Andolana originals

ಓದುಗರ ಪತ್ರ: ಭಾರತೀಯ ರಿಸರ್ವ್ ಬ್ಯಾಂಕಿನ ಕ್ರಮ ಸ್ವಾಗತಾರ್ಹ

ಸೈಬರ್ ವಂಚನೆಯ ಸಂತ್ರಸ್ತರಿಗೆ ಗರಿಷ್ಟ ರೂ.೨೫,೦೦೦ ಪರಿಹಾರ ನೀಡುವುದಾಗಿ ಭಾರತದ ರಿಸರ್ವ್ ಬ್ಯಾಂಕ್ ಪ್ರಕಟಿಸಿರುವುದು ಸ್ವಾಗತಾರ್ಹವಾಗಿದೆ. ಆದರೆ, ಅನೇಕ ಸಂದರ್ಭಗಳಲ್ಲಿ ಕಳೆದುಕೊಂಡ ಮೊತ್ತ ಹಲವಾರು ಲಕ್ಷಗಳನ್ನು ಮೀರುತ್ತಿರುವುದರಿಂದ, ಆರ್‌ಬಿಐ ನೀಡುವ ಪರಿಹಾರ ಆನೆ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ ಅನ್ನುವ ಹಾಗಿದೆ. ಆದರೂ ಕೂಡ ಇದೊಂದು ಒಳ್ಳೆಯ ಉಪಕ್ರಮವಾಗಿದ್ದು, ಮುಂದಿನ ದಿನಗಳಲ್ಲಿ ಈ ಪರಿಹಾರದ ಮೊತ್ತ ಹೆಚ್ಚಾಗುವ ಸಾಧ್ಯತೆಯಿದೆ. ದೇಶಾದ್ಯಂತ ಸೈಬರ್ ವಂಚನೆ ದಿನೇ ದಿನೇ ಹೆಚ್ಚುತ್ತಿದೆ. ಅಮಾಯಕರನ್ನು ‘ ಡಿಜಿಟಲ್ ಅರೆಸ್ಟ್’ ಮೂಲಕ ತಮ್ಮ ಬಲೆಗೆ ಕೆಡವಿಕೊಂಡು ಲಕ್ಷಾಂತರ ರೂಪಾಯಿಗಳನ್ನು ಲಪಟಾಯಿಸುವ ವಂಚಕರ ಜಾಲ ಇಡೀ ದೇಶಾದ್ಯಂತ ಹರಡಿರುವುದು ಅತ್ಯಂತ ಕಳವಳಕಾರಿಯಾದ ವಿಚಾರವಾಗಿದೆ. ಇದರ ಬಗ್ಗೆ ದೇಶದ ಸರ್ವೋಚ್ಚ ನ್ಯಾಯಾಲಯ ಕೂಡ ತೀವ್ರ ಕಳವಳ ವ್ಯಕ್ತಪಡಿಸಿ, ಡಿಜಿಟಲ್ ಅರೆಸ್ಟ್ ಪ್ರಕರಣಗಳ ಸಂಬಂಧ ಸಕಾಲಿಕ ಕ್ರಮ ಕೈಗೊಳ್ಳುವಂತೆ ಭಾರತೀಯ ರಿಸರ್ವ್ ಬ್ಯಾಂಕ್ ಮತ್ತು ಇತರ ಬ್ಯಾಂಕುಗಳಿಗೆ ಇತ್ತೀಚೆಗೆ ನಿರ್ದೇಶನ ನೀಡಿದೆ. ಡಿಜಿಟಲ್ ವಂಚನೆಗಳಿಂದ ದೇಶಾದ್ಯಂತ ರೂ. ೫೪ ಸಾವಿರ ಕೋಟಿಗಳಿಗಿಂತ ಅಧಿಕ ಹಣ ದೋಚಿರುವುದನ್ನು ಸಂಪೂರ್ಣ ದರೋಡೆ ಅಥವಾ ಡಕಾಯಿತಿ ಪ್ರಕರಣವೆಂದು ಹೇಳಿರುವ ಸುಪ್ರೀಂ ಕೋರ್ಟ್ ಭವಿಷ್ಯದಲ್ಲಿ ಇಂತಹ ಪ್ರಕರಣಗಳನ್ನು ತಡೆಯಲು ಮಾರ್ಗೋಪಾಯಗಳನ್ನು ಸೂಚಿಸುವಂತೆಸಂಬಂಧಪಟ್ಟವರಿಗೆ ನಿರ್ದೇಶನ ನೀಡಿದೆ. ಈ ಬಗ್ಗೆ ಸಂಬಂಧಪಟ್ಟ ಇಲಾಖೆಗಳು ತುರ್ತು ಕ್ರಮ ತೆಗೆದುಕೊಳ್ಳುವುದು ತೀರಾ ಅಗತ್ಯವಾಗಿದೆ. ಅದೇ ರೀತಿಸಾರ್ವಜನಿಕರು, ಇಂತಹ ಸೈಬರ್ ವಂಚನೆಯ ಬಗ್ಗೆ ಸಾಕಷ್ಟು ಜಾಗೃತರಾಗಿರುವುದು ಅಗತ್ಯ .

 -ಕೆ.ವಿ.ವಾಸು, ವಿವೇಕಾನಂದ ನಗರ, ಮೈಸೂರು

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಅನುಮಾನ ಬಗೆಹರಿಸಿ

ರಾಜ್ಯದ ಬಹಳಷ್ಟು ಜನರು ಆನ್‌ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…

11 hours ago

ಓದುಗರ ಪತ್ರ: ಕನ್ನಡ ಒಗ್ಗಟ್ಟು

ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…

11 hours ago

ಓದುಗರ ಪತ್ರ: ರಾಜಕಾರಣದ ಸರಕು!

ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…

11 hours ago

ಓದುಗರ ಪತ್ರ: ಅಕ್ಕಿ ದರ ಏರಿಕೆಗೆ ಕಡಿವಾಣ ಅಗತ್ಯ

ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…

11 hours ago

ಸತ್ಯದ ಪ್ರತಿಪಾದಕರು ಮಾತ್ರ ಆದರ್ಶ ಆಗಬಲ್ಲರು

ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…

11 hours ago

300 ಮಕ್ಕಳ ಶಿಕ್ಷಣಕ್ಕೆ ಶೇ.96ರಷ್ಟು ಸಂಪತ್ತನ್ನು ದಾನ ಮಾಡಿದ ಟೆಕ್ಕಿ

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ  ಛತ್ತೀಸ್‌ಘಡದ ಭಿಲಾಯ್‌ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…

11 hours ago