ಓದುಗರ ಪತ್ರ
ಜಾನಪದ ತವರೂರಾದ ಚಾಮರಾಜನಗರದ ನಂದಿ ಭವನ ರಸ್ತೆಯ ಖಾಸಗಿ ಬಸ್ ನಿಲ್ದಾಣದ ಸಮೀಪವಿರುವ ಮೋರಿ (ಡ್ರೈನೇಜ್)ಯಲ್ಲಿ ಸ್ವಚ್ಛತೆ ಇಲ್ಲದೆ ತ್ಯಾಜ್ಯ ನೀರು ನಿಂತು ದುರ್ನಾತ ಬೀರುತ್ತಿದೆ. ಪ್ಲಾಸ್ಟಿಕ್ ಕವರ್ಗಳು ಸೇರಿ ಇನ್ನಿತರ ತ್ಯಾಜ್ಯ,ಕಸ ಕಡ್ಡಿಗಳು ಮೋರಿಯಲ್ಲಿ ಬಿದ್ದು ತುಂಬಾ ಕೆಟ್ಟ ವಾಸನೆ ಬರುತ್ತಿರುವುದು ಒಂದೆಡೆಯಾದರೆ, ಚಾಮರಾಜನಗರದ ವಿವಿಧ ಸ್ಥಳಗಳ ಕೆಲ ಮೋರಿಗಳು ಹಾಗೂ ಮೋರಿ ಪಕ್ಕದಲ್ಲಿಯೂ ವಿಪರೀತ ಪ್ರಮಾಣದ ಪ್ಲಾಸ್ಟಿಕ್ ಕವರ್ಗಳು ಮತ್ತು ಕಸವನ್ನು ಹಾಕುತ್ತಿರುವುದರಿಂದ ನಗರದಲ್ಲಿ ಸ್ವಚ್ಛತೆಯೇ ಇಲ್ಲದಂತಾಗಿದೆ. ಜೊತೆಗೆ ನಗರದ ಸೌಂದರ್ಯವೂ ಹಾಳಾಗುತ್ತಿರುವುದರಿಂದ ಸಾರ್ವಜನಿಕರು, ವಿದ್ಯಾರ್ಥಿಗಳು, ಮಹಿಳೆಯರು, ಹಿರಿಯ ನಾಗರಿಕರು ಹಾಗೂ ಮಕ್ಕಳು ಸಾಂಕ್ರಾಮಿಕ ರೋಗ – ರುಜಿನಗಳು ಹರಡುವ ಭೀತಿಯಿಂದಲೇ ಬದುಕುವಂತಾಗಿದೆ. ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಚಾಮರಾಜನಗರದ ಜನಪ್ರತಿನಿಧಿಗಳು, ಜಿಲ್ಲಾಧಿಕಾರಿಗಳು, ಆರೋಗ್ಯ ಇಲಾಖೆ ಅಧಿಕಾರಿಗಳು, ನಗರಸಭೆ ಆಡಳಿತ ಕೂಡಲೇ ಸಾರ್ವಜನಿಕರಲ್ಲಿ ಸ್ವಚ್ಛತೆಯೊಂದಿಗೆ ನಗರದ ಸೌಂದರ್ಯ ಕಾಪಾಡಲು ಜಾಗೃತಿ ಮೂಡಿಸುವ ಮೂಲಕ, ಜಿಲ್ಲಾ ಕೇಂದ್ರದ ಘನತೆಯನ್ನು ಉಳಿಸಲು ಮುಂದಾಗಬೇಕೆಂದು ಮನವಿ.
-ನಾಗೇಶ್, ಮಾನಸಗಂಗೋತ್ರಿ ಮೈಸೂರು
ಕೋಟಿ ಕೋಟಿ ಹಣವಿದ್ದರೂ ನೆಮ್ಮದಿಯ ಸಂಬಂಧಗಳು ಇಲ್ಲದಿದ್ದರೆ ಜೀವನ ನಿರರ್ಥಕ. ಐಷಾರಾಮಿ ಬದುಕು ಎಂಬುದು ಸೌಕರ್ಯಗಳನ್ನು ನೀಡಬಲ್ಲದೇ ಹೊರತು, ಶಾಶ್ವತ…
ಹಿರಿಯ ನಟಿ, ನಿರ್ಮಾಪಕಿ, ಮಾಜಿ ಸಚಿವೆ ಡಾ.ಜಯಮಾಲ ಅವರು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷರಾಗಿ ೨ನೇ ಬಾರಿಗೆ ಆಯ್ಕೆಯಾಗಿರುವುದು…
ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ್ ಜೋಶಿ ವಿರುದ್ಧ ಕನ್ನಡ ಸಾಹಿತ್ಯ ಪರಿಷತ್ನಲ್ಲಿ ಕಳೆದ ಮೂರು ವರ್ಷಗಳಿಂದ ನಡೆದಿರುವ ಅಧಿಕಾರ…
ಹೇಮಂತ್ ಕುಮಾರ್ ಕಾಶಿ ನಂತರ ಸ್ಮಶಾನವಾಸಿ ಶಿವನ ದೇವಸ್ಥಾನವೆಂಬ ಹೆಗ್ಗಳಿಕೆ ಮಂಡ್ಯ: ದೇಶದಲ್ಲೇ ಭಸ್ಮೋದ್ಧಾರಿಯಾದ ಶಿವ ಸ್ಮಶಾನವಾಸಿಯಾಗಿರುವ ದೇವಾಲಯ ಕಾಶಿ…
ನವೀನ್ ಡಿಸೋಜ ವೈದ್ಯಕೀಯ ಶಿಕ್ಷಣ ಇಲಾಖೆ ಆಡಳಿತಕ್ಕೊಳಪಟ್ಟ ಬಳಿಕ ಸೇವೆಯೊಂದಿಗೆ ಶುಲ್ಕವೂ ಹೆಚ್ಚಳ; ಪ್ರತಿಯೊಂದು ಸೇವೆಗೂ ಪಾವತಿ ಮಾಡಬೇಕಾದ ಅನಿವಾರ್ಯತೆ …
ಮಹದೇಶ್ ಎಂ.ಗೌಡ ಹನೂರು ತಾಲ್ಲೂಕಿನ ಹಲವು ಶಾಲೆಗಳಲ್ಲಿ ದುರಸ್ತಿಗೆ ಬಂದಿರುವ, ವಿಮೆ ಇಲ್ಲದ ವಾಹನಗಳ ಬಳಕೆ; ಸಾರ್ವಜನಿಕರಲ್ಲಿ ಆತಂಕ ಹನೂರು:…