Andolana originals

ಓದುಗರ ಪತ್ರ: ಭಾರತೀಯ ರಿಸರ್ವ್ ಬ್ಯಾಂಕಿನ ಕ್ರಮ ಸ್ವಾಗತಾರ್ಹ

ಸೈಬರ್ ವಂಚನೆಯ ಸಂತ್ರಸ್ತರಿಗೆ ಗರಿಷ್ಟ ರೂ.೨೫,೦೦೦ ಪರಿಹಾರ ನೀಡುವುದಾಗಿ ಭಾರತದ ರಿಸರ್ವ್ ಬ್ಯಾಂಕ್ ಪ್ರಕಟಿಸಿರುವುದು ಸ್ವಾಗತಾರ್ಹವಾಗಿದೆ. ಆದರೆ, ಅನೇಕ ಸಂದರ್ಭಗಳಲ್ಲಿ ಕಳೆದುಕೊಂಡ ಮೊತ್ತ ಹಲವಾರು ಲಕ್ಷಗಳನ್ನು ಮೀರುತ್ತಿರುವುದರಿಂದ, ಆರ್‌ಬಿಐ ನೀಡುವ ಪರಿಹಾರ ಆನೆ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ ಅನ್ನುವ ಹಾಗಿದೆ. ಆದರೂ ಕೂಡ ಇದೊಂದು ಒಳ್ಳೆಯ ಉಪಕ್ರಮವಾಗಿದ್ದು, ಮುಂದಿನ ದಿನಗಳಲ್ಲಿ ಈ ಪರಿಹಾರದ ಮೊತ್ತ ಹೆಚ್ಚಾಗುವ ಸಾಧ್ಯತೆಯಿದೆ. ದೇಶಾದ್ಯಂತ ಸೈಬರ್ ವಂಚನೆ ದಿನೇ ದಿನೇ ಹೆಚ್ಚುತ್ತಿದೆ. ಅಮಾಯಕರನ್ನು ‘ ಡಿಜಿಟಲ್ ಅರೆಸ್ಟ್’ ಮೂಲಕ ತಮ್ಮ ಬಲೆಗೆ ಕೆಡವಿಕೊಂಡು ಲಕ್ಷಾಂತರ ರೂಪಾಯಿಗಳನ್ನು ಲಪಟಾಯಿಸುವ ವಂಚಕರ ಜಾಲ ಇಡೀ ದೇಶಾದ್ಯಂತ ಹರಡಿರುವುದು ಅತ್ಯಂತ ಕಳವಳಕಾರಿಯಾದ ವಿಚಾರವಾಗಿದೆ. ಇದರ ಬಗ್ಗೆ ದೇಶದ ಸರ್ವೋಚ್ಚ ನ್ಯಾಯಾಲಯ ಕೂಡ ತೀವ್ರ ಕಳವಳ ವ್ಯಕ್ತಪಡಿಸಿ, ಡಿಜಿಟಲ್ ಅರೆಸ್ಟ್ ಪ್ರಕರಣಗಳ ಸಂಬಂಧ ಸಕಾಲಿಕ ಕ್ರಮ ಕೈಗೊಳ್ಳುವಂತೆ ಭಾರತೀಯ ರಿಸರ್ವ್ ಬ್ಯಾಂಕ್ ಮತ್ತು ಇತರ ಬ್ಯಾಂಕುಗಳಿಗೆ ಇತ್ತೀಚೆಗೆ ನಿರ್ದೇಶನ ನೀಡಿದೆ. ಡಿಜಿಟಲ್ ವಂಚನೆಗಳಿಂದ ದೇಶಾದ್ಯಂತ ರೂ. ೫೪ ಸಾವಿರ ಕೋಟಿಗಳಿಗಿಂತ ಅಧಿಕ ಹಣ ದೋಚಿರುವುದನ್ನು ಸಂಪೂರ್ಣ ದರೋಡೆ ಅಥವಾ ಡಕಾಯಿತಿ ಪ್ರಕರಣವೆಂದು ಹೇಳಿರುವ ಸುಪ್ರೀಂ ಕೋರ್ಟ್ ಭವಿಷ್ಯದಲ್ಲಿ ಇಂತಹ ಪ್ರಕರಣಗಳನ್ನು ತಡೆಯಲು ಮಾರ್ಗೋಪಾಯಗಳನ್ನು ಸೂಚಿಸುವಂತೆಸಂಬಂಧಪಟ್ಟವರಿಗೆ ನಿರ್ದೇಶನ ನೀಡಿದೆ. ಈ ಬಗ್ಗೆ ಸಂಬಂಧಪಟ್ಟ ಇಲಾಖೆಗಳು ತುರ್ತು ಕ್ರಮ ತೆಗೆದುಕೊಳ್ಳುವುದು ತೀರಾ ಅಗತ್ಯವಾಗಿದೆ. ಅದೇ ರೀತಿಸಾರ್ವಜನಿಕರು, ಇಂತಹ ಸೈಬರ್ ವಂಚನೆಯ ಬಗ್ಗೆ ಸಾಕಷ್ಟು ಜಾಗೃತರಾಗಿರುವುದು ಅಗತ್ಯ .

 -ಕೆ.ವಿ.ವಾಸು, ವಿವೇಕಾನಂದ ನಗರ, ಮೈಸೂರು

ಆಂದೋಲನ ಡೆಸ್ಕ್

Recent Posts

ಬಯಲುಸೀಮೆಗೆ ಭದ್ರಾ ಜೀವಜಲ : ನವೆಂಬರ್ ಅಂತ್ಯಕ್ಕೆ ಎಲ್ಲ ಕೆರೆಗಳಿಗೂ ನೀರು ; ಸಚಿವ ಚಲುವರಾಯಸ್ವಾಮಿ ಭರವಸೆ*

ಚಿತ್ರದುರ್ಗ : ದಶಕಗಳಿಂದ ಬರಗಾಲದ ಬೇಗೆಯಲ್ಲಿ ಬೆಂದ ಬಯಲುಸೀಮೆಗೆ ಭದ್ರಾ ಮೇಲ್ದಂಡೆ ಯೋಜನೆ ಹೊಸ ಭರವಸೆ ಮೂಡಿಸಿದೆ. ಅರಣ್ಯ ಇಲಾಖೆ…

11 hours ago

ಓದುಗರ ಪತ್ರ: ಕರುನಾಡ ಹೆಮ್ಮೆ…

ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…

19 hours ago

ಓದುಗರ ಪತ್ರ: ಪಾಲಿಕೆ ಯೋಜನೆ ಸ್ವಾಗತಾರ್ಹ

ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…

19 hours ago

ಓದುಗರ ಪತ್ರ: ಯುಪಿಐ ಶುಲ್ಕ: ಚರ್ಚೆಯ ನಂತರ ಕ್ರಮ ಕೈಗೊಳ್ಳಿ

ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…

20 hours ago

ಬದಲಾದ ಜಾಗತಿಕ ಆರ್ಥಿಕ ವ್ಯವಸ್ಥೆಯಲ್ಲಿ ಬ್ರಿಕ್ಸ್ ಪಾತ್ರ

ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…

20 hours ago

ಬಿಹಾರದಲ್ಲಿ ಯುಸಿಸಿಗೆ ನಿತೀಶ್, ಚಿರಾಗ್ ಪಕ್ಷಗಳ ಭಿನ್ನರಾಗ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…

20 hours ago