ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳು ಸೃಜನಶೀಲತೆಯ ವೇದಿಕೆಗಳಾಗುವ ಬದಲು ಹಣದಾಸೆಗಾಗಿ ಅಶ್ಲೀಲತೆಯನ್ನು ಪ್ರದರ್ಶಿಸುವ ಮಾರುಕಟ್ಟೆಗಳಾಗುತ್ತಿರುವುದು ಆತಂಕಕಾರಿ ವಿದ್ಯಮಾನ. ಪ್ರಭಾವಿ ವ್ಯಕ್ತಿಗಳು ಮತ್ತು ಸೆಲೆಬ್ರಿಟಿಗಳು ೩೯೯ ರೂ. ಚಂದಾದಾರಿಕೆ ಹೆಸರಿನಲ್ಲಿ ಅರೆನಗ್ನ ಚಿತ್ರ ಹಾಗೂ ವಿಡಿಯೊಗಳನ್ನು ಹಂಚಿಕೊಳ್ಳುತ್ತಿರುವುದು ಯುವ ಪೀಳಿಗೆಯ ಮೇಲೆ ತೀವ್ರ ಕೆಟ್ಟ ಪರಿಣಾಮ ಬೀರುತ್ತಿದೆ. ಕೇವಲ ಆರ್ಥಿಕ ಲಾಭಕ್ಕಾಗಿ ನೈತಿಕತೆಯ ಗಡಿ ಮೀರುವುದು ಅಭಿವ್ಯಕ್ತಿ ಸ್ವಾತಂತ್ರ್ಯವಲ್ಲ.
ಅದು ಸಾಂಸ್ಕ ತಿಕ ಅವನತಿ. ವಿಪರ್ಯಾಸವೆಂದರೆ ಇಂತಹ ವಿವಾದಗಳು ಸಾರ್ವಜನಿಕವಾಗಿ ಚರ್ಚೆಯಾದಾಗ ಅವರ ಫಾಲೋವರ್ಗಳ ಸಂಖ್ಯೆ ಹೆಚ್ಚಾಗುತ್ತಿದೆ. ಇದು ಸಮಾಜದ ಮೌಲ್ಯಚ್ಯುತಿಯನ್ನು ಎತ್ತಿ ತೋರಿಸುತ್ತದೆ. ತಂತ್ರಜ್ಞಾನವು ಪ್ರಗತಿಗೆ ಪೂರಕವಾಗಿರಬೇಕೇ ಹೊರತು ವಿಕೃತಿಗೆ ರಹದಾರಿಯಾಗಬಾರದು. ಸೈಬರ್ ಕಾನೂನುಗಳು ಕೇವಲ ದೂರು ದಾಖಲಿಸುವುದಕ್ಕೆ ಸೀಮಿತವಾಗದೆ ಇಂತಹ ಅಸಭ್ಯತೆಯ ವ್ಯಾಪಾರಕ್ಕೆ ಕಟ್ಟುನಿಟ್ಟಿನ ಕಡಿವಾಣ ಹಾಕಬೇಕಿದೆ. ಡಿಜಿಟಲ್ ವೇದಿಕೆಗಳಲ್ಲಿ ಘನತೆ ಮತ್ತು ಸಂಸ್ಕಾರವನ್ನು ಉಳಿಸಿಕೊಳ್ಳುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದೆ. ನೈತಿಕತೆಯನ್ನು ಬಲಿಕೊಟ್ಟು ಪಡೆಯುವ ಜನಪ್ರಿಯತೆ ತಾತ್ಕಾಲಿಕ ಎಂಬ ಅರಿವು ಎಲ್ಲರಲ್ಲಿ ಮೂಡಲಿ.
-ಡಾ. ಎಚ್.ಕೆ.ವಿಜಯಕುಮಾರ, ಬೆಂಗಳೂರು
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…