ಓದುಗರ ಪತ್ರ
‘ನದಿ ಜೋಡಣೆ’ ಯೋಜನೆಗೆ ಸಾಕಷ್ಟು ವಿರೋಧಗಳು ಕೇಳಿಬರುತ್ತಿದ್ದರೂ ಯಾವುದನ್ನೂ ಲೆಕ್ಕಿಸದೆ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಈ ಯೋಜನೆಯನ್ನು ಮುಂದುವರಿಸುತ್ತಿರುವುದು ಸಮಂಜಸವಲ್ಲ.
ಈ ಹಿಂದೆಯೂ ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಗೋದಾವರಿನದಿ ನೀರು ಪೂರೈಸುವುದಾಗಿ ಹೇಳಿ ಕಡಿಮೆ ಪ್ರಮಾಣದ ನೀರನ್ನು ಹಂಚಿಕೆ ಮಾಡಿತ್ತು. ನೀರು ಹಂಚಿಕೆ ವಿಚಾರದಲ್ಲಿ ಆಗಿರುವ ಈ ಅನ್ಯಾಯವನ್ನು ಗಮನದಲ್ಲಿಟ್ಟುಕೊಂಡು ರಾಜ್ಯ ಸರ್ಕಾರ ಕೇಂದ್ರ ಸರ್ಕಾರದ ನದಿ ಜೋಡಣೆ ಯೋಜನೆಗೆ ಸಹಿ ಹಾಕಲು ನಿರಾಕರಿಸಿದೆ. ಕರ್ನಾಟಕ ಮಾತ್ರವಲ್ಲದೆ ದಕ್ಷಿಣ ರಾಜ್ಯಗಳೂ ಈ ಯೋಜನೆಯ ನಿಲುವು ಸರಿಯಾಗಿಲ್ಲ ಎಂದು ಸಹಿ ಹಾಕಲು ಒಪ್ಪಿಲ್ಲ. ಹೀಗೆ ಕೆಲವು ರಾಜ್ಯಗಳ ಅನುಮತಿ ಇಲ್ಲದೆಯೂ ಕೇಂದ್ರ ಸರ್ಕಾರವು ಯೋಜನೆಯನ್ನು ಜಾರಿಗೆ ತರುತ್ತಿರುವುದು ಸರಿಯಲ್ಲ. ಅಲ್ಲದೆ ಈ ಯೋಜನೆ ಪ್ರಕೃತಿಗೆ ವಿರುದ್ಧವಾಗಿದೆ. ಅವೈಜ್ಞಾನಿಕವಾಗಿ ನದಿಗಳನ್ನು ಜೋಡಿಸುವುದರಿಂದ ಅಪಾರ ಪ್ರಮಾಣದಲ್ಲಿ ಅರಣ್ಯ ನಾಶವಾಗಲಿದೆ. ಇಷ್ಟಿದ್ದರೂ ಪ್ರಧಾನಿ ನರೇಂದ್ರ ಮೋದಿಯವರು ಮಧ್ಯಪ್ರದೇಶದ ಕೆನ್ ಮತ್ತು ಬೇತ್ವಾ ನದಿಗಳ ಜೋಡಣೆಯನ್ನು ಕಾರ್ಯರೂಪಕ್ಕೆ ತರುತ್ತಿದ್ದಾರೆ. ಈ ಯೋಜನೆಯನ್ನು ಕೂಡಲೇ ನಿಲ್ಲಿಸಿ ನದಿಗಳ ಸ್ವಚ್ಛತೆ ಕಾಪಾಡುವತ್ತ ಸರ್ಕಾರ ಗಮನಹರಿಸಲಿ.
-ಜಿ.ಬಿನಿತಾ, ಕಲಬುರಗಿ.
‘ಸಂಚಾರ ನಿಯಂತ್ರಣ ಪೊಲೀಸರ ಆದ್ಯ ಕರ್ತವ್ಯ ಆಗಲಿ’ ಪಿ.ಜೆ.ರಾಘವೇಂದ್ರ, ನ್ಯಾಯವಾದಿ, ಮೈಸೂರು ಬೆಂಗಳೂರಿನ ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತರ…
ಕೆ.ಬಿ.ಶಂಶುದ್ಧೀನ್ ನಿರೀಕ್ಷಿತ ಪ್ರಮಾಣದಲ್ಲಿ ಬೀಳದ ಮಳೆ; ರೈತರಲ್ಲಿ ಹೆಚ್ಚಿದ ಆತಂಕ ಕುಶಾಲನಗರ: ಮುಂಗಾರು ಮಳೆ ಕೊರತೆಯಿಂದ ಕೊಡಗು ಜಿಲ್ಲೆಯ ಹಾರಂಗಿ…
ಹಳ್ಳದ ನೀರನ್ನೇ ಸೇವಿಸುತ್ತಿರುವ ನಿವಾಸಿಗಳು; ಅಧಿಕಾರಿಗಳು, ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ಆಕ್ರೋಶ ಹನೂರು: ತಾಲ್ಲೂಕಿನ ಕಾಡಂಚಿನ ಮೀಣ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ…
ಬೋಧಿಸಬೇಕೆಂದರೆ ಪುಸ್ತಕ ಕೊಂಡೊಯ್ಯುವ ಅನಿವಾರ್ಯತೆ ಮೈಸೂರು: ರಾಜ್ಯದ ಸರ್ಕಾರಿ ಶಾಲೆಗಳ ಆರಂಭದಿಂದಲೇ ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕ ವಿತರಿಸಲಾಗುತ್ತಿದೆ. ಪ್ರತಿವರ್ಷ ಸಾಮಾನ್ಯವಾಗಿ…
ಲಖನೌ: ಉತ್ತರ ಪ್ರದೇಶದ ಅಲಿಗಂಜ್ನಲ್ಲಿರುವ ಮೂರು ಅಂತಸ್ತಿನ ವಾಣಿಜ್ಯ ಕಟ್ಟಡವೊಂದರಲ್ಲಿ ಭಾರೀ ಅಗ್ನಿ ದುರಂತ ಸಂಭವಿಸಿದ್ದು, ಕನಿಷ್ಠ 15 ವಿದ್ಯಾರ್ಥಿಗಳು…