Andolana originals

ಓದುಗರ ಪತ್ರ: ಗಬ್ಬು ನಾರುತ್ತಿರುವ ಚಾ.ನಗರದ ಮೋರಿಗಳು

ಜಾನಪದ ತವರೂರಾದ ಚಾಮರಾಜನಗರದ ನಂದಿ ಭವನ ರಸ್ತೆಯ ಖಾಸಗಿ ಬಸ್ ನಿಲ್ದಾಣದ ಸಮೀಪವಿರುವ ಮೋರಿ (ಡ್ರೈನೇಜ್)ಯಲ್ಲಿ ಸ್ವಚ್ಛತೆ ಇಲ್ಲದೆ ತ್ಯಾಜ್ಯ ನೀರು ನಿಂತು ದುರ್ನಾತ ಬೀರುತ್ತಿದೆ. ಪ್ಲಾಸ್ಟಿಕ್ ಕವರ್‌ಗಳು ಸೇರಿ ಇನ್ನಿತರ ತ್ಯಾಜ್ಯ,ಕಸ ಕಡ್ಡಿಗಳು ಮೋರಿಯಲ್ಲಿ ಬಿದ್ದು ತುಂಬಾ ಕೆಟ್ಟ ವಾಸನೆ ಬರುತ್ತಿರುವುದು ಒಂದೆಡೆಯಾದರೆ, ಚಾಮರಾಜನಗರದ ವಿವಿಧ ಸ್ಥಳಗಳ ಕೆಲ ಮೋರಿಗಳು ಹಾಗೂ ಮೋರಿ ಪಕ್ಕದಲ್ಲಿಯೂ ವಿಪರೀತ ಪ್ರಮಾಣದ ಪ್ಲಾಸ್ಟಿಕ್ ಕವರ್‌ಗಳು ಮತ್ತು ಕಸವನ್ನು ಹಾಕುತ್ತಿರುವುದರಿಂದ ನಗರದಲ್ಲಿ ಸ್ವಚ್ಛತೆಯೇ ಇಲ್ಲದಂತಾಗಿದೆ. ಜೊತೆಗೆ ನಗರದ ಸೌಂದರ್ಯವೂ ಹಾಳಾಗುತ್ತಿರುವುದರಿಂದ ಸಾರ್ವಜನಿಕರು, ವಿದ್ಯಾರ್ಥಿಗಳು, ಮಹಿಳೆಯರು, ಹಿರಿಯ ನಾಗರಿಕರು ಹಾಗೂ ಮಕ್ಕಳು ಸಾಂಕ್ರಾಮಿಕ ರೋಗ – ರುಜಿನಗಳು ಹರಡುವ ಭೀತಿಯಿಂದಲೇ ಬದುಕುವಂತಾಗಿದೆ. ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಚಾಮರಾಜನಗರದ ಜನಪ್ರತಿನಿಧಿಗಳು, ಜಿಲ್ಲಾಧಿಕಾರಿಗಳು, ಆರೋಗ್ಯ ಇಲಾಖೆ ಅಧಿಕಾರಿಗಳು, ನಗರಸಭೆ ಆಡಳಿತ ಕೂಡಲೇ ಸಾರ್ವಜನಿಕರಲ್ಲಿ ಸ್ವಚ್ಛತೆಯೊಂದಿಗೆ ನಗರದ ಸೌಂದರ್ಯ ಕಾಪಾಡಲು ಜಾಗೃತಿ ಮೂಡಿಸುವ ಮೂಲಕ, ಜಿಲ್ಲಾ ಕೇಂದ್ರದ ಘನತೆಯನ್ನು ಉಳಿಸಲು ಮುಂದಾಗಬೇಕೆಂದು ಮನವಿ.

