Andolana originals

ಓದುಗರ ಪತ್ರ: ಭಾರತೀಯ ರಿಸರ್ವ್ ಬ್ಯಾಂಕಿನ ಕ್ರಮ ಸ್ವಾಗತಾರ್ಹ

ಸೈಬರ್ ವಂಚನೆಯ ಸಂತ್ರಸ್ತರಿಗೆ ಗರಿಷ್ಟ ರೂ.೨೫,೦೦೦ ಪರಿಹಾರ ನೀಡುವುದಾಗಿ ಭಾರತದ ರಿಸರ್ವ್ ಬ್ಯಾಂಕ್ ಪ್ರಕಟಿಸಿರುವುದು ಸ್ವಾಗತಾರ್ಹವಾಗಿದೆ. ಆದರೆ, ಅನೇಕ ಸಂದರ್ಭಗಳಲ್ಲಿ ಕಳೆದುಕೊಂಡ ಮೊತ್ತ ಹಲವಾರು ಲಕ್ಷಗಳನ್ನು ಮೀರುತ್ತಿರುವುದರಿಂದ, ಆರ್‌ಬಿಐ ನೀಡುವ ಪರಿಹಾರ ಆನೆ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ ಅನ್ನುವ ಹಾಗಿದೆ. ಆದರೂ ಕೂಡ ಇದೊಂದು ಒಳ್ಳೆಯ ಉಪಕ್ರಮವಾಗಿದ್ದು, ಮುಂದಿನ ದಿನಗಳಲ್ಲಿ ಈ ಪರಿಹಾರದ ಮೊತ್ತ ಹೆಚ್ಚಾಗುವ ಸಾಧ್ಯತೆಯಿದೆ. ದೇಶಾದ್ಯಂತ ಸೈಬರ್ ವಂಚನೆ ದಿನೇ ದಿನೇ ಹೆಚ್ಚುತ್ತಿದೆ. ಅಮಾಯಕರನ್ನು ‘ ಡಿಜಿಟಲ್ ಅರೆಸ್ಟ್’ ಮೂಲಕ ತಮ್ಮ ಬಲೆಗೆ ಕೆಡವಿಕೊಂಡು ಲಕ್ಷಾಂತರ ರೂಪಾಯಿಗಳನ್ನು ಲಪಟಾಯಿಸುವ ವಂಚಕರ ಜಾಲ ಇಡೀ ದೇಶಾದ್ಯಂತ ಹರಡಿರುವುದು ಅತ್ಯಂತ ಕಳವಳಕಾರಿಯಾದ ವಿಚಾರವಾಗಿದೆ. ಇದರ ಬಗ್ಗೆ ದೇಶದ ಸರ್ವೋಚ್ಚ ನ್ಯಾಯಾಲಯ ಕೂಡ ತೀವ್ರ ಕಳವಳ ವ್ಯಕ್ತಪಡಿಸಿ, ಡಿಜಿಟಲ್ ಅರೆಸ್ಟ್ ಪ್ರಕರಣಗಳ ಸಂಬಂಧ ಸಕಾಲಿಕ ಕ್ರಮ ಕೈಗೊಳ್ಳುವಂತೆ ಭಾರತೀಯ ರಿಸರ್ವ್ ಬ್ಯಾಂಕ್ ಮತ್ತು ಇತರ ಬ್ಯಾಂಕುಗಳಿಗೆ ಇತ್ತೀಚೆಗೆ ನಿರ್ದೇಶನ ನೀಡಿದೆ. ಡಿಜಿಟಲ್ ವಂಚನೆಗಳಿಂದ ದೇಶಾದ್ಯಂತ ರೂ. ೫೪ ಸಾವಿರ ಕೋಟಿಗಳಿಗಿಂತ ಅಧಿಕ ಹಣ ದೋಚಿರುವುದನ್ನು ಸಂಪೂರ್ಣ ದರೋಡೆ ಅಥವಾ ಡಕಾಯಿತಿ ಪ್ರಕರಣವೆಂದು ಹೇಳಿರುವ ಸುಪ್ರೀಂ ಕೋರ್ಟ್ ಭವಿಷ್ಯದಲ್ಲಿ ಇಂತಹ ಪ್ರಕರಣಗಳನ್ನು ತಡೆಯಲು ಮಾರ್ಗೋಪಾಯಗಳನ್ನು ಸೂಚಿಸುವಂತೆಸಂಬಂಧಪಟ್ಟವರಿಗೆ ನಿರ್ದೇಶನ ನೀಡಿದೆ. ಈ ಬಗ್ಗೆ ಸಂಬಂಧಪಟ್ಟ ಇಲಾಖೆಗಳು ತುರ್ತು ಕ್ರಮ ತೆಗೆದುಕೊಳ್ಳುವುದು ತೀರಾ ಅಗತ್ಯವಾಗಿದೆ. ಅದೇ ರೀತಿಸಾರ್ವಜನಿಕರು, ಇಂತಹ ಸೈಬರ್ ವಂಚನೆಯ ಬಗ್ಗೆ ಸಾಕಷ್ಟು ಜಾಗೃತರಾಗಿರುವುದು ಅಗತ್ಯ .

