ಓದುಗರ ಪತ್ರ
ಜಾನಪದ ತವರೂರಾದ ಚಾಮರಾಜನಗರದ ನಂದಿ ಭವನ ರಸ್ತೆಯ ಖಾಸಗಿ ಬಸ್ ನಿಲ್ದಾಣದ ಸಮೀಪವಿರುವ ಮೋರಿ (ಡ್ರೈನೇಜ್)ಯಲ್ಲಿ ಸ್ವಚ್ಛತೆ ಇಲ್ಲದೆ ತ್ಯಾಜ್ಯ ನೀರು ನಿಂತು ದುರ್ನಾತ ಬೀರುತ್ತಿದೆ. ಪ್ಲಾಸ್ಟಿಕ್ ಕವರ್ಗಳು ಸೇರಿ ಇನ್ನಿತರ ತ್ಯಾಜ್ಯ,ಕಸ ಕಡ್ಡಿಗಳು ಮೋರಿಯಲ್ಲಿ ಬಿದ್ದು ತುಂಬಾ ಕೆಟ್ಟ ವಾಸನೆ ಬರುತ್ತಿರುವುದು ಒಂದೆಡೆಯಾದರೆ, ಚಾಮರಾಜನಗರದ ವಿವಿಧ ಸ್ಥಳಗಳ ಕೆಲ ಮೋರಿಗಳು ಹಾಗೂ ಮೋರಿ ಪಕ್ಕದಲ್ಲಿಯೂ ವಿಪರೀತ ಪ್ರಮಾಣದ ಪ್ಲಾಸ್ಟಿಕ್ ಕವರ್ಗಳು ಮತ್ತು ಕಸವನ್ನು ಹಾಕುತ್ತಿರುವುದರಿಂದ ನಗರದಲ್ಲಿ ಸ್ವಚ್ಛತೆಯೇ ಇಲ್ಲದಂತಾಗಿದೆ. ಜೊತೆಗೆ ನಗರದ ಸೌಂದರ್ಯವೂ ಹಾಳಾಗುತ್ತಿರುವುದರಿಂದ ಸಾರ್ವಜನಿಕರು, ವಿದ್ಯಾರ್ಥಿಗಳು, ಮಹಿಳೆಯರು, ಹಿರಿಯ ನಾಗರಿಕರು ಹಾಗೂ ಮಕ್ಕಳು ಸಾಂಕ್ರಾಮಿಕ ರೋಗ – ರುಜಿನಗಳು ಹರಡುವ ಭೀತಿಯಿಂದಲೇ ಬದುಕುವಂತಾಗಿದೆ. ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಚಾಮರಾಜನಗರದ ಜನಪ್ರತಿನಿಧಿಗಳು, ಜಿಲ್ಲಾಧಿಕಾರಿಗಳು, ಆರೋಗ್ಯ ಇಲಾಖೆ ಅಧಿಕಾರಿಗಳು, ನಗರಸಭೆ ಆಡಳಿತ ಕೂಡಲೇ ಸಾರ್ವಜನಿಕರಲ್ಲಿ ಸ್ವಚ್ಛತೆಯೊಂದಿಗೆ ನಗರದ ಸೌಂದರ್ಯ ಕಾಪಾಡಲು ಜಾಗೃತಿ ಮೂಡಿಸುವ ಮೂಲಕ, ಜಿಲ್ಲಾ ಕೇಂದ್ರದ ಘನತೆಯನ್ನು ಉಳಿಸಲು ಮುಂದಾಗಬೇಕೆಂದು ಮನವಿ.
-ನಾಗೇಶ್, ಮಾನಸಗಂಗೋತ್ರಿ ಮೈಸೂರು
ಶಾಲಾ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಹೊಸದಾಗಿ ೮೦೦ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯಲು…
ರಾಜ್ಯಾದ್ಯಂತ ಸರ್ಕಾರಿ ಶಾಲೆಗಳು ಮೇ ೨೯ರಂದು ಪ್ರಾರಂಭವಾಗುತ್ತಿವೆ. ಸರ್ಕಾರಿ ಶಾಲೆಗಳಲ್ಲಿ ರಾಜ್ಯ ಸರ್ಕಾರ ಪ್ರತೀ ವರ್ಷ ಮಕ್ಕಳಿಗೆ ಉಚಿತ ಪಠ್ಯಪುಸ್ತಕ,…
ಕೆಲ ದಿನಗಳ ಹಿಂದಷ್ಟೇ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಚಿತ್ರನಟ ಜೋಸೆಫ್ ವಿಜಯ್ ಅವರು, ಸಾರ್ವಜನಿಕರಿಗೆ ತೊಂದರೆಯಾಗದಂತೆ ಒಂದೇ ರಸ್ತೆಯಲ್ಲಿ…
ನವೀನ್ ಡಿಸೋಜ ವಿಪತ್ತು ರಕ್ಷಣಾ ಕಾರ್ಯಾಚರಣೆಯ ಅಣಕು ಪ್ರದರ್ಶನ; ಸಂತ್ರಸ್ತರನ್ನು ರಕ್ಷಿಸುವ ವಿಧಾನ, ದೋಣಿ ಮೋಟಾರ್ಗಳನ್ನು ಚಾಲನೆ ಮಾಡುವ ಬಗ್ಗೆ…
ಬಾಪೂಜಿ ಮತ್ತು ವಾಜಪೇಯಿ ದಾರಿ ಬೇರೆಯಾಗಿದ್ದರೂ ನೈತಿಕತೆಗೆ ಮಾದರಿಯಾಗಿದ್ದರು ರಾಜೀವ ಹೆಗಡೆ ಗಾಂಧೀಜಿ ಕ್ವಿಟ್ ಇಂಡಿಯಾ ಚಳವಳಿ ಆರಂಭಿ ಸಿದಾಗ…
ಸುಧಾರಣೆ ನೆಪದಲ್ಲಿ ಎಚ್ಚರ ತಪ್ಪಿದೆ. ಪ್ರೌಢಶಾಲೆಯಲ್ಲಿ ನನಗೆ ಆಪ್ತ ಸ್ನೇಹಿತರು ಬಹಳ ಕಡಿಮೆಯಿದ್ದರು. ಅಲ್ಲಿ ಬೇರೆ ಬೇರೆ ಕಾಲದಲ್ಲಿ ನನಗೆ…