ಲೈಂಗಿಕ ದೌರ್ಜನ್ಯಕ್ಕೊಳಗಾಗಿ ದೂರು ನೀಡಲು ಬಂದಿದ್ದ ಬಾಲಕಿಯ ಮೇಲೆಯೇ ಬೊಮ್ಮನಹಳ್ಳಿ ಪೊಲೀಸ್ ಠಾಣೆಯ ಅರುಣ್ ಎಂಬ ಪೇದೆಯು ಅತ್ಯಾಚಾರವೆಸಗಿದ್ದಾನೆ. ಪ್ರೀತಿಯ ಜಾಲಕ್ಕೆ ಸಿಲುಕಿ ೧೭ ವರ್ಷದ ಬಾಲಕಿಯೊಬ್ಬಳು ಯುವಕನೋರ್ವನಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿ ಮೋಸ ಹೋಗಿದ್ದಳು. ತನಗಾದ ಅನ್ಯಾಯದ ವಿರುದ್ಧ ದೂರು ನೀಡಲು ಆಕೆ ಬೊಮ್ಮನಹಳ್ಳಿ ಪೊಲೀಸ್ ಠಾಣೆಗೆ ಬಂದಿದ್ದಾಗ ಕರ್ತವ್ಯದಲ್ಲಿದ್ದ ಅರುಣ್ ಎಂಬ ಪೇದೆ ನ್ಯಾಯ ಕೊಡಿಸುವುದಾಗಿ ನಂಬಿಸಿ, ಹೋಟೆಲ್ ರೂಮ್ ಒಂದರಲ್ಲಿ ಎರಡು ಬಾರಿ ಅತ್ಯಾಚಾರವೆಸಗಿದ್ದಲ್ಲದೆ ಆಕೆಯ ಬೆತ್ತಲೆ ಫೋಟೋಗಳನ್ನು ತೆಗೆದುಕೊಂಡು, ಈ ವಿಚಾರವನ್ನು ಯಾರಿಗಾದರೂ ಹೇಳಿದರೆ, ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಸಂತ್ರಸ್ತೆ ತನಗಾದ ಅನ್ಯಾಯದ ಬಗ್ಗೆ ಆಕೆಯ ತಾಯಿಯ ಬಳಿ ಹೇಳಿಕೊಂಡಾಗ ಈ ಪ್ರಕರಣ ಬೆಳಕಿಗೆ ಬಂದಿದೆ. ಬಳಿಕ ತಾಯಿ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಪೇದೆ ಹಾಗೂ ಪ್ರೀತಿಸುವುದಾಗಿ ನಂಬಿಸಿ ಅತ್ಯಾಚಾರವೆಸಗಿದ ಯುವಕನನ್ನು ಬಂಽಸಿದ್ದಾರೆ. ರಕ್ಷಣೆ ನೀಡ ಬೇಕಾದ ಪೊಲೀಸ್ ಪೇದೆಯೇ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರವೆಸಗಿರುವುದು ಪೊಲೀಸ್ ಇಲಾಖೆ ತಲೆ ತಗ್ಗಿಸುವಂತೆ ಮಾಡಿದೆ. ಆದ್ದರಿಂದ ಬೆಂಗಳೂರು ನಗರ ಪೊಲೀಸ್ ಆಯುಕ್ತರು ಪೊಲೀಸ್ ಪೇದೆಯನ್ನು ಕೆಲಸದಿಂದ ವಜಾಗೊಳಿಸುವ ಜತೆಗೆ ಆತನಿಗೆ ಕಠಿಣ ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕಿದೆ.
-ಪವನ್ ಜಯರಾಂ, ಸಿದ್ದಯ್ಯನಪುರ, ಚಾಮರಾಜನಗರ.
ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…
ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…
ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…
ಪಂಜು ಗಂಗೊಳ್ಳಿ ಅವರ ವಾರದ ಅಂಕಣ ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…
ಕೇಶವ್ ಜೆಎಸ್ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯಿಂದ ಅಚ್ಚರಿಯ ಸಂಶೋಧನೆ! ಮೈಸೂರು: ಬಸವನಹುಳುಗಳನ್ನು ಜಮೀನುಗಳಲ್ಲಿ ರೈತರು ನೋಡಿದರೆ, ನಮ್ಮ…
ಕೆ.ಬಿ.ರಮೇಶನಾಯಕ ನಮೂನೆ-೬ ಸಲ್ಲಿಸಿ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಇನ್ನೂ ಇದೆ ಅವಕಾಶ ಮೈಸೂರು: ಮುಂಬರುವ ವಿಧಾನಸಭೆ, ಲೋಕಸಭಾ ಚುನಾವಣೆಗೂ…