 -ಕೆ.ವಿ.ವಾಸು, ವಿವೇಕಾನಂದ ನಗರ, ಮೈಸೂರು

ಆಂದೋಲನ ಡೆಸ್ಕ್

Recent Posts

ಮೈಸೂರು ʼಜಯದೇವʼಕ್ಕೆ ಹೃದಯ ಬಿರಿಯುವಷ್ಟು ಒತ್ತಡ

ಮೈಸೂರು: ದಶಕಗಳ ಹಿಂದೆ ಖಾಸಗಿ ಆಸ್ಪತ್ರೆಗಳಲ್ಲಿ ಹೃದಯ ಸಂಬಂಧಿ ಕಾಯಿಲೆಗಳಿಗೆ ದುಬಾರಿ ವೆಚ್ಚದ ಚಿಕಿತ್ಸೆ ಪಡೆಯುವುದನ್ನು ತಗ್ಗಿಸುವ ಜತೆಗೆ ಬೆಂಗಳೂರಿನ…

4 mins ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ : ಚಿತ್ರೋದ್ಯಮವೂ ಪೈರಸಿ ಎಂಬ ಪೆಡಂಬೂತವೂ

ನಾಳಿದ್ದು 21ರಂದು ನಡೆಯುವ ನೀಟ್ ಪರೀಕ್ಷೆಯ ಹಿನ್ನೆಲೆಯಲ್ಲಿ ಟೆಲಿಗ್ರಾಂ ಆಪ್‌ಅನ್ನು ಜೂ. 27ರ ವರೆಗೆ ತಾತ್ಕಾಲಿಕವಾಗಿ ಕೇಂದ್ರ ಸರ್ಕಾರ ಬ್ಯಾನ್…

22 mins ago

ಮೀಸಲಾತಿ ಸಾಂವಿಧಾನಿಕ ಹಕ್ಕು ; ಸಮಾನತೆಯ ಮೆಟ್ಟಿಲು

ಮೀಸಲಾತಿ ಸೌಲಭ್ಯ ಇದ್ದರೂ ಕಠಿಣ ಪರೀಕ್ಷೆ ಪಾಸ್ ಮಾಡಲೇಬೇಕು ಟಿ.ಕೆ. ಹರೀಶ್ ಐತಿಹಾಸಿಕವಾಗಿ ಮತ್ತು ಸಾಮಾಜಿಕವಾಗಿ ಶೋಷಣೆಗೊಳಗಾಗಿ, ಶಿಕ್ಷಣ ಹಾಗೂ…

40 mins ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 19  ಶುಕ್ರವಾರ  

49 mins ago

ಮುಂಗಾರು ಮತ್ತೆ ಚುರುಕು ; ಮೈಸೂರು, ಮಂಡ್ಯ, ಕೊಡಗಿನಲ್ಲಿ ಮಳೆ ಸಾಧ್ಯತೆ

ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದ್ದು, ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ…

10 hours ago

ಪರಿಷತ್‌ ಚುನಾವಣೆ : ಕಾಂಗ್ರೆಸ್‌ನ ಐವರು, ಬಿಜೆಪಿಯ ಇಬ್ಬರ ಗೆಲುವು,

ಬೆಂಗಳೂರು : ಭಾರಿ ಕುತೂಹಲ ಮೂಡಿಸಿದ್ದ ವಿಧಾನ ಪರಿಷತ್​​ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು, ಕಾಂಗ್ರೆಸ್​​ನ ಐವರು ಮತ್ತು ಬಿಜೆಪಿಯ ಎರಡು…

12 hours ago