ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳು ಸೃಜನಶೀಲತೆಯ ವೇದಿಕೆಗಳಾಗುವ ಬದಲು ಹಣದಾಸೆಗಾಗಿ ಅಶ್ಲೀಲತೆಯನ್ನು ಪ್ರದರ್ಶಿಸುವ ಮಾರುಕಟ್ಟೆಗಳಾಗುತ್ತಿರುವುದು ಆತಂಕಕಾರಿ ವಿದ್ಯಮಾನ. ಪ್ರಭಾವಿ ವ್ಯಕ್ತಿಗಳು ಮತ್ತು ಸೆಲೆಬ್ರಿಟಿಗಳು ೩೯೯ ರೂ. ಚಂದಾದಾರಿಕೆ ಹೆಸರಿನಲ್ಲಿ ಅರೆನಗ್ನ ಚಿತ್ರ ಹಾಗೂ ವಿಡಿಯೊಗಳನ್ನು ಹಂಚಿಕೊಳ್ಳುತ್ತಿರುವುದು ಯುವ ಪೀಳಿಗೆಯ ಮೇಲೆ ತೀವ್ರ ಕೆಟ್ಟ ಪರಿಣಾಮ ಬೀರುತ್ತಿದೆ. ಕೇವಲ ಆರ್ಥಿಕ ಲಾಭಕ್ಕಾಗಿ ನೈತಿಕತೆಯ ಗಡಿ ಮೀರುವುದು ಅಭಿವ್ಯಕ್ತಿ ಸ್ವಾತಂತ್ರ್ಯವಲ್ಲ.
ಅದು ಸಾಂಸ್ಕ ತಿಕ ಅವನತಿ. ವಿಪರ್ಯಾಸವೆಂದರೆ ಇಂತಹ ವಿವಾದಗಳು ಸಾರ್ವಜನಿಕವಾಗಿ ಚರ್ಚೆಯಾದಾಗ ಅವರ ಫಾಲೋವರ್ಗಳ ಸಂಖ್ಯೆ ಹೆಚ್ಚಾಗುತ್ತಿದೆ. ಇದು ಸಮಾಜದ ಮೌಲ್ಯಚ್ಯುತಿಯನ್ನು ಎತ್ತಿ ತೋರಿಸುತ್ತದೆ. ತಂತ್ರಜ್ಞಾನವು ಪ್ರಗತಿಗೆ ಪೂರಕವಾಗಿರಬೇಕೇ ಹೊರತು ವಿಕೃತಿಗೆ ರಹದಾರಿಯಾಗಬಾರದು. ಸೈಬರ್ ಕಾನೂನುಗಳು ಕೇವಲ ದೂರು ದಾಖಲಿಸುವುದಕ್ಕೆ ಸೀಮಿತವಾಗದೆ ಇಂತಹ ಅಸಭ್ಯತೆಯ ವ್ಯಾಪಾರಕ್ಕೆ ಕಟ್ಟುನಿಟ್ಟಿನ ಕಡಿವಾಣ ಹಾಕಬೇಕಿದೆ. ಡಿಜಿಟಲ್ ವೇದಿಕೆಗಳಲ್ಲಿ ಘನತೆ ಮತ್ತು ಸಂಸ್ಕಾರವನ್ನು ಉಳಿಸಿಕೊಳ್ಳುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದೆ. ನೈತಿಕತೆಯನ್ನು ಬಲಿಕೊಟ್ಟು ಪಡೆಯುವ ಜನಪ್ರಿಯತೆ ತಾತ್ಕಾಲಿಕ ಎಂಬ ಅರಿವು ಎಲ್ಲರಲ್ಲಿ ಮೂಡಲಿ.
-ಡಾ. ಎಚ್.ಕೆ.ವಿಜಯಕುಮಾರ, ಬೆಂಗಳೂರು
ಮಂಡ್ಯ : ಚಾಲಕನ ನಿಯಂತ್ರಣ ತಪ್ಪಿದ ಗೂಡ್ಸ್ ಆಟೋ (ಟಾಟಾ ಏಸ್) ರಸ್ತೆ ಬದಿಗೆ ಉರುಳಿಬಿದ್ದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟು,…
ಹಾಸನ: ಮಗನನ್ನು ಶಾಲೆಗೆ ಸೇರಿಸಲಯ ಪತ್ರಕ್ಕಾಗಿ ಆಟೋದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಾಲಕನ ಅತಿಬೇಗ ಮತ್ತು ನಿರ್ಲಕ್ಷ್ಯದಿಂದ ಪಲ್ಟಿಯಾದ ಪರಿಣಾಮ ಅಮ್ಮ…
ಮೈಸೂರು: ನಾಡ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಬಾಲಿವುಡ್ ನಟ ರಣವೀರ್ ಸಿಂಗ್ ಭೇಟಿ ನೀಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಚಾಮುಂಡಿಬೆಟ್ಟದ…
ಬೆಂಗಳೂರು: ಇಂದು ಕೃಷಿ ಕ್ಷೇತ್ರ ಅನೇಕ ಸವಾಲುಗಳನ್ನು ಎದುರಿಸುತ್ತಿದೆ. ಹವಾಮಾನ ವೈಪರೀತ್ಯ, ಉತ್ಪಾದನಾ ವೆಚ್ಚದ ಏರಿಕೆ, ಮಾರುಕಟ್ಟೆ ಅಸ್ಥಿರತೆ ಮತ್ತು…
ಬೆಂಗಳೂರು: ಸಿಎಂ ಬದಲಾವಣೆ ಆದರೆ ಪರಮೇಶ್ವರ್ ಮುಖ್ಯಮಂತ್ರಿಯಾಗಲಿ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಇಂದು…
ಮೈಸೂರು: ರಸಗೊಬ್ಬರ ಖರೀದಿಗೆ ಎಫ್ಐಡಿ ಕಡ್ಡಾಯ ಮಾಡಿರುವುದನ್ನು ವಿರೋಧಿಸಿ ರೈತ ಮುಖಂಡರು ಪ್ರತಿಭಟನೆ ನಡೆಸಿದರು. ಮೈಸೂರಿನ ಕಾಡಾ ಕಛೇರಿ ಆವರಣದಲ್ಲಿರುವ…