಕಣ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿಸಿ ದೇಶದಲ್ಲಿ ದಿಢೀರನೆ ಹುಟ್ಟಿಕೊಂಡ ಕಾಕ್ರೋಚ್ ಜನತಾ…
ಬಿ.ಎಸ್.ವಿನಯ್ ಇಲ್ಲಿಯವರೆಗೆ ನಮ್ಮಂತಹ ಅಂಕಲ್ -ಆಂಟಿಗಳು ಜೆನ್ ಝೀಗಳ ಬಗ್ಗೆ ಒಳ್ಳೆಯ ಮಾತಾಡಿದ್ದಕ್ಕಿಂತ ಮೂಗು ಮುರಿದದ್ದೇ ಹೆಚ್ಚು. ಈ ಹುಡುಗರಿಗೆ…
ಸ್ವಾಮಿ ಪೊನ್ನಾಚಿ ನಾನು ಸಾಹಿತ್ಯವನ್ನು ಗಂಭೀರವಾಗಿ ಓದಿಕೊಳ್ಳುವ ಕಾಲಕ್ಕೆ ಹೆಚ್ಚು ಕಡಿಮೆ ಚಳವಳಿಗಳ ಕಾವು ನಿಂತೇ ಹೋಗಿತ್ತು. ಜೋರು ಗಾಳಿ…