ಓದುಗರ ಪತ್ರ
‘ನದಿ ಜೋಡಣೆ’ ಯೋಜನೆಗೆ ಸಾಕಷ್ಟು ವಿರೋಧಗಳು ಕೇಳಿಬರುತ್ತಿದ್ದರೂ ಯಾವುದನ್ನೂ ಲೆಕ್ಕಿಸದೆ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಈ ಯೋಜನೆಯನ್ನು ಮುಂದುವರಿಸುತ್ತಿರುವುದು ಸಮಂಜಸವಲ್ಲ.
ಈ ಹಿಂದೆಯೂ ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಗೋದಾವರಿನದಿ ನೀರು ಪೂರೈಸುವುದಾಗಿ ಹೇಳಿ ಕಡಿಮೆ ಪ್ರಮಾಣದ ನೀರನ್ನು ಹಂಚಿಕೆ ಮಾಡಿತ್ತು. ನೀರು ಹಂಚಿಕೆ ವಿಚಾರದಲ್ಲಿ ಆಗಿರುವ ಈ ಅನ್ಯಾಯವನ್ನು ಗಮನದಲ್ಲಿಟ್ಟುಕೊಂಡು ರಾಜ್ಯ ಸರ್ಕಾರ ಕೇಂದ್ರ ಸರ್ಕಾರದ ನದಿ ಜೋಡಣೆ ಯೋಜನೆಗೆ ಸಹಿ ಹಾಕಲು ನಿರಾಕರಿಸಿದೆ. ಕರ್ನಾಟಕ ಮಾತ್ರವಲ್ಲದೆ ದಕ್ಷಿಣ ರಾಜ್ಯಗಳೂ ಈ ಯೋಜನೆಯ ನಿಲುವು ಸರಿಯಾಗಿಲ್ಲ ಎಂದು ಸಹಿ ಹಾಕಲು ಒಪ್ಪಿಲ್ಲ. ಹೀಗೆ ಕೆಲವು ರಾಜ್ಯಗಳ ಅನುಮತಿ ಇಲ್ಲದೆಯೂ ಕೇಂದ್ರ ಸರ್ಕಾರವು ಯೋಜನೆಯನ್ನು ಜಾರಿಗೆ ತರುತ್ತಿರುವುದು ಸರಿಯಲ್ಲ. ಅಲ್ಲದೆ ಈ ಯೋಜನೆ ಪ್ರಕೃತಿಗೆ ವಿರುದ್ಧವಾಗಿದೆ. ಅವೈಜ್ಞಾನಿಕವಾಗಿ ನದಿಗಳನ್ನು ಜೋಡಿಸುವುದರಿಂದ ಅಪಾರ ಪ್ರಮಾಣದಲ್ಲಿ ಅರಣ್ಯ ನಾಶವಾಗಲಿದೆ. ಇಷ್ಟಿದ್ದರೂ ಪ್ರಧಾನಿ ನರೇಂದ್ರ ಮೋದಿಯವರು ಮಧ್ಯಪ್ರದೇಶದ ಕೆನ್ ಮತ್ತು ಬೇತ್ವಾ ನದಿಗಳ ಜೋಡಣೆಯನ್ನು ಕಾರ್ಯರೂಪಕ್ಕೆ ತರುತ್ತಿದ್ದಾರೆ. ಈ ಯೋಜನೆಯನ್ನು ಕೂಡಲೇ ನಿಲ್ಲಿಸಿ ನದಿಗಳ ಸ್ವಚ್ಛತೆ ಕಾಪಾಡುವತ್ತ ಸರ್ಕಾರ ಗಮನಹರಿಸಲಿ.
-ಜಿ.ಬಿನಿತಾ, ಕಲಬುರಗಿ.
ಮಂಡ್ಯ : ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ-275 ವಾಹನಗಳ ಸಂಚಾರಕ್ಕೆ ಮುಕ್ತವಾದ ದಿನದಿಂದ ಈವರೆಗೆ 855.79 ಕೋಟಿ ರೂ. ಟೋಲ್ ಶುಲ್ಕ…
ಮಂಡ್ಯ : ಸಾಮಾಜಿಕ ಬಹಿಷ್ಕಾರ ನಿಷೇಧ ವಿಧೇಯಕದಡಿ ಶಿಕ್ಷೆ ಪ್ರಮಾಣ 7 ವರ್ಷಕ್ಕೆ ಹೆಚ್ಚಿಸಬೇಕು. ಎಸ್ಸಿ, ಎಸ್ಟಿ ಸಮುದಾಯ ಪ್ರತಿ…
ಮೈಸೂರು : ಪತ್ನಿಯ ವರ್ತನೆಯಿಂದ ಬೇಸತ್ತಿದ್ದ ಪತಿ ಆಕೆಯನ್ನು ಹತ್ಯೆ ಮಾಡಲು ಯುವಕರಿಬ್ಬರಿಗೆ ಸುಫಾರಿ ನೀಡಿರುವ ಅಘಾತಕಾರಿ ಘಟನೆ ಬೆಳಕಿಗೆ…
ಹುಣಸೂರು : ತಾಲ್ಲೂಕಿನ ಗುರುಪುರ ಹುಣಸೇಕಟ್ಟೆ ಬಳಿಯ ಟಿಬೆಟ್ ಕ್ಯಾಂಪ್ನ ಬಿ.ವಿಲೇಜ್ನ ಜಮೀನಿನಲ್ಲಿ ಹುಲಿಯೊಂದು ಹಸುವನ್ನು ಕೊಂದು ಹಾಕಿದೆ. ಟಿಬೆಟ್…
ಬೆಂಗಳೂರು : 2027ರ ಹೊಸ ವರ್ಷಾಚರಣೆಯ ಸಂಭ್ರಮಕ್ಕೆ ದಿನಗಣನೆ ಶುರುವಾಗಿರುವ ಬೆನ್ನಲ್ಲೇ ಬೆಂಗಳೂರು ಪೊಲೀಸರು ಹೊಸ ಮಾರ್ಗಸೂಚಿ ಪ್ರಕಟಿಸಿದ್ದಾರೆ. ಗೋವಾದ…
ಬೆಳಗಾವಿ : ರಾಜ್ಯದಲ್ಲಿರುವ ಬುದ್ಧವಿಹಾರಗಳಲ್ಲಿ ಸೇವೆ ಸಲ್ಲಿಸುತ್ತಿರುವ ಬೌದ್ಧ ಬಿಕ್ಕುಗಳಿಗೆ ಮಾಸಿಕ ಸಂಭಾವನೆಯನ್ನು ಶೀಘ್ರದಲ್ಲಿ ನೀಡುವಂತೆ ಕ್ರಮ ಕೈಗೊಳ್ಳಲಾಗುವುದು ಎಂದು…