ಮಂಡ್ಯದಲ್ಲಿ ನಡೆಯಲಿರುವ ೮೭ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟದ ಪ್ರಸ್ತಾಪ ಚರ್ಚೆಗೆ ಒಳಗಾಗುತ್ತಿದೆ. ಅದು ಆಹಾರ ಸಂಸ್ಕೃತಿಯ ಮೇಲೆ ಪ್ರಭಾವ ಬೀರುತ್ತದೆ. ಅಲ್ಲದೆ ಅದು ಪರೋಕ್ಷವಾಗಿ ಜತಿ ವ್ಯವಸ್ಥೆಯ ಪರ- ವಿರೋಧವಾಗಿ ಕಾಣುತ್ತಿದೆ. ಯಾರು ಏನೇ ಹೇಳಿದರೂ ದೇಶದಲ್ಲಿ ಜತಿ ಪದ್ಧತಿಯ ಬೇರು ಗಟ್ಟಿಯಾಗುತ್ತಲೇ ಇರುವಂತಿದೆ. ಅಲ್ಲದೆ, ಆಧುನಿಕತೆಗೆ ಒಗಿಕೊಂಡಷ್ಟೂ, ಜತಿವಾದವೂ ನವೀನ ರೂಪದಲ್ಲಿ ಕಾಣಿಸಿಕೊಳ್ಳುತ್ತಿದೆ. ಈ ಮಾತಿಗೆ ಒಂದು ‘ಮನೆ ಭೋಗ್ಯಕ್ಕೆ ಖಾಲಿ ಇದೆ’ ಎಂಬ ಭಿತ್ತಿಪತ್ರ (ಗೋಡೆ ಬದಲಿಗೆ ಮರದ ಮೇಲಿದೆ)ದಲ್ಲಿರುವ ಒಕ್ಕಣೆ ಸಾಕ್ಷ್ಯವಾಗಿದೆ.
ಮೈಸೂರಿನ ಬಡಾವಣೆಯೊಂದರಲ್ಲಿ ಆ ಪತ್ರವನ್ನು ಮರಕ್ಕೆ ಅಂಟಿಸಲಾಗಿದೆ. ಅದರಲ್ಲಿ ಒಳಗೆ ೨ ಬಿಎಚ್ಕೆ ಎಂಬುದಾಗಿ ಇಂಗ್ಲಿಷ್ ಭಾಷೆಯಲ್ಲಿ ಬರೆಯಲಾಗಿದೆ. ಅದನ್ನು ಮೀರಿ ಅದೇ ಇಂಗ್ಲಿಷ್ ಭಾಷೆಯಲ್ಲಿ ಆವರಣದ ಒಳಗೆ ‘ವೆಜ್ ಓನ್ಲಿ’ ಎಂಬುದನ್ನು ರಾಜರೋಷವಾಗಿ ಬರೆಯಲಾಗಿದೆ. ಅದೂ ಮೊಬೈಲ್ ಸಂಖ್ಯೆ ಸಹಿತ ದಾಖಲಿಸಿದ್ದಾರೆ. ಆ ಮನೆಯ ಮಾಲೀಕರಿಗೆ ಬಹುಶಃ ಕಾನೂನಿನ ಅರಿವು ಇಲ್ಲದಿರಬಹುದು. ಆದರೆ, ಇದು ಪರಿಶಿಷ್ಟ ಜತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ಕಾಯ್ದೆ ಅಡಿಯಲ್ಲಿ ಅಪರಾಧ ಎಂಬುದು ಗೊತ್ತಿಲ್ಲದಿರಬಹುದು. ಆದರೆ, ಈ ನೆಲದಲ್ಲಿ ಜತಿ ಪದ್ಧತಿ ಯನ್ನು ಬೇರು ಸಮೇತ ಕೀಳುವುದು ಸಾಧ್ಯವೇ ಎಂಬ ಬೃಹತ್ ಪ್ರಶ್ನೆಯನ್ನು ಈ ಭಿತ್ತಿಪತ್ರ ಅಣಕಿಸಿ ಕೇಳಿದಂತಿತ್ತು. ಇದು ಒಂದು ಉದಾಹರಣೆ ಅಷ್ಟೆ. (ಬಹುಶಃ ಈಗ ಆ ಭಿತ್ತಿಪತ್ರ ಕಿತ್ತುಹೋಗಿರಬಹುದು)
-ಅನ್ವಿಕ್, ಕೆಎಚ್ಬಿ ಕಾಲೋನಿ, ನಂಜನಗೂಡು
ಬೀಜಿಂಗ್: ಮಧ್ಯ ಚೀನಾದ ಪಟಾಕಿ ಉತ್ಪಾದನಾ ಘಟಕದಲ್ಲಿ ಸಂಭವಿಸಿದ ಪ್ರಬಲ ಸ್ಫೋಟದಲ್ಲಿ ಕನಿಷ್ಠ 21 ಜನರು ಸಾವನ್ನಪ್ಪಿದ್ದು, 60ಕ್ಕೂ ಹೆಚ್ಚು…
ಶ್ರೀರಂಗಪಟ್ಟಣ: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ಗಂಜಾಮ್ನಲ್ಲಿ ನಡೆದಿದೆ. ಮೈಸೂರು ಮೂಲದ…
ಜಿಲ್ಲೆಯಲ್ಲಿ ೧೧ ಮಂದಿ ಸಾವು ಮುಂಜಾಗ್ರತೆ ಪಾಲಿಸುವುದು ಅಗತ್ಯ ಮೈಸೂರು: ಬಿರು ಬೇಸಿಗೆ ಸಂದರ್ಭದಲ್ಲಿ ನದಿ, ಕೆರೆ ಹಾಗೂ ಕಾಲುವೆಗಳಲ್ಲಿ…
ಪ್ರೊ.ಜಯಪ್ರಕಾಶಗೌಡ, ಅಧ್ಯಕ್ಷರು, ಕರ್ನಾಟಕ ಸಂಘ, ಮೈಸೂರು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರಿಗೆ ಎಸ್.ಎಂ.ಕೃಷ್ಣ ಪ್ರಶಸ್ತಿ ಪುರಸ್ಕಾರ ಮಂಡ್ಯ ಜಿಲ್ಲೆಯ…
ಚಿರಂಜೀವಿ ಸಿ.ಹುಲ್ಲಹಳ್ಳಿ ೩,೭೫೦ ರೂ., ಶೇ.೧೮ರಷ್ಟು ಜಿಎಸ್ಟಿ ಸೇರಿ ಒಟ್ಟು ೪,೭೫೦ ರೂ.ಶುಲ್ಕ ಪ್ರತಿ ಶಿಬಿರಾರ್ಥಿಗೆ ನಿಗದಿ ಮೈಸೂರು: ಮಲ್ಲಿಗೆ…
ಕೆ.ಬಿ.ರಮೇಶನಾಯಕ ಬಯೋಮೆಟ್ರಿಕ್ ಹಾಜರಾತಿ ಜತೆಗೆ ಜಿಪಿಎಸ್ ವ್ಯವಸ್ಥೆ ಜಾರಿಗೆ ಚಿಂತನೆ ಹಾಜರಾತಿ ಹಾಕಿ ಬೇಕಾಬಿಟ್ಟಿ ಓಡಾಡುವ ಸಿಬ್ಬಂದಿಗಳಿಗೆ ಬ್ರೇಕ್ ಮೈಸೂರು:…