ಓದುಗರ ಪತ್ರ
ಮೈಸೂರು ಮಹಾರಾಜರ ಕಾಲದಲ್ಲಿ ನಿರ್ಮಾಣಗೊಂಡ ಕಟ್ಟಡಗಳು ಇಂದಿಗೂ ಸದೃಢವಾಗಿ ಕಂಗೊಳಿಸುತ್ತಿರುವುದು ಮೈಸೂರಿನ ಭವ್ಯ ಪರಂಪರೆಗೆ ಸಾಕ್ಷಿಯಾಗಿವೆ. ಇಂತಹ ಪಾರಂಪರಿಕ ಕಟ್ಟಡಗಳ ಎದುರು ಮಾಹಿತಿ ನೀಡುವ ಫಲಕಗಳು ಬಿಸಿಲು, ಮಳೆಯಿಂದ ಮಾಸಿ ಹೋಗಿವೆ. ಪಾರಂಪರಿಕ ಕಟ್ಟಡಗಳ ಎದುರು ಫಲಕಗಳನ್ನು ಹಾಕುವ ಮೂಲಕ ಸಾರ್ವಜನಿಕರಿಗೆ ಅವುಗಳ ವಿಶೇಷತೆ, ನಿರ್ಮಾಣಗೊಂಡ ವರ್ಷ ಮೊದಲಾದ ವಿಷಯಗಳ ಬಗ್ಗೆ ಮಾಹಿತಿ ಒದಗಿಸಲಾಗಿದೆ.
ಮೈಸೂರು ಮಹಾನಗರ ಪಾಲಿಕೆಯು ಬಹುತೇಕ ಮಾಹಿತಿ ಫಲಕಗಳನ್ನು ಸೂಕ್ತ ರೀತಿಯಲ್ಲಿ ನಿರ್ವಹಿಸದೆ ಇರುವ ಕಾರಣ ಮಸುಕಾಗಿ ಹಾಗೂ ಅಳಿಸಿ ಹೋಗಿದ್ದು, ಪ್ರವಾಸಿಗರಿಗೆ ಈ ಬಗ್ಗೆ ಯಾವುದೇ ಮಾಹಿತಿ ದೊರೆಯುವುದಿಲ್ಲ. ಮಹಾನಗರ ಪಾಲಿಕೆಯ ಅಧಿಕಾರಿಗಳು ಇತ್ತ ಕಡೆ ಗಮನ ಹರಿಸಿ ಪಾರಂಪರಿಕ ಕಟ್ಟಡಗಳ ಬಗ್ಗೆ ಮಾಹಿತಿ ನೀಡುವ ಫಲಕಗಳಿಗೆ ಬಣ್ಣ ಬಳಿದು ಮೊದಲಿನಂತೆ ಸಂಕ್ಷಿಪ್ತ ಮಾಹಿತಿಯನ್ನು ಬರೆಸುವ ಮೂಲಕ ಪ್ರವಾಸಿಗರಿಗೆ, ಸ್ಥಳೀಯರಿಗೆ ಕಟ್ಟಡಗಳ ಬಗ್ಗೆ ಮಾಹಿತಿ ಸಿಗುವಂತೆ ಮಾಡುವುದು ಅಗತ್ಯ.
-ಬೆಸಗರಹಳ್ಳಿ ರವಿ ಪ್ರಸಾದ್, ಮೈಸೂರು
ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…
ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…
ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…
ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…