Andolana originals

ಓದುಗರ ಪತ್ರ: ಸಹಕಾರ ತತ್ವ ಎಲ್ಲರಿಗೂ ಕ್ಷೇಮ

ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಮಹಾಬಲಿಪುರಂನಲ್ಲಿ ನಡೆದ ದಕ್ಷಿಣ ವಲಯ ಮಂಡಳಿಯ ಸಭೆಯಲ್ಲಿ ಮುಖ್ಯಮಂತ್ರಿ ಡಿ. ಕೆ.ಶಿವಕುಮಾರ್ ಅವರು, ಕಾವೇರಿ, ಕೃಷ್ಣಾ, ತುಂಗಭದ್ರಾ, ಪೆನ್ನಾರ್ ಮತ್ತು ಪಾಲಾರ್ ನದಿಗಳು ಇಡೀ ದಕ್ಷಿಣ ಭಾರತದ ಪರ್ಯಾಯ ದ್ವೀಪದ ಜೀವನಾಡಿಗಳಾಗಿದ್ದು, ನೀರು ನಮ್ಮನ್ನು ಒಗ್ಗೂಡಿಸಬೇಕೇ ಹೊರತು ವಿಭಜಿಸಬಾರದು, ನೀರಿನ ಹಂಚಿಕೆಯ ಸಹಕಾರದಿಂದ ಸಾಗುವ ಸಮಯ ಈಗ ಒದಗಿಬಂದಿದೆ, ಇರುವ ಸಂಪನ್ಮೂಲಗಳಲ್ಲಿ ನ್ಯಾಯಯುತ ಪಾಲು ಪಡೆಯುವುದು ಅತ್ಯಗತ್ಯ ಎಂದು ಪ್ರತಿಪಾದಿಸಿರುವುದು ಮೆಚ್ಚುವಂತಹದ್ದು. ಪ್ರತಿಯೊಂದು ನದಿಪಾತ್ರದ ರಾಜ್ಯಕ್ಕೂ ತನ್ನದೇ ಆದ ನ್ಯಾಯಸಮ್ಮತ ಅಗತ್ಯಗಳಿವೆ ಎಂಬುದನ್ನು ನಾವು ಒಪ್ಪಿಕೊಳ್ಳುತ್ತೇವೆ. ನಮ್ಮ ನಿಲುವು ಸಮಾನತೆ, ಪಾರದರ್ಶಕತೆ, ಸಹಕಾರ ಎನ್ನುವ ಮೂರು ತತ್ವಗಳ ಆಧಾರದ ಮೇಲಿವೆ. ಸಹಕಾರ ಎರಡೂ ದಿಕ್ಕಿನಲ್ಲೂ ಇರಬೇಕು. ನಾವು ನೆರೆ ರಾಜ್ಯಗಳ ಹಕ್ಕುಗಳನ್ನು ಗೌರವಿಸುವಂತೆ ನಮ್ಮ ಹಕ್ಕುಗಳನ್ನೂ ನೆರೆ ರಾಜ್ಯದವರು ಗೌರವಿಸಬೇಕು, ದೇಶದ ಪ್ರಗತಿಗೆ ದಕ್ಷಿಣ ರಾಜ್ಯಗಳ ಕೊಡುಗೆ ಅಪಾರ, ದಕ್ಷಿಣ ಭಾರತಕ್ಕೆ ಸಲ್ಲಬೇಕಾದ ನ್ಯಾಯಯುತ ತೆರಿಗೆ ಪಾಲನ್ನು ನೀಡಿ ಎಂದು ಹೇಳಿ ಹಕ್ಕು ಮಂಡಿಸಿರುವುದು ಪ್ರಶಂಸನೀಯ.

-ಬೆಸಗರಹಳ್ಳಿ ರವಿಪ್ರಸಾದ್, ಮೈಸೂರು

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಚೌಕಾಸಿ…!

ಚೌಕಾಸಿ...! ಸಾಮಾನ್ಯವಾಗಿ ಫುಟ್ಟ್ಪಾತ್ ವ್ಯಾಪಾರದಲ್ಲಿ ನಡೆಯುವುದು ಚೌಕಾಸಿ... ಈಗ, ಫುಟ್ಪಾತ್ನಲ್ಲಿ ಪಾದಚಾರಿ-ವ್ಯಾಪಾರಿಗಳ ನಡುವೆಯೂ ನಡೆಯಬಹುದು ಓಡಾಡುವ ರಸ್ತೆಗಾಗಿ ಚೌಕಾಸಿ !…

56 mins ago

ಓದುಗರ ಪತ್ರ: ವಿಧಾನ ಮಂಡಲ ಅಧಿವೇಶನದ ಉದ್ದೇಶ ಈಡೇರುತ್ತಿದೆಯೇ?

ಕಳೆದ ಒಂದು ವಾರದಿಂದ ನಡೆಯುತ್ತಿರುವ ರಾಜ್ಯ ವಿಧಾನ ಮಂಡಲದ ಮಳೆಗಾಲದ ಅಧಿವೇಶನ, ಡಿ. ಕೆ. ಶಿವಕುಮಾರ್ ಅವರಿಗೆ ಮುಖ್ಯಮಂತ್ರಿಯಾದ ನಂತರ…

58 mins ago

ಓದುಗರ ಪತ್ರ: ಮೌಲ್ಯನಿಷ್ಠ ರಾಜಕಾರಣದ ಕೊಂಡಿಯೊಂದು ಕಳಚಿದಂತೆ

ಮಾಜಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರ ನಿಧನದಿಂದ ಮೌಲ್ಯನಿಷ್ಠ ರಾಜಕಾರಣದ ಒಂದು ಕೊಂಡಿಕಳಚಿದಂತಾಗಿದೆ. ಸರಳ ಹಾಗೂ ಪ್ರಾಮಾಣಿಕ ರಾಜಕಾರಣಿಯಾಗಿದ್ದ ನಾಗೇಶ್…

1 hour ago

ಸಮಾವೇಶದಿಂದ ದಕ್ಷಿಣ ರಾಜ್ಯಗಳ ದನಿಗೆ ಮರುಜೀವ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌ ಅವರ ವಾರದ ಅಂಕಣ  ಹನ್ನೆರಡು ವರ್ಷಗಳ ನಂತರ ನಡೆದ ದಕ್ಷಿಣ ರಾಜ್ಯಗಳ ಎರಡು ದಿನಗಳ…

1 hour ago

ಗೌಜಲಕ್ಕಿ

ಸ್ವಾಮಿ ಪೊನ್ನಾಚಿ ಬೆಟ್ಟದ ಕಿಬ್ಬಿಯನ್ನು ಹತ್ತುತ್ತಾ ‘ಹೋ ಹೋ’ ಎಂದು ಸದ್ದು ಮಾಡಿ ದನಗಳನ್ನು  ಓಡಿಸುತ್ತಾ ಬರುತ್ತಿದ್ದ ಕಾಕಿಗೆ ಬಾಯಿ…

1 hour ago