-ನಾಗೇಶ್, ಮಾನಸಗಂಗೋತ್ರಿ ಮೈಸೂರು

ಆಂದೋಲನ ಡೆಸ್ಕ್

Recent Posts

ಎರಡನೇ ಆಷಾಢ ಶುಕ್ರವಾರದ ಸಂಭ್ರಮ: ಲಕ್ಷ್ಮೀ ಅಲಂಕಾರದಲ್ಲಿ ಕಂಗೊಳಿಸುತ್ತಿರುವ ತಾಯಿ ಚಾಮುಂಡೇಶ್ವರಿ

ಮೈಸೂರು: ಆಷಾಢ ಮಾಸದ ಎರಡನೇ ಶುಕ್ರವಾರವಾದ ಇಂದು ನಾಡ ಅಧಿದೇವತೆ ನೆಲೆಸಿರುವ ಚಾಮುಂಡಿಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿ ಲಕ್ಷ್ಮೀ ಅಲಂಕಾರದಲ್ಲಿ ಕಂಗೊಳಿಸುತ್ತಿದ್ದಾಳೆ.…

13 hours ago

ಓದುಗರ ಪತ್ರ: ವಿದ್ಯಾರ್ಥಿಗಳ ಮೇಲೆ ಲಾಠಿ ಪ್ರಹಾರ ಖಂಡನೀಯ

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ದಿಲ್ಲಿಯಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆ ವೇಳೆ ಕೇಂದ್ರ ಸರ್ಕಾರದ ಕುಮ್ಮಕ್ಕು ಹಾಗೂ ಪೊಲೀಸರ…

16 hours ago

ಓದುಗರ ಪತ್ರ: ಗ್ರಂಥಪಾಲಕರಿಲ್ಲದ ಗ್ರಂಥಾಲಯಗಳು

ಕಳೆದ ೨೫ ವರ್ಷಗಳಿಂದ ರಾಜ್ಯದಲ್ಲಿ ೧೦ ಸಾವಿರ ಗ್ರಂಥಪಾಲಕ ಹುದ್ದೆಗಳನ್ನು ಭರ್ತಿ ಮಾಡದಿರುವುದು ಸರ್ಕಾರದ ಅಕ್ಷಮ್ಯ ನಿರ್ಲಕ್ಷ್ಯ. ೧,೨೦೦ ಸರ್ಕಾರಿ…

16 hours ago

ಓದುಗರ ಪತ್ರ: ಮುಚ್ಚಿರುವ ಪಿಎಚ್‌ಸಿ ಕೇಂದ್ರ ತೆರೆಯುವುದು ಎಂದು?

ಮೈಸೂರಿನ ಕುವೆಂಪು ನಗರದ ಎಂ ಬ್ಲಾಕ್‌ನಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರವು, ಕಳೆದ ಮೂರು ತಿಂಗಳಿಂದ ಮುಚ್ಚಿದೆ. ಇದಕ್ಕೆ ಕಾರಣ ತಿಳಿದಿಲ್ಲ.…

16 hours ago

ಇದು ನಮಿತ್ ಮಲ್ಹೋತ್ರ ‘ರಾಮಾಯಣ’ ದರ್ಶನ

 ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ  ‘ತಿಣಿಕಿದನು -ಣಿರಾಯ ರಾಮಾಯಣದ ಕವಿಗಳ ಭಾರದಲಿ ತಿಂ ತಿಣೀಯ ರಘುವರ ಚರಿತೆಯಲಿ ಕಾಲಿಡಲು ತೆರಪಿಲ್ಲ’ ಎಂದು…

16 hours ago

ಮಡಿಕೇರಿಯಲ್ಲಿ ಬಳಂಜಿಗಿಲ್ಲ ಬೇಡಿಕೆ

ಪುನೀತ್ ಜಿಲ್ಲೆಯಲ್ಲಿ ಕ್ಷೀಣಿಸಿದ ಮಳೆಯಿಂದ ಬೇಡಿಕೆ ಕುಸಿತ; ಕುಲಕಸುಬಿಗೆ ಹೊಡೆತ  ಮಡಿಕೇರಿ: ಜಿಲ್ಲೆಯಲ್ಲಿ ಧಾರಾಕಾರ ಮಳೆಯ ವಾತಾವರಣ ಇಲ್ಲದ ಕಾರಣ…

16 hours ago