ಓದುಗರ ಪತ್ರ
‘ನದಿ ಜೋಡಣೆ’ ಯೋಜನೆಗೆ ಸಾಕಷ್ಟು ವಿರೋಧಗಳು ಕೇಳಿಬರುತ್ತಿದ್ದರೂ ಯಾವುದನ್ನೂ ಲೆಕ್ಕಿಸದೆ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಈ ಯೋಜನೆಯನ್ನು ಮುಂದುವರಿಸುತ್ತಿರುವುದು ಸಮಂಜಸವಲ್ಲ.
ಈ ಹಿಂದೆಯೂ ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಗೋದಾವರಿನದಿ ನೀರು ಪೂರೈಸುವುದಾಗಿ ಹೇಳಿ ಕಡಿಮೆ ಪ್ರಮಾಣದ ನೀರನ್ನು ಹಂಚಿಕೆ ಮಾಡಿತ್ತು. ನೀರು ಹಂಚಿಕೆ ವಿಚಾರದಲ್ಲಿ ಆಗಿರುವ ಈ ಅನ್ಯಾಯವನ್ನು ಗಮನದಲ್ಲಿಟ್ಟುಕೊಂಡು ರಾಜ್ಯ ಸರ್ಕಾರ ಕೇಂದ್ರ ಸರ್ಕಾರದ ನದಿ ಜೋಡಣೆ ಯೋಜನೆಗೆ ಸಹಿ ಹಾಕಲು ನಿರಾಕರಿಸಿದೆ. ಕರ್ನಾಟಕ ಮಾತ್ರವಲ್ಲದೆ ದಕ್ಷಿಣ ರಾಜ್ಯಗಳೂ ಈ ಯೋಜನೆಯ ನಿಲುವು ಸರಿಯಾಗಿಲ್ಲ ಎಂದು ಸಹಿ ಹಾಕಲು ಒಪ್ಪಿಲ್ಲ. ಹೀಗೆ ಕೆಲವು ರಾಜ್ಯಗಳ ಅನುಮತಿ ಇಲ್ಲದೆಯೂ ಕೇಂದ್ರ ಸರ್ಕಾರವು ಯೋಜನೆಯನ್ನು ಜಾರಿಗೆ ತರುತ್ತಿರುವುದು ಸರಿಯಲ್ಲ. ಅಲ್ಲದೆ ಈ ಯೋಜನೆ ಪ್ರಕೃತಿಗೆ ವಿರುದ್ಧವಾಗಿದೆ. ಅವೈಜ್ಞಾನಿಕವಾಗಿ ನದಿಗಳನ್ನು ಜೋಡಿಸುವುದರಿಂದ ಅಪಾರ ಪ್ರಮಾಣದಲ್ಲಿ ಅರಣ್ಯ ನಾಶವಾಗಲಿದೆ. ಇಷ್ಟಿದ್ದರೂ ಪ್ರಧಾನಿ ನರೇಂದ್ರ ಮೋದಿಯವರು ಮಧ್ಯಪ್ರದೇಶದ ಕೆನ್ ಮತ್ತು ಬೇತ್ವಾ ನದಿಗಳ ಜೋಡಣೆಯನ್ನು ಕಾರ್ಯರೂಪಕ್ಕೆ ತರುತ್ತಿದ್ದಾರೆ. ಈ ಯೋಜನೆಯನ್ನು ಕೂಡಲೇ ನಿಲ್ಲಿಸಿ ನದಿಗಳ ಸ್ವಚ್ಛತೆ ಕಾಪಾಡುವತ್ತ ಸರ್ಕಾರ ಗಮನಹರಿಸಲಿ.
-ಜಿ.ಬಿನಿತಾ, ಕಲಬುರಗಿ.
ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…
ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…
ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…
ಪಂಜು ಗಂಗೊಳ್ಳಿ ಅವರ ವಾರದ ಅಂಕಣ ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…
ಕೇಶವ್ ಜೆಎಸ್ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯಿಂದ ಅಚ್ಚರಿಯ ಸಂಶೋಧನೆ! ಮೈಸೂರು: ಬಸವನಹುಳುಗಳನ್ನು ಜಮೀನುಗಳಲ್ಲಿ ರೈತರು ನೋಡಿದರೆ, ನಮ್ಮ…
ಕೆ.ಬಿ.ರಮೇಶನಾಯಕ ನಮೂನೆ-೬ ಸಲ್ಲಿಸಿ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಇನ್ನೂ ಇದೆ ಅವಕಾಶ ಮೈಸೂರು: ಮುಂಬರುವ ವಿಧಾನಸಭೆ, ಲೋಕಸಭಾ ಚುನಾವಣೆಗೂ…