ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳು ಸೃಜನಶೀಲತೆಯ ವೇದಿಕೆಗಳಾಗುವ ಬದಲು ಹಣದಾಸೆಗಾಗಿ ಅಶ್ಲೀಲತೆಯನ್ನು ಪ್ರದರ್ಶಿಸುವ ಮಾರುಕಟ್ಟೆಗಳಾಗುತ್ತಿರುವುದು ಆತಂಕಕಾರಿ ವಿದ್ಯಮಾನ. ಪ್ರಭಾವಿ ವ್ಯಕ್ತಿಗಳು ಮತ್ತು ಸೆಲೆಬ್ರಿಟಿಗಳು ೩೯೯ ರೂ. ಚಂದಾದಾರಿಕೆ ಹೆಸರಿನಲ್ಲಿ ಅರೆನಗ್ನ ಚಿತ್ರ ಹಾಗೂ ವಿಡಿಯೊಗಳನ್ನು ಹಂಚಿಕೊಳ್ಳುತ್ತಿರುವುದು ಯುವ ಪೀಳಿಗೆಯ ಮೇಲೆ ತೀವ್ರ ಕೆಟ್ಟ ಪರಿಣಾಮ ಬೀರುತ್ತಿದೆ. ಕೇವಲ ಆರ್ಥಿಕ ಲಾಭಕ್ಕಾಗಿ ನೈತಿಕತೆಯ ಗಡಿ ಮೀರುವುದು ಅಭಿವ್ಯಕ್ತಿ ಸ್ವಾತಂತ್ರ್ಯವಲ್ಲ.
ಅದು ಸಾಂಸ್ಕ ತಿಕ ಅವನತಿ. ವಿಪರ್ಯಾಸವೆಂದರೆ ಇಂತಹ ವಿವಾದಗಳು ಸಾರ್ವಜನಿಕವಾಗಿ ಚರ್ಚೆಯಾದಾಗ ಅವರ ಫಾಲೋವರ್ಗಳ ಸಂಖ್ಯೆ ಹೆಚ್ಚಾಗುತ್ತಿದೆ. ಇದು ಸಮಾಜದ ಮೌಲ್ಯಚ್ಯುತಿಯನ್ನು ಎತ್ತಿ ತೋರಿಸುತ್ತದೆ. ತಂತ್ರಜ್ಞಾನವು ಪ್ರಗತಿಗೆ ಪೂರಕವಾಗಿರಬೇಕೇ ಹೊರತು ವಿಕೃತಿಗೆ ರಹದಾರಿಯಾಗಬಾರದು. ಸೈಬರ್ ಕಾನೂನುಗಳು ಕೇವಲ ದೂರು ದಾಖಲಿಸುವುದಕ್ಕೆ ಸೀಮಿತವಾಗದೆ ಇಂತಹ ಅಸಭ್ಯತೆಯ ವ್ಯಾಪಾರಕ್ಕೆ ಕಟ್ಟುನಿಟ್ಟಿನ ಕಡಿವಾಣ ಹಾಕಬೇಕಿದೆ. ಡಿಜಿಟಲ್ ವೇದಿಕೆಗಳಲ್ಲಿ ಘನತೆ ಮತ್ತು ಸಂಸ್ಕಾರವನ್ನು ಉಳಿಸಿಕೊಳ್ಳುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದೆ. ನೈತಿಕತೆಯನ್ನು ಬಲಿಕೊಟ್ಟು ಪಡೆಯುವ ಜನಪ್ರಿಯತೆ ತಾತ್ಕಾಲಿಕ ಎಂಬ ಅರಿವು ಎಲ್ಲರಲ್ಲಿ ಮೂಡಲಿ.
-ಡಾ. ಎಚ್.ಕೆ.ವಿಜಯಕುಮಾರ, ಬೆಂಗಳೂರು
ಮೈಸೂರು : ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪಿ.ಎಚ್.ಡಿ ಪ್ರವೇಶಾತಿ ಪಡೆದ ಸಂಶೋಧಕರುಗಳಿಗೆ ಶಿಷ್ಯ ವೇತನ ನೀಡುವಂತೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ…
ಚಾಮರಾಜನಗರ: ತಾಲ್ಲೂಕಿನ ಬಾಗಳಿ ಗ್ರಾಮದ ಜಮೀನೊಂದರಲ್ಲಿ ಹುಲಿ ಪ್ರತ್ಯಕ್ಷಗೊಂಡಿದ್ದು ರೈತರಲ್ಲಿ ಆತಂಕ ಮೂಡಿಸಿದೆ. ಗ್ರಾಮದ ಪುಟ್ಟಯ್ಯ ಎಂಬವರು ಸೋಮವಾರ ಬೆಳಿಗ್ಗೆ…
ವಾಷಿಂಗ್ಟನ್ : ಅಮೆರಿಕ-ಇರಾನ್ ಸಂಸಂಘರ್ಷವನ್ನು ಕೊನೆಗೊಳಿಸಲು ಮತ್ತು ಹಾರ್ಮುಜ್ ಜಲಸಂಧಿಯ ಮೂಲಕ ಸಾಗಣೆಯನ್ನು ಪುನಃಸ್ಥಾಪಿಸಲು ಪ್ರಾಥಮಿಕ ಒಪ್ಪಂದಕ್ಕೆ ಬಂದಿರುವುದಾಗಿ ಡೊನಾಲ್ಡ್…
ಬೆಂಗಳೂರು : ಆರ್ಎಸ್ಎಸ್ನ ಸಾಂಸ್ಥಿಕ ಮತ್ತು ಕಾನೂನುಬದ್ಧ ಸ್ಥಿತಿಗತಿ ಕುರಿತು ಸ್ಪಷ್ಟನೆ ನೀಡುವಂತೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು…
ಮೈಸೂರು : ಪಬ್ನಲ್ಲಿ ಅಗ್ನಿ ಅವಘಡ ಸಂಭವಿಸಿ ಇಬ್ಬರು ಸಜೀವ ದಹನವಾಗಿರುವ ಘಟನೆ ನಗರದ ದಟ್ಟಗಳ್ಳಿಯಲ್ಲಿ ನಡೆದಿದೆ. ನಗರದ ರಿಂಗ್…
ಬೆಂಗಳೂರು: ಕರ್ನಾಟಕದವರಿಗೆ, ವೋಟ್ ಇದ್ದವರಿಗೆ ಮಾತ್ರ ನಾವು ಗ್ಯಾರಂಟಿ ಕೊಡುತ್ತೇವೆ ಎಂದು ಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ…