Andolana originals

ಓದುಗರ ಪತ್ರ: ಜಾತಿವಾದಿ ಮನದ ‘ ಓನ್ಲಿ ವೆಜ್’ ಎಂಬ ಕೇಕೆ

ಮಂಡ್ಯದಲ್ಲಿ ನಡೆಯಲಿರುವ ೮೭ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟದ ಪ್ರಸ್ತಾಪ ಚರ್ಚೆಗೆ ಒಳಗಾಗುತ್ತಿದೆ. ಅದು ಆಹಾರ ಸಂಸ್ಕೃತಿಯ ಮೇಲೆ ಪ್ರಭಾವ ಬೀರುತ್ತದೆ. ಅಲ್ಲದೆ ಅದು ಪರೋಕ್ಷವಾಗಿ ಜತಿ ವ್ಯವಸ್ಥೆಯ ಪರ- ವಿರೋಧವಾಗಿ ಕಾಣುತ್ತಿದೆ. ಯಾರು ಏನೇ ಹೇಳಿದರೂ ದೇಶದಲ್ಲಿ ಜತಿ ಪದ್ಧತಿಯ ಬೇರು ಗಟ್ಟಿಯಾಗುತ್ತಲೇ ಇರುವಂತಿದೆ. ಅಲ್ಲದೆ, ಆಧುನಿಕತೆಗೆ ಒಗಿಕೊಂಡಷ್ಟೂ, ಜತಿವಾದವೂ ನವೀನ ರೂಪದಲ್ಲಿ ಕಾಣಿಸಿಕೊಳ್ಳುತ್ತಿದೆ. ಈ ಮಾತಿಗೆ ಒಂದು ‘ಮನೆ ಭೋಗ್ಯಕ್ಕೆ ಖಾಲಿ ಇದೆ’ ಎಂಬ ಭಿತ್ತಿಪತ್ರ (ಗೋಡೆ ಬದಲಿಗೆ ಮರದ ಮೇಲಿದೆ)ದಲ್ಲಿರುವ ಒಕ್ಕಣೆ ಸಾಕ್ಷ್ಯವಾಗಿದೆ.

ಮೈಸೂರಿನ ಬಡಾವಣೆಯೊಂದರಲ್ಲಿ ಆ ಪತ್ರವನ್ನು ಮರಕ್ಕೆ ಅಂಟಿಸಲಾಗಿದೆ. ಅದರಲ್ಲಿ ಒಳಗೆ ೨ ಬಿಎಚ್‌ಕೆ ಎಂಬುದಾಗಿ ಇಂಗ್ಲಿಷ್ ಭಾಷೆಯಲ್ಲಿ ಬರೆಯಲಾಗಿದೆ. ಅದನ್ನು ಮೀರಿ ಅದೇ ಇಂಗ್ಲಿಷ್ ಭಾಷೆಯಲ್ಲಿ ಆವರಣದ ಒಳಗೆ ‘ವೆಜ್ ಓನ್ಲಿ’ ಎಂಬುದನ್ನು ರಾಜರೋಷವಾಗಿ ಬರೆಯಲಾಗಿದೆ. ಅದೂ ಮೊಬೈಲ್ ಸಂಖ್ಯೆ ಸಹಿತ ದಾಖಲಿಸಿದ್ದಾರೆ. ಆ ಮನೆಯ ಮಾಲೀಕರಿಗೆ ಬಹುಶಃ ಕಾನೂನಿನ ಅರಿವು ಇಲ್ಲದಿರಬಹುದು. ಆದರೆ, ಇದು ಪರಿಶಿಷ್ಟ ಜತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ಕಾಯ್ದೆ ಅಡಿಯಲ್ಲಿ ಅಪರಾಧ ಎಂಬುದು ಗೊತ್ತಿಲ್ಲದಿರಬಹುದು. ಆದರೆ, ಈ ನೆಲದಲ್ಲಿ ಜತಿ ಪದ್ಧತಿ ಯನ್ನು ಬೇರು ಸಮೇತ ಕೀಳುವುದು ಸಾಧ್ಯವೇ ಎಂಬ ಬೃಹತ್ ಪ್ರಶ್ನೆಯನ್ನು ಈ ಭಿತ್ತಿಪತ್ರ ಅಣಕಿಸಿ ಕೇಳಿದಂತಿತ್ತು. ಇದು ಒಂದು ಉದಾಹರಣೆ ಅಷ್ಟೆ. (ಬಹುಶಃ ಈಗ ಆ ಭಿತ್ತಿಪತ್ರ ಕಿತ್ತುಹೋಗಿರಬಹುದು)

-ಅನ್ವಿಕ್, ಕೆಎಚ್‌ಬಿ ಕಾಲೋನಿ, ನಂಜನಗೂಡು

ಆಂದೋಲನ ಡೆಸ್ಕ್

Recent Posts

ಚೀನಾ ಪಟಾಕಿ ಕಾರ್ಖಾನೆಯಲ್ಲಿ ಭಾರೀ ಸ್ಫೋಟ: 21 ಜನರು ಸಾವು

ಬೀಜಿಂಗ್:‌ ಮಧ್ಯ ಚೀನಾದ ಪಟಾಕಿ ಉತ್ಪಾದನಾ ಘಟಕದಲ್ಲಿ ಸಂಭವಿಸಿದ ಪ್ರಬಲ ಸ್ಫೋಟದಲ್ಲಿ ಕನಿಷ್ಠ 21 ಜನರು ಸಾವನ್ನಪ್ಪಿದ್ದು, 60ಕ್ಕೂ ಹೆಚ್ಚು…

1 hour ago

ಶ್ರೀರಂಗಪಟ್ಟಣ: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ

ಶ್ರೀರಂಗಪಟ್ಟಣ: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ಗಂಜಾಮ್‌ನಲ್ಲಿ ನಡೆದಿದೆ. ಮೈಸೂರು ಮೂಲದ…

2 hours ago

ನೀರಿಗಿಳಿಯುವ ಮುನ್ನ ಇರಲಿ ಎಚ್ಚರ !

ಜಿಲ್ಲೆಯಲ್ಲಿ ೧೧ ಮಂದಿ ಸಾವು ಮುಂಜಾಗ್ರತೆ ಪಾಲಿಸುವುದು ಅಗತ್ಯ ಮೈಸೂರು: ಬಿರು ಬೇಸಿಗೆ ಸಂದರ್ಭದಲ್ಲಿ ನದಿ, ಕೆರೆ ಹಾಗೂ ಕಾಲುವೆಗಳಲ್ಲಿ…

6 hours ago

ಸರಳ, ಸಜ್ಜನ ರಾಜಕಾರಣಿ ಎಸ್.ಎಂ.ಕೃಷ್ಣ

ಪ್ರೊ.ಜಯಪ್ರಕಾಶಗೌಡ, ಅಧ್ಯಕ್ಷರು, ಕರ್ನಾಟಕ ಸಂಘ, ಮೈಸೂರು  ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರಿಗೆ ಎಸ್.ಎಂ.ಕೃಷ್ಣ ಪ್ರಶಸ್ತಿ ಪುರಸ್ಕಾರ ಮಂಡ್ಯ ಜಿಲ್ಲೆಯ…

6 hours ago

ಬಿಸಿಲಿಗೆ ಪರ್ಯಾಯ ಈಜುಕೊಳಗಳು

ಚಿರಂಜೀವಿ ಸಿ.ಹುಲ್ಲಹಳ್ಳಿ ೩,೭೫೦ ರೂ., ಶೇ.೧೮ರಷ್ಟು ಜಿಎಸ್‌ಟಿ ಸೇರಿ ಒಟ್ಟು ೪,೭೫೦ ರೂ.ಶುಲ್ಕ ಪ್ರತಿ ಶಿಬಿರಾರ್ಥಿಗೆ ನಿಗದಿ ಮೈಸೂರು: ಮಲ್ಲಿಗೆ…

6 hours ago

ಗ್ರಾಪಂ ಅಧಿಕಾರಿಗಳ ನಿಗಾಕ್ಕೆ ಜಿಪಿಎಸ್ ಸಿಸ್ಟಂ

ಕೆ.ಬಿ.ರಮೇಶನಾಯಕ ಬಯೋಮೆಟ್ರಿಕ್ ಹಾಜರಾತಿ ಜತೆಗೆ ಜಿಪಿಎಸ್ ವ್ಯವಸ್ಥೆ ಜಾರಿಗೆ ಚಿಂತನೆ ಹಾಜರಾತಿ ಹಾಕಿ ಬೇಕಾಬಿಟ್ಟಿ ಓಡಾಡುವ ಸಿಬ್ಬಂದಿಗಳಿಗೆ ಬ್ರೇಕ್ ಮೈಸೂರು:…

6 hours